ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ಹಾಗೂ ಚಳ್ಳಕೆರೆ ನಗರದಲ್ಲಿ ಅರೆ ಸೇನಾ ಪಡೆ ಹಾಗೂ ಪೊಲೀಸ್ ಸಿಬ್ಬಂದಿಗಳಿಂದ ಪಥಸಂಚಲನ ನಡೆಸಲಾಯಿತು.
ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ್ ಸಿಇಒ ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಷುರಾಮ್ ಅವರುಗಳ ನೇತೃತ್ವದಲ್ಲಿ ಚಿತ್ರದುರ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಸಲಾಯಿತು.
ಸಿಆರ್’ಪಿಎಫ್ ಯೋಧರು, ಡಿಎಆರ್ ಪೊಲೀಸರು ಹಾಗೂ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಈ ಮೂಲಕ ಶಾಂತಿ, ಸುವ್ಯವಸ್ಥಿತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಸಹಕಾರ ನೀಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಇನ್ನು ಪ್ರಮುಖವಾಗಿ, ಪಥಸಂಚಲನದಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು ಹಾಗೂ ಸಿಆರ್’ಪಿಎಫ್ ಯೋಧರಿಗೆ ಸಾರ್ವಜನಿಕರು ಪುಷ್ಪವೃಷ್ಠಿ ಮಾಡುವ ಮೂಲಕ ಸ್ವಾಗತಿಸಿದ್ದ ವಿಶೇಷವಾಗಿತ್ತು.
Also read: ಅಲೆಮಾರಿ ಸಿದ್ದರಾಮಯ್ಯ ಬಗ್ಗೆ ಏನು ಹೇಳಲಿ? ಶಾಸಕ ಈಶ್ವರಪ್ಪ ವ್ಯಂಗ್ಯ
ಚಳ್ಳಕೆರೆಯಲ್ಲೂ ಪಥಸಂಚಲನ
ಇನ್ನು, ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚಳ್ಳಕೆರೆ ಪಟ್ಟಣದಲ್ಲೂ ಸಹ ಪೊಲೀಸ್ ಇಲಾಖೆ ಹಾಗೂ ಅರೆ ಸೇನಾಪಡೆ ಯೋಧರು ಪಥಸಂಚಲನ ನಡೆಸಿದರು.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಯೋಧರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post