ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಹಿರಿಯೂರಿನ ಪಟ್ರಹಳ್ಳಿ ಬಳಿ ಸರಣಿ ಅಪಘಾತದಲ್ಲಿ ಇಬ್ಬರು ದುರ್ಮರಣಕ್ಕೀಡಾಗಿದ್ದು, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದಾಗಿ ಬಸ್ ಇಂಡಿಕಾ ಕಾರು, ಓಮಿನಿ ಕ್ಯಾಂಟರ್ ಟಾಟಾ ಏಸ್ ನಡುವೆ ಸರಣಿ ಅಪಘಾತವಾಗಿದೆ. ಇದರಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಅವರನ್ನು ಹಾವೇರಿ ಮೂಲದ ಲತಾ(28), ಶಶಿಕುಮಾರ್(26) ಎಂದು ಗುರುತಿಸಲಾಗಿದೆ.
ಇನ್ನು ಹಿರೇಕೆರೂರು ಮೂಲದ ಜ್ಯೋತಿ ಕೃತಿ ಹಾಗೂ ಜಾಗೃತಿ ಎಂಬ ಮೂವರಿಗೆ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಎಸ್’ಪಿ ಜಿರಾಧಿಕಾ, ಡಿವೈಎಸ್’ಪಿ ರೋಷನ್ ಜಮೀರ್, ವೃತ್ತ ನಿರೀಕ್ಷಕ ರಾಘವೇಂದ್ರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ವರದಿ: ಸುರೇಶ ಬೆಳಗೆರೆ, ಚಿತ್ರದುರ್ಗ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post