ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮುರುಘಾಮಠದ ಡಾ. ಶಿವಮೂರ್ತಿ ಶರಣರನ್ನು Dr. Shivamurthy Swamiji ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.
ಧಾರವಾಡದಿಂದ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದ ಸ್ವಾಮೀಜಿಯನ್ನು ಹಾವೇರಿ ಜಿಲ್ಲೆಯ ಬಂಕಾಪುರ ಬಳಿ ಬಂಧಿಸಿ ಮುರುಘಾಮಠಕ್ಕೆ ಪೊಲೀಸರು ಕರೆದೊಯ್ಯುತ್ತಿದ್ದಾರೆ ಎಂದು ವರದಿಯಾಗಿದೆ.
ಆರೋಪದ ಹಿನ್ನೆಲೆಯಲ್ಲಿ ಸ್ವಾಮೀಜಿ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಎಚ್ಚೆತ್ತಿದ್ದ ಪೊಲೀಸರು ಸ್ವಾಮೀಜಿ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದರು. ಖಚಿತ ಮಾಹಿತಿ ಆಧರಿಸಿ ಹಾವೇರಿ ಪೊಲೀಸರ ಸಹಕಾರದಲ್ಲಿ ಸ್ವಾಮೀಜಿಯವರನ್ನು ವಶಕ್ಕೆ ಪಡೆದಿರುವ ಚಿತ್ರದುರ್ಗ ಪೊಲೀಸರು ಅವರನ್ನು ಮಠಕ್ಕೆ ಕರೆದುಕೊಂಡು ಬರುತ್ತಿದ್ದಾರೆ ಎಂದು ವರದಿಯಾಗಿದೆ.
Also read: ಬಿಜೆಪಿ, ಕಾಂಗ್ರೆಸ್ ತೊರೆದು ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ಜೆಡಿಎಸ್ ಸೇರಿದ ಕಾರ್ಯಕರ್ತರು
ಸ್ವಾಮೀಜಿ ಬಂಧನದ ಸುದ್ದಿ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾತನಾಡಿರುವ ಮಠದ ವಕೀಲರು ಹಾಗೂ ಅಧಿಕಾರಿಗಳು ಸ್ವಾಮೀಜಿ ಎಲ್ಲಿಯೂ ಹೋಗಿಲ್ಲ ನಾಪತ್ತೆಯೂ ಆಗಿಲ್ಲ. ಎಲ್ಲಕ್ಕಿಂತ ಪ್ರಮುಖವಾಗಿ ಅವರನ್ನು ಬಂಧಿಸಿಲ್ಲ. ಬದಲಾಗಿ ಹಾವೇರಿಯಲ್ಲಿರುವ ವಕೀಲರ ಭೇಟಿಗೆ ಸ್ವಾಮೀಜಿ ತೆರಳಿದ್ದರು. ಭೇಟಿ ಬಳಿಕ ವಾಪಾಸ್ಸಾಗುತ್ತಿದ್ದಾರೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.
ಸ್ವಾಮೀಜಿ ಬಂಧನದ ವಿಚಾರವನ್ನು ಪೊಲೀಸ್ ಅಧಿಕಾರಿಗಳು ಅಧಿಕೃತ ಘೋಷಣೆ ಮಾಡಿಲ್ಲವಾದರೂ ಹಾವೇರಿಯಿಂದ ಪೊಲೀಸ್ ಭದ್ರತೆಯಲ್ಲಿ ಅವರನ್ನು ಕರೆತರುತ್ತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸ್ವಾಮೀಜಿ ಮಠಕ್ಕೆ ಆಗಮಿಸಿದ ನಂತರವಷ್ಟೇ ಸತ್ಯಾಸತ್ಯತೆ ತಿಳಿದುಬರಬೇಕಿದೆ.
ವರದಿಯಂತೆ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಸ್ವಾಮೀಜಿಗಳು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದರು ಎಂದು ಹೇಳಲಾಗಿದೆ. ಇನ್ನು ಸ್ವಾಮೀಜಿಯವರನ್ನು ಮುರುಘಾಮಠಕ್ಕೆ ಕರೆತರುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಇಲ್ಲಿಗೆ ಧಾವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುರುಘಾಮಠದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post