ನವದೆಹಲಿ: ಐಎನ್’ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಇಡಿ ವಶದಲ್ಲಿರುವ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರನ್ನು ನವೆಂಬರ್ 13ರವರೆಗೂ ನ್ಯಾಯಾಂಗ ಬಂಧನಕ್ಕೆ ವಹಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
ಅಕ್ಟೋಬರ್ 24ರಂದು ವಿಚಾರಣೆ ನಡೆಸಿದ ನ್ಯಾಯಾಲಯ ಇಂದಿನವರೆಗೂ ಚಿದಂಬರಂ ಅವರನ್ನು ಇಡಿ ಕಸ್ಟಡಿಗೆ ನೀಡಿತ್ತು. ಆದರೆ, ಇಂದು ವಿಚಾರಣೆ ನಡೆದ ವೇಳೆ ಚಿದಂಬರಂ ಅವರ ವಿಚಾರಣೆ ಪೂರ್ಣವಾಗಿಲ್ಲ ಎಂದು ಅಧಿಕಾರಿಗಳು ಕೋರಿದರು.
ಇಡಿ ತನಿಖೆ ನಡೆಸುತ್ತಿರುವ ಪ್ರಕರಣದಲ್ಲಿ ಜಾಮೀನು ಕೋರಿ ಅಕ್ಟೋಬರ್ 23 ರಂದು ಚಿದಂಬರಂ ದೆಹಲಿ ಹೈಕೋರ್ಟ್ಗೆ ಮೊಕದ್ದಮೆ ಹೂಡಿದ್ದನ್ನು ಗಮನಿಸಬೇಕು. ಅಕ್ಟೋಬರ್ 22 ರಂದು, ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ಐಎನ್’ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕನಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು.
Discussion about this post