ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕ್ರಿಸ್ಮಸ್ ಹಬ್ಬ ಹಾಗೂ ರಜೆಯ ಹಿನ್ನೆಲೆಯಲ್ಲಿ ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಕಾರಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 1000 ಹೆಚ್ಚುವರಿಯಾಗಿ ಬಸ್ ಸಂಚಾರ ನಡೆಸಲಿದೆ.
ಈ ಕುರಿತಂತೆ ಸಂಸ್ಥೆ ಮಾಹಿತಿ ಪ್ರಕಟಿಸಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಒಟ್ಟು ಮೂರು ದಿನಗಳ ಕಾಲ ಹೆಚ್ಚುವರಿಯಾಗಿ ಬಸ್ ಸಂಚಾರ ನಡೆಸುವುದಾಗಿ ತಿಳಿಸಿದೆ.
ಯಾವತ್ತು ಹೆಚ್ಚುವರಿ ಬಸ್ ಸಂಚಾರ?
ಡಿ.19, 20 ಮತ್ತು 24ರಂದು ಹಾಗೂ ಮರಳುವ ಮಾರ್ಗದಲ್ಲಿ ಡಿ.26 ಹಾಗೂ 28ರಂದು ಹೆಚ್ಚುವರಿಯಾಗಿ 1,000 ಬಸ್’ಗಳು ಸಂಚಾರ ನಡೆಸಲಿವೆ. ಕ್ರಿಸ್ಮಸ್ ಮುಗಿನ ನಂತರವೂ ಸಹ ಎರಡು ದಿನ ವಿಶೇಷ ಬಸ್ ಸಂಚಾರಗಳಿರುತ್ತವೆ.
ಎಲ್ಲೆಲ್ಲಿಗೆ ಹೆಚ್ಚುವರಿ ಬಸ್?
ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್)ದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಬಸ್’ಗಳು ವಿಶೇಷ ಕಾರ್ಯಾಚರಣೆ ನಡೆಸಲಿವೆ. ಮೈಸೂರು ರಸ್ತೆ ಬಸ್ ನಿಲ್ದಾಣ (ಸ್ಯಾಟಲೈಟ್)ದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ.
ಯಾವೆಲ್ಲಾ ಬಸ್’ಗಳು?
ಸಾಮಾನ್ಯ ಸಾರಿಗೆ, ಐರಾವತ ಹಾಗೂ ಸ್ಲೀಪರ್ ಕೋಚ್ ಸೇರಿದಂತೆ ಎಲ್ಲಾ ಐಷಾರಾಮಿ ಬಸ್’ಗಳ ವ್ಯವಸ್ಥೆ.
ದೊರೆಯಲಿದೆ ರಿಯಾಯ್ತಿ
ಇನ್ನು, ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯ್ತಿ ನೀಡಲಾಗುತ್ತದೆ. ಅಲ್ಲದೇ, ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟನ್ನು ಒಂದೇ ವೇಳೆಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯ್ತಿ ದೊರೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















