ಕಲ್ಪ ಮೀಡಿಯಾ ಹೌಸ್
ಚಿತ್ರದುರ್ಗ: ಕೋವಿಡ್ ಎರಡನೇ ಅಲೆ ಆತಂಕದಲ್ಲೇ ಜಿಲ್ಲೆಯ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರ ಸ್ವಾಮಿ ದೊಡ್ಡ ರಥೋತ್ಸವ ಸಂಪ್ರದಾಯಬದ್ಧವಾಗಿ ಸರಳವಾಗಿ ನಡೆಯಿತು.
ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಜಾತ್ರೆಗೆ ಮುನ್ನ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹಾಗೂ ಎಸ್ಪಿ ಜಿ.ರಾಧಿಕಾ ಗ್ರಾಮಸ್ಥರ ಜತೆ ಸಭೆ ನಡೆಸಿ, ಕೋವಿಡ್ ತೀವ್ರತೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹಾಗೂ ಎಸ್ಪಿ ಜಿ.ರಾಧಿಕಾ ಅವರ ಸೂಚನೆಯಂತೆ ಪೊಲೀಸ್ ಇಲಾಖೆ ಹಾಗೂ ಡಿಎಚ್ಒ ಡಾ.ಸಿ.ಎಲ್. ಫಾಲಾಕ್ಷ ನೇತೃತ್ವದ ಆರೋಗ್ಯ ಇಲಾಖೆ ತಂಡ ಕೊಂಚ ಹೆಚ್ಚಾಗಿ ಮುಂಜಾಗ್ರತೆ ವಹಿಸಿತು. ರಥ ಸಾಗುತ್ತಿದ್ದ ಮಾರ್ಗದಲ್ಲೂ ಇಡೀ ತಂಡ ಸಾಗುತ್ತಾ ಮಾಸ್ಕ್ ಧರಿಸಲು ಸೂಚಿಸುತ್ತಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post