No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ರಬ್ಬರ್ ಸ್ಟಾಂಪ್ ಪ್ರಧಾನಿ ಸಿಂಗ್ ಹೆಸರು ಹೇಳಲು ಕಾಂಗ್ರೆಸ್’ಗೆ ಸಾಧ್ಯವಿಲ್ಲ: ಬಿಎಸ್’ವೈ ಕಟಕಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 18, 2019
in ಶಿಕಾರಿಪುರ
0
ರಬ್ಬರ್ ಸ್ಟಾಂಪ್ ಪ್ರಧಾನಿ ಸಿಂಗ್ ಹೆಸರು ಹೇಳಲು ಕಾಂಗ್ರೆಸ್’ಗೆ ಸಾಧ್ಯವಿಲ್ಲ: ಬಿಎಸ್’ವೈ ಕಟಕಿ
Share on FacebookShare on TwitterShare on WhatsApp

ಶಿಕಾರಿಪುರ: ಜಗತ್ತು ಮೆಚ್ಚುವ ರೀತಿಯಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಆಡಳಿತ ನಡೆಸಿದ್ದು, ಈ ಹಿನ್ನಲೆಯಲ್ಲಿ ಪ್ರತಿಯೊಬ್ಬರೂ ಮೋದಿ ಮೋದಿ ಎನ್ನುತ್ತಿದ್ದಾರೆ. ಆದರೆ ಸತತ 10 ವರ್ಷಗಳ ಕಾಲ ಪ್ರಧಾನಿಯಾದ ಮನಮೋಹನ್ ಸಿಂಗ್ ಕೇವಲ ಸೋನಿಯಾ ರಬ್ಬರ್ ಸ್ಟಾಂಪ್ ಆಗಿದ್ದು, ಇದರಿಂದಾಗಿ ಮನಮೋಹನ್ ಸಿಂಗ್ ಹೆಸರು ಹೇಳಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದರು.

ಪಟ್ಟಣದ ಹಳೆ ಸಂತೆ ಮೈದಾನದಲ್ಲಿ ನಡೆದ ಬಿಜೆಪಿ ಬೃಹತ್ ಚುನಾವಣಾ ಬಹಿರಂಗ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ದೇಶ 54 ಲಕ್ಷ ಕೋಟಿ ರೂ. ಸಾಲದ ಸುಳಿಯಲ್ಲಿ ಸಿಲುಕಿದಾಗ ಪ್ರಧಾನಿಯಾದ ಮೋದಿ ಜಗತ್ತು ಮೆಚ್ಚುವ ರೀತಿಯಲ್ಲಿ ಇದೀಗ ಹೊರ ದೇಶಗಳಿಗೆ ಸಾಲ ನೀಡುವ ಅತ್ಯಂತ ಬಲಿಷ್ಠ ರಾಷ್ಟ್ರವಾಗಿ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಭಯೋತ್ಪಾದನಾ ದಾಳಿ ನಡೆದಾಗ ಜಗತ್ತಿನ ಇತರೆ ದೇಶಗಳು ಭಾರತವನ್ನು ಏಕಾಂಗಿಯಾಗಿಸುತ್ತಿದ್ದು ಇದೀಗ ಪಾಕ್ ಏಕಾಂಗಿಯಾಗುವ ರೀತಿಯಾಗಿದೆ ಸಾಲದ ಸುಳಿಯಲ್ಲಿ ಸಿಲುಕಿದ್ದ ದೇಶ ಇದೀಗ ಆರ್ಥಿಕ ಪ್ರಗತಿ ಸಾಧಿಸಿದೆ. ಇದಕ್ಕಾಗಿ ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದೇವೆ. ಸತತ 10 ವರ್ಷ ಪ್ರಧಾನಿಯಾದ ಮನಮೋಹನ್ ಸಿಂಗ್ ಕೇವಲ ಸೋನಿಯಾ ರಬ್ಬರ್ ಸ್ಟಾಂಪ್ ಪ್ರಧಾನಿಯಾಗಿದ್ದು, ಇದಕ್ಕಾಗಿ ಕಾಂಗ್ರೆಸ್ ಮುಖಂಡರಿಗೆ ಹೆಸರು ಹೇಳಲು ಸಾಧ್ಯವಾಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಪುಲ್ವಾಮದ ದಾಳಿ ಬಗ್ಗೆ ಎರಡು ವರ್ಷ ಹಿಂದೆ ತಿಳಿದಿತ್ತು ಎನ್ನುವ ಮುಖ್ಯಮಂತ್ರಿ ಕುಮಾರಸ್ವಾಮಿ ಅದನ್ನು ಏಕೆ ರಾಷ್ಟ್ರಪತಿ, ಕೇಂದ್ರ ಸರ್ಕಾರದ ಗಮನಕ್ಕೆ ತರಲಿಲ್ಲ ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿ ದೇಶದ್ರೋಹ ಎಸಗಿದ್ದಾರೆ. ಎರಡು ಹೊತ್ತು ಊಟಕ್ಕಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎನ್ನುವ ಹೇಳಿಕೆ ದೇಶದ ಕುರಿತು ಅವರ ಯೋಗ್ಯತೆ ತೋರಿಸುತ್ತದೆ. ಐಟಿ ದಾಳಿಗೆ ಆಗಮಿಸುವ ಅಧಿಕಾರಿಗಳ ಕುರಿತ ರಹಸ್ಯ ಸೋರಿಕೆ ಮೂಲಕ ಗೌಪ್ಯತೆ ಕಾಪಾಡಿಲ್ಲ, ಭ್ರಷ್ಟರ ವಿರುದ್ಧ ಐಟಿ ದಾಳಿ ನಡೆದರೆ ಅವರ ಪರವಾಗಿ ರಸ್ತೆಗಿಳಿದು ಪ್ರತಿಭಟನೆ ನಡೆಸುವ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮುಂದುವರೆಯುವ ನೈತಿಕತೆ ಹೊಂದಿಲ್ಲ ಎಂದರು.

ಚುನಾವಣೆಗಾಗಿ ರಾಜ್ಯ ಪ್ರವಾಸ ತಡೆಯಲು ಶಿವಮೊಗ್ಗದಲ್ಲಿ ಜೆಡಿಎಸ್ ತಂತ್ರಗಾರಿಕೆ ಮಾಡುವುದಾಗಿ ಹೇಳಿತ್ತು. ಆದರೆ ಮುಖ್ಯಮಂತ್ರಿ ತಮ್ಮ ಮಗನ ಗೆಲ್ಲಿಸುವುದಕ್ಕೆ ಒಂದು ವಾರ ಮಂಡ್ಯದಲ್ಲೆ ಠಿಕಾಣಿ ಹೂಡಿದ್ದರು, ಈಗಾಗಲೇ ಮೂರು ಸುತ್ತು ರಾಜ್ಯ ಪ್ರವಾಸ ಮುಗಿಸಿ ಇದೀಗ ಕ್ಷೇತ್ರಕ್ಕೆ ಆಗಮಿಸಿದ್ದೇನೆ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರೈತರ ಸಾಲಮನ್ನಾ ಮಾಡುತ್ತೇನೆ ಎಂದು ಸುಳ್ಳು ಹೇಳಿದ ಕುಮಾರಸ್ವಾಮಿ ಈವರೆಗೆ ಯಾಕೆ ಎಲ್ಲ ರೈತರ ಸಾಲಮನ್ನಾ ಮಾಡಿಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ, ವರ್ಗಾವಣೆ ದಂಧೆ, ಅಕ್ರಮ ಗುತ್ತಿಗೆ ನೀಡುವ ಮೂಲಕ ಭ್ರಷ್ಟಾಚಾರದಲ್ಲಿ ಸರಕಾರ ತೊಡಗಿದ್ದು ಇದನ್ನು ಕಿತ್ತೆಸೆಯಬೇಕು. ಕೇಂದ್ರದ ಜನಪರ ಕಾರ್ಯಕ್ರಮ ಪರಿಣಾಮ ರಾಜ್ಯದಲ್ಲಿ ಬಿಜೆಪಿ ಕನಿಷ್ಠ 22ಸ್ಥಾನ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗ ನಗರ ಶಾಸಕ ಕೆ.ಎಸ್. ಈಶ್ವರಪ್ಪ ಮಾತನಾಡಿ, ನಾವು ಒಕ್ಕಲಿಗರ ಪರ, ಸುಮಲತಾ ನಾಯ್ಡು ಎಂದು ಕುಮಾರಸ್ವಾಮಿ ಹೇಳಿದರೆ, ಸಿದ್ಧರಾಮಯ್ಯ ತಾವು ಕುರುಬರ ಪರ ಎನ್ನುತ್ತಾರೆ. ಬಿಜೆಪಿ ಮಾತ್ರ ದೇಶಕ್ಕಾಗಿ ನಮಗೆ ಮತ ನೀಡಿ ಎನ್ನುತ್ತಿದೆ, ಜಾತಿವಾದಿಗಳು ಯಾರು ಎನ್ನುವುದನ್ನು ಜನತೆ ಅರ್ಥ ಮಾಡಿಕೊಳ್ಳಬೇಕು ಎಂದರು.

ಕುಮಾರಸ್ವಾಮಿ ಅವರಪ್ಪನಾಣೆ ಸಿಎಂ ಆಗಲ್ಲ, ನರೇಂದ್ರ ಮೋದಿ ನರಹಂತಕ ಎಂದಿಗೂ ಪ್ರಧಾನಿ ಆಗಲ್ಲ ಎಂದು ಸಿದ್ಧರಾಮಯ್ಯ ಹೇಳಿದ್ದರು. ಅವು ಸುಳ್ಳಾಗಿವೆ. ಹಾಗೆಯೆ ಬಿಎಸ್‌ವೈ ಮುಖ್ಯಮಂತ್ರಿ ಆಗಲ್ಲ, ರಾಘವೇಂದ್ರ ಗೆಲ್ಲಲ್ಲ ಎನ್ನುತ್ತಿದ್ದಾರೆ ಅದೂ ಸುಳ್ಳಾಗುತ್ತದೆ. ಶೀಲಾ ದೀಕ್ಷಿತ್, ಜನಾರ್ಧನ ಪೂಜಾರಿ, ಖುದ್ದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪುನಃ ಮೋದಿ ಪ್ರಧಾನಿ ಆಗಲಿ ಎಂದಿದ್ದಾರೆ. ಸ್ವತಃ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರು ಮೋದಿ ಎನ್ನುತ್ತಿದ್ದು ಗೆಲುವು ನಮ್ಮದೇ ಎನ್ನುವುದು ಅದರಿಂದಲೇ ತಿಳಿಯುತ್ತದೆ ಎಂದರು.

ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲು ಕಂಕಣಬದ್ಧನಾಗಿದ್ದು ದೊರೆತ ಅಲ್ಪಾವಧಿಯಲ್ಲಿಯೇ ರೈಲ್ವೆ ಯೋಜನೆ, ಇಎಸ್‌ಐ ಆಸ್ಪತ್ರೆ, ಪಾಸ್ ಪೋರ್ಟ್ ಕೇಂದ್ರ, ಸಿಗಂಧೂರು ಸೇತುವೆ ಹೀಗೆ ಹಲವು ಕೆಲಸ ಮಾಡಿದ್ದೇನೆ. ನೀರಾವರಿ ಯೋಜನೆ ಮಂಜೂರಾತಿಗೆ ಬೋರ್ಡ್ ಮೀಟಿಂಗ್‌ನಲ್ಲಿ ಅಡ್ಡಿ ಪಡಿಸುವ ಕೆಲಸ ಆದರೂ ಅದಕ್ಕೆ ಯಾವುದೇ ಆಸ್ಪದ ನೀಡದೆ ಬಿಎಸ್‌ವೈ ಮೇಲಿನ ಗೌರವಕ್ಕೆ ಯೋಜನೆಗೆ ಹಣ ಮೀಸಲಿಡಲಾಗಿದೆ. ಸಿದ್ಧರಾಮಯ್ಯಸರಕಾರ ನೀರಾವರಿಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸಲಿಲ್ಲ. ಪುನಃ ಸಂಸತ್’ಗೆ ಕಳುಹಿಸಿದಲ್ಲಿ ಮುಂದೆಯೂ ಉತ್ತಮ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ರೈತರಿಗೆ ಜೈಲಿಗೆ ಹೋಗುವಂತೆ ಕಾನೂನು ತಂದಿದ್ದು ಬಿಎಸ್‌ವೈ ಅಲ್ಲ ಬದಲಿಗೆ ಕುಮಾರಸ್ವಾಮಿ. ಅದಕ್ಕೆ ಕಾರಣ ಈ ಕುರಿತು ಲಿಖಿತ ದಾಖಲೆ ನನ್ನ ಬಳಿಯಿದೆ ಎಂದು ತಿಳಿಸಿದರು. ಬೆಂಗಳೂರಿನ ತಮ್ಮ ವಿರೋಧಿಗಳ ಜೈಲಿಗೆ ಕಳುಹಿಸಲು ಕುಮಾರಸ್ವಾಮಿ ಕಾನೂನು ಜಾರಿಗೊಳಿಸಲು ಹೆಚ್ಚಿನ ಆಸಕ್ತಿ ಹೊಂದಿದ್ದು ಬಿಎಸ್‌ವೈ ಪ್ರತಿಭಟಿಸಿದ್ದರು ಎಂದು ತಿಳಿಸಿದರು.

ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಮಾಜಿ ಎಂಎಲ್’ಸಿ, ಚಿತ್ರನಟಿ ತಾರಾ ಅನುರಾಧಾ, ಶಾಸಕ ರೇಣುಕಾಚಾರ್ಯ, ಬಸವರಾಜ ಬೊಮ್ಮಾಯಿ, ಕುಮಾರ ಬಂಗಾರಪ್ಪ, ಅಶೋಕನಾಯ್ಕ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿಶೆಟ್ಟಿ, ರುದ್ರೇಗೌಡ, ಅರುಣ್, ಕೆ.ಎಸ್.ಗುರುಮೂರ್ತಿ, ಕೊಳಗಿ ರೇವಣಪ್ಪ, ಬಿ.ಕೆ ಶಿವರಾಂ ಮತ್ತಿತರರು ಉಪಸ್ಥಿತರಿದ್ದರು.

(ವರದಿ: ರಾಜಾರಾವ್ ಜಾಧವ್, ಪ್ರತಿನಿಧಿ, ಶಿಕಾರಿಪುರ)

Tags: B S yeddyurappaB Y RaghavendraBJPKannada NewsLok Sabha election 2019Malnad NewsShikaripuraShivamoggaಬಿ.ಎಸ್. ಯಡಿಯೂರಪ್ಪಬಿಜೆಪಿಲೋಕಸಭಾ ಚುನಾವಣೆ-2019ಶಿಕಾರಿಪುರ
Share196Tweet123Send
Previous Post

ಯಡಿಯೂರಪ್ಪನವರಿಗೆ ಸಿಎಂ ಆಗಲು ಇರುವ ಆಸಕ್ತಿ, ರೈತರ ಬಗ್ಗೆ ಇಲ್ಲ: ಸಿಎಂ ಎಚ್’ಡಿಕೆ ಕಿಡಿ

Next Post

ರಾಜ್ಯದಲ್ಲಿ ಮೊದಲ ಹಂತದ ಮತದಾನ ಆರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೊದಲ ಹಂತದ ಮತದಾನ ಶಾಂತಿಯುತ, ತ್ರಿಪುರಾದಲ್ಲಿ ಅತಿಹೆಚ್ಚು ಮತದಾನ

ರಾಜ್ಯದಲ್ಲಿ ಮೊದಲ ಹಂತದ ಮತದಾನ ಆರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

April 26, 2026
ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

April 26, 2026
ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

April 26, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL