ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ನಗರದ ಬಸ್ ನಿಲ್ದಾಣ ಬಳಿ ಎರಡು ಬಸ್’ಗಳ ನಡುವೆ ಆಟೋ ಸಿಲುಕಿ ಅಪ್ಪಚ್ಚಿಯಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಟೋಗೆ ಹಿಂಭಾಗದಿಂದ ಬಂದ ಖಾಸಗಿ ಬಸ್ ಡಿಕ್ಕಿಯಾಗಿ ಮುಂದೆ ತೆರಳುತ್ತಿದ್ದ ಸಾರಿಗೆ ಬಸ್’ಗೆ ಅಪ್ಪಳಿಸಿದೆ. ಇದರಿಂದ ಎರಡು ಬಸ್’ಗಳ ನಡುವೆ ಆಟೋ ಸಿಲುಕಿದೆ. ಪರಿಣಾಮ ಆಟೋ ಚಾಲಕ ಸೇರಿದಂತೆ ಐವರಿಗೆ ಗಂಭೀರ ಗಾಯಗಳಾಗಿವೆ.
ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಾಯಾಳುಗಳನ್ನು ಚಿತ್ರದುರ್ಗ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬAಧ ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post