ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಂಜಾನೆಯಿಂದಲೇ ಎಲ್ಲ ಅಧಿಕೃತ ಪ್ರವಾಸಗಳನ್ನು ರದ್ದು ಮಾಡಿದ್ದಾರೆ.
ಈ ಕುರಿತಂತೆ ಮುಂಜಾನೆ ಮಾತನಾಡಿದ ಅವರು, ನೀತಿ ಸಂಹಿತೆ ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಪ್ರವಾಸಗಳನ್ನು ರದ್ದು ಮಾಡಿದ್ದೇನೆ. ಇಂದಿನಿಂದ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತೇನೆ. ಪಕ್ಷದಿಂದ ಆಯೋಜಿಸುವ ಹಾಗೂ ಸೂಚಿಸುವ ಸಭೆ, ರ್ಯಾಲಿಗಳಲ್ಲಿ ಪಾಲ್ಗೊಳ್ಳುತ್ತೇನೆ ಎಂದರು.
ಮೋದಿ ಯವರು ಏಪ್ರಿಲ್ 9 ರಂದು ಮೈಸೂರಿಗೆ ಬರುತ್ತಾರೆ. ಹುಲಿಗಳ ಸಂರಕ್ಷಣಾ ದಿನಾಚರಣೆಗೆ ಬರುತ್ತಿದ್ದು, ಅದು ಮೊದಲೇ ನಿಗಿದಿ ಆಗಿದ್ದ ಕಾರ್ಯಕ್ರಮವಾಗಿದೆ. ನನಗೆ ಈ ಬಾರಿ ನಮಗೆ ಬಹುಮತ ಬರುವ ವಿಶ್ವಾಸ ಇದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post