ಬೆಂಗಳೂರು: ಗಾಂಧೀಜಿಯನ್ನು ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆ ಪರವಾಗಿ ಮಾತನಾಡುವವರು ತಾಕತ್ತಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲಿ ಎಂದು ಕಾಂಗ್ರೆಸ್ ಶಾಸಕ ನಾಥುರಾಮ್ ಗೋಡ್ಸೆ ನೀಡಿರುವ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕಾಂಗ್ರೆಸ್’ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಬೇಳೂರು, ತಾಕತ್ತಿದ್ದರೆ ಪ್ರಧಾನಿ ಮೋದಿಯನ್ನು ಹತ್ಯೆ ಮಾಡಿ ಎಂದು ದ್ವೇಷದ ಹೇಳಿಕೆ ನೀಡಿದ್ದಾರೆ.
ಈ ಕುರಿತಂತೆ ಬೇಳೂರು ಮಾತನಾಡಿರುವ ವೀಡಿಯೋ ತುಣುಕನ್ನು ಬಿಡುಗಡೆ ಮಾಡಿರುವ ಬಿಜೆಪಿ, ಪ್ರಧಾನಿ ಹತ್ಯೆಗೆ ಕರೆ ನೀಡಿರುವ ಆರೋಪದಡಿ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಆಗ್ರಹಿಸಿದೆ.
ಕರ್ನಾಟಕ ಬಿಜೆಪಿಯ ಅಧಿಕೃತ ಟ್ವೀಟ್ ಖಾತೆಯಿಂದ ಗೋಪಾಲ ಕೃಷ್ಣ ಅವರ ಹೇಳಿಕೆಯ ವಿಡಿಯೋ ಪ್ರಕಟವಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕೆಂದು ನಗರ ಪೊಲೀಸ್ ಆಯುಕ್ತರು, ಕೇಂದ್ರ ಗೃಹ ಇಲಾಖೆಯ ಟ್ವೀಟ್ ಖಾತೆಗೆ ಟ್ಯಾಗ್ ಮಾಡಲಾಗಿದೆ.
Belur Gopalakrishna, a Congress leader in a official party function calls for assassination of democratically elected PM Sri @narendramodi ji.
Instigating for assassination of PM of a country is a nation threat & we urge @HMOIndia, @CPBlr to impose legal action immediately. pic.twitter.com/Tg9GO0FCdM
— BJP Karnataka (@BJP4Karnataka) March 5, 2019
ಗಾಂಧಿ ಬದುಕಿದ್ದರೆ ಗುಂಡಿಟ್ಟು ಸಾಯಿಸುತ್ತೇವೆ ಎಂದು ಹಿಂದೂ ಮಹಾಸಭಾ ನಾಯಕಿ ಹೇಳುತ್ತಾರೆ. ಮೋದಿ ಚುನಾವಣೆಗೂ ಮುನ್ನ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದರು. ಭರವಸೆ ಹುಸಿಯಾಗಿದೆ ಎಂದಾದರೆ ನಿಮ್ಮ ಪ್ರಧಾನಿ ಮೋದಿಯನ್ನು ತಾಕತ್ ಇದ್ದರೆ ಗುಂಡಿಟ್ಟು ಸಾಯಿಸಿ ಬೇರೆ ಯಾರನ್ನೂ ಸಾಯಿಸುವುದು ಬೇಡ ಎಂದು ಹೇಳಿದ್ದರು.
ಇದೇ ವೇಳೆ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಖಾಸಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬೇಳೂರು ಗೋಪಾಲ ಕೃಷ್ಣ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾಯಿಸಿ ಎಂದು ಹೇಳಿದ್ದರೆ ಅದು ತಪ್ಪು, ಆದರೆ ಹತ್ಯೆ ಮಾಡಿ ಎಂದು ಹೇಳಿಕೆ ನೀಡಿಯೇ ಇಲ್ಲ. ಹತ್ಯೆ ಮಾಡಿ ಎಂದು ಹೇಳಿಕೆ ನೀಡಿದ್ದಲ್ಲಿ ನಾನು ಕ್ಷಮೆ ಕೇಳುತ್ತಿದ್ದೆ, ಆದರೆ ನಾನು ಆ ರೀತಿ ಹೇಳಿಕೆ ಕೊಟ್ಟೇ ಇಲ್ಲ, ಪ್ರಧಾನಿ ಮೋದಿ ಅವರನ್ನು ಸಾಯಿಸಲು ಆಗುತ್ತಾ ಎಂದು ಪ್ರಶ್ನಿಸಿದ್ದೇನೆ ಎಂದು ಹಿಂದೂ ಸಭಾಗೆ ನಾನು ಪ್ರಶ್ನೆ ಮಾಡಿದ್ದೇನೆ ಎಂದಿದ್ದಾರೆ. ಎಂದು ಗೋಪಾಲಕೃಷ್ಣ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಈ ಹೇಳಿಕೆ ಕುರಿತಂತೆ ರಾಜ್ಯದೆಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಬೇಳೂರು ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.
Discussion about this post