ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಜ.22ರಂದು ಅಯೋಧ್ಯೆಯಲ್ಲಿ #Ayodhya ನಡೆಯಲಿರುವ ರಾಮಮಂದಿರ #RamMandir ಉದ್ಘಾಟನೆಗೆ ನಾವು ಹೋಗುವುದಿಲ್ಲ ಎಂದು ಕಾಂಗ್ರೆಸ್ ಅಧಿಕೃತವಾಗಿ ಘೋಷಣೆ ಮಾಡಿದೆ.
ಈ ಕುರಿತಂತೆ ಕಾಂಗ್ರೆಸ್ #Congress ನಾಯಕರ ಸಭೆಯ ನಂತರ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ಜ.22ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಹೋಗುವುದಿಲ್ಲ ಎಂದಿದೆ.
ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ ಸೋನಿಯಾ ಗಾಂಧಿ #SoniaGandhi ಅಧೀರ್ ರಂಜನ್ ಚೌಧರಿ ಅವರು ರಾಮ ಮಂದಿರದ ಆಹ್ವಾನವನ್ನು ತಿರಸ್ಕರಿಸಿದ್ದಾರೆ.
ಧರ್ಮದ ವಿಚಾರ ವೈಯಕ್ತಿಕವಾಗಿದೆ. ಆದರೆ, ರಾಮಮಂದಿರ ವಿಚಾರವನ್ನು ಆರ್’ಎಸ್’ಎಸ್ #RSS ಹಾಗೂ ಬಿಜೆಪಿ #BJP ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಲಾಭ ಮಾಡಿಕೊಳ್ಳಲು ಬಿಜೆಪಿ ಅಯೋಧ್ಯೆಯನ್ನು ಬಳಸಿಕೊಳ್ಳುತ್ತಿದೆ. ಅಪೂರ್ಣ ದೇವಾಲಯವನ್ನು ಉದ್ಘಾಟನೆ ಮಾಡುತ್ತಿರುವುದೂ ಸಹ ಇದೇ ವಿಚಾರಕ್ಕಾಗಿ ಎಂದು ಕಿಡಿ ಕಾರಿದೆ.
ಕಾಂಗ್ರೆಸ್’ನ ಈ ನಿರ್ಧಾರಕ್ಕೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಸೇರಿ ಹಲವು ರಾಜಕೀಯ ಮುಖಂಡರು ಹಾಗೂ ಜನರು ಟೀಕಿಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post