ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ನಗರದ ಸೋಮಗುದ್ದು ರಸ್ತೆಯ ಕಂದಾಯ ಬಡಾವಣೆಯ ಖಾಲಿ ನಿವೇಶನವೊಂದರಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ಗಳು ಚಲ್ಲಾಪಿಲ್ಲಿಯಾಗಿ ಬಿದ್ದಿರುವ ಘಟನೆ ಬೆಳಕಿಗೆ ಬಂದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಈ ಕುರಿತಂತೆ ಭಗತ್ ಸಿಂಗ್ ಹಿತರಕ್ಷಣಾ ಮತ್ತು ಸಮಗ್ರಾಭಿವೃದ್ಧಿ ಸಮಿತಿ ವತಿಯಿಂದ ತಹಶೀಲ್ದಾರ್ ಎನ್. ರಘುಮೂರ್ತಿ ಅವರಿಗೆ ಮನವಿ ಸಲ್ಲಿಸಲಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರ ದೇಶದ ಹಲವು ಯೋಜನೆಗಳ ಸೌಲಭ್ಯಗಳ ದೇಶದ ಕಟ್ಟಕಡೆಯ ವ್ಯಕ್ತಿಗೂ ಉದ್ದೇಶದಿಂದ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಗಳನ್ನು ಪ್ರತಿ ಎಲ್ಲಾ ಸೌಲಭ್ಯಕ್ಕೂ ಕಡ್ಡಾಯಗೊಳಿಸಿದೆ. ಆದರೆ ಅಧಿಕಾರಿಗಳ ನಿರ್ಲಕ್ಷತನದಿಂದ ಸೋಮಗುದ್ದು ರಸ್ತೆಯ ಕಂದಾಯ ಬಡಾವಣೆಯ ಖಾಲಿ ನಿವೇಶನ ಒಂದರಲ್ಲಿ ಚೆಲ್ಲಾಪಿಲ್ಲಿಯಾಗಿ ರಾಶಿಗಟ್ಟಲೆ ಆಧಾರ್ ಕಾರ್ಡ್ ಗಳು ಬಿದ್ದಿರುವುದು ಬೆಳಕಿಗೆ ಬಂದಿದೆ. ಅಲ್ಲಿ ಆಧಾರ್ ಕಾರ್ಡ್ಗಳು ಬಿದ್ದಿರುವುದನ್ನು ನೋಡಿದರೆ ಏನೋ ಅಕ್ರಮ ನಡೆದಿರುತ್ತದೆ ಎಂಬ ಶಂಕೆ ವ್ಯಕ್ತವಾಗಿದೆ ಎಂದಿದ್ದಾರೆ.
ಈ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ವಿರುದ್ಧ ಪರಿಶೀಲನೆ ಮಾಡಿ ಆಧಾರ ಕಾರ್ಡ್ ಚೆಲ್ಲಾಪಿಲ್ಲಿಯಾಗಿ ಎಸೆದಿರುವ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರಗಿಸಿ ಎಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ರಘುಮೂರ್ತಿ, ವಿಷಯ ತಿಳಿದ ತಕ್ಷಣ ಸಂಬಂಧಪಟ್ಟ ಇಲಾಖೆಗೆ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸಿಗೆ ತಕ್ಕ ಉತ್ತರ ನೀಡದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾದ ಡಿ. ಈಶ್ವರಪ್ಪ, ಪ್ರಧಾನ ಕಾರ್ಯದರ್ಶಿ ಹಾಗೂ ಸಾಹಿತಿ ಟಿ.ಜೆ. ತಿಪ್ಪೇಸ್ವಾಮಿ, ಭಗತ್ ಸಿಂಗ್ ಹಿತರಕ್ಷಣಾ ಮತ್ತು ಸಮಗ್ರ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ್, ಅಧ್ಯಕ್ಷ ತಿಪ್ಪೇಸ್ವಾಮಿ, ಉಪಾಧ್ಯಕ್ಷ ಗಿರೀಶ್, ನಾಗೇಂದ್ರ ನಾಯಕ್, ಕಾನೂನು ಸಲಹಗಾರ ಬೋರ ನಾಯಕ, ಪ್ರಧಾನ ಕಾರ್ಯದರ್ಶಿ ಧನಂಜಯ್, ಪುಟ್ನಂಜ ಸಂಘಟನಾ ಕಾರ್ಯದರ್ಶಿ ರಸುಲ್ ಸದ್ದಾಂ, ಜಗನ್ನಾಥ್, ರಾಕಿ, ಅನಿಲ್ ಹಾಗೂ ಖಜಾಂಚಿ ಚಂದ್ರಪ್ಪ ಹಿತರಕ್ಷಣಾ ವೇದಿಕೆಯ ಸದಸ್ಯರು ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post