ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಬೋವಿ ಸಮಾಜದ ತಾಲ್ಲೂಕು ಕಾರ್ಯದರ್ಶಿ ಕಮ್ಮತ್ ಮರಿಕುಂಟೆ ಹೆಚ್. ಆಂಜನೇಯ ಅವರಿಗೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ಹಿರಿಯ ಪತ್ರಕರ್ತ ರಮೇಶ ಸುರ್ವೆ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರವಾಸಿ ಉತ್ಸವ 2021 ಮತ್ತು ವಿಜಯನಗರ ಕರ್ನಾಟಕ ದ್ವೀತಿಯ ಸಾಂಸ್ಕೃತಿಕ ಸಮ್ಮೇಳನದಲ್ಲಿ ಕಲ್ಯಾಣ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಮ್ಮತ್ ಮರಿಕುಂಟೆ ಹೆಚ್. ಆಂಜನೇಯ ಇವರಿಗೆ ಚಳ್ಳಕೆರೆ ಕಾರ್ಯನಿರತ ಪತ್ರಕರ್ತರ ಕಚೇರಿಯಲ್ಲಿ ಸಂಘದ ವತಿಯಿಂದ ಸನ್ಮಾನಿಸಿ, ಅಭಿನಂದಿಸಲಾಯಿತು.
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ. ಈಶ್ವರಪ್ಪ ಮಾತನಾಡಿ, ರಮೇಶ್ ಸುರ್ವೆ ಅವರು ಪತ್ರಕರ್ತರಾಗಿ ಚಲನಚಿತ್ರ ನಿದೇರ್ಶಕರಾಗಿ ಸೇವೆಯಲ್ಲಿ ತನ್ನನ್ನ ತಾನು ತೋಡಗಿಸಿಕೊಂಡು ಸುರ್ವೆ ಕಲ್ಚರಲ್ ಅಕಾಡೆಮಿ ಸಂಸ್ಥೆಯನ್ನು ಪ್ರಾರಂಭಿಸಿ ಇದರ ಮುಖೇನ ರಾಜ್ಯದಲ್ಲಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಕಲ್ಯಾಣ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸುವಂತಹ ಕಾರ್ಯ ಮಾಡುತ್ತಾ ಬರುತ್ತಿರುವುದು ಶ್ಲಾಘನೀಯ ಎಂದರು.
ಈ ಸಮಯದಲ್ಲಿ ಸುರ್ವೇ ಕಲ್ಚರ್ ಅಕಾಡಮಿ ಜಿಲ್ಲಾಧ್ಯಕ್ಷ ಹಾಗೂ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಡಿ. ವೀರಣ್ಣ, ದ್ಯಾಮರಾಜ, ಕಾರ್ಯರತ ಸದಸ್ಯರಾದ ಜಾಲಿ ಮಂಜು, ಆರ್. ಸತೀಶಕುಮಾರ್, ಸುರೇಶಬೆಳಗೆರೆ, ಮಂಜುನಾಥ, ಕರ್ನಾಟಕ ಅಕಾಡೆಮಿ ಮಾಜಿ ಸದಸ್ಯ ಪಿ.ತಿಪ್ಪೇಸ್ವಾಮಿ, ನಜೀರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post