ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ #PMNarendraModi ಅವರ ಅಲೆಯ ಅಬ್ಬರಕ್ಕೆ ಕಾಂಗ್ರೆಸ್ #Congress ಪಕ್ಷದಿಂದ ಕಣಕ್ಕಿಳಿಯಲು ಯಾರೂ ಧೈರ್ಯ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಲೇವಡಿ ಮಾಡಿದ್ದಾರೆ.
ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೋದಿ ಅವರ ಅಲೆ ಅಬ್ಬರಿಸುತ್ತಿದೆ. ಕಾಂಗ್ರೆಸ್ ಪಕ್ಷ ಅಭ್ಯಥಿಗಳನ್ನು ಹಾಕಲು ಪರದಾಡುತ್ತಿದೆ. ಸಚಿವರುಗಳೇ ಸ್ಪರ್ಧೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕಟಿಕಿಯಾಡಿದ್ದಾರೆ.
Also read: ಮಾರ್ಚ್ 18 ಪ್ರಧಾನಿ ಭೇಟಿ ಹಿನ್ನೆಲೆ | ನಗರದ ಹಲವೆಡೆ ಮಾರ್ಗ ಬದಲಾವಣೆ | ಇಲ್ಲಿದೆ ವಿವರ
ರಾಜ್ಯ ಮಾತ್ರವಲ್ಲ ದೇಶದ ಉದ್ದಗಲಕ್ಕೂ ಮೋದಿ ಅಲೆಗೆ ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳು ತತ್ತರಿಸಿಹೋಗಿವೆ. ಗೆಲುವಿನ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಇದು ಆಘಾತ ನೀಡಿದೆ ಎಂದರು.
ಶಿವಮೊಗ್ಗ, #Shivamogga ದಾವಣಗೆರೆ, ಚಿಕ್ಕಮಗಳೂರು-ಉಡುಪಿ, ಚಿತ್ರದುರ್ಗ #Chitradurga ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ನಗರದಲ್ಲಿ ಇಂದು ಪ್ರಧಾನಿ ಮೋದಿ ಸಮಾವೇಶ ನಡೆಸುತ್ತಿದ್ದಾರೆ. ಎಲ್ಲ ಕ್ಷೇತ್ರಗಳಿಂದ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಗಮಿಸುತ್ತಿದ್ದು, ಇದು ದೊಡ್ಡ ಸಂಚಲನ ಸೃಷ್ಠಿಸಲಿದೆ. ಇದು ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಪೂರಕವಾಗಲಿದೆ ಎಂದರು.
ಮೋದಿಯವರು ಪ್ರಧಾನಿಯಾದ ನಂತರ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆ ಮನೆ ಮನೆಗೂ ತಲುಪಿದೆ. ಪ್ರಮುಖವಾಗಿ ಯಾವುದೇ ರೀತಿಯಲ್ಲೂ ಭ್ರಷ್ಟಾಚಾರ ಇಲ್ಲದೇ ಕೇಂದ್ರ ಸರ್ಕಾರದ ಯೋಜನೆಯ ಪ್ರಯೋಜನಗಳು ನಮ್ಮ ಪಕ್ಷಕ್ಕೆ ಚುನಾವಣೆಯಲ್ಲಿ ವರದಾನವಾಗಲಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post