ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೂ ರಾಜ್ಯದಾದ್ಯಂತ ಲಾಕ್’ಡೌನ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪರಿಸ್ಥಿತಿಯನ್ನು ನಿಭಾಯಿಸುವ ಸಲುವಾಗಿ ತಜ್ಞರೊಂದಿಗೆ ಚರ್ಚಿಸಿ ಇಂತಹ ಕಠಿಣ ತೀರ್ಮಾನಕ್ಕೆ ಬರಲಾಗಿದೆ ಎಂದಿದ್ದಾರೆ.
ಕ್ವಾರಂಟೈನ್ ಉಲ್ಲಂಘನೆಗೆ ಜೈಲು ಶಿಕ್ಷೆ
ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರದ ಸೂಚನೆಗಳನ್ನು ಕ್ವಾರಂಟೈನ್ ಉಲ್ಲಂಘಿಸಿದರೆ ಜೈಲು ಶಿಕ್ಷೆ ವಿಧಿಸಬೇಕಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಾಮೂಹಿಕ ನಮಾಜ್ ಮಾಡಲು ಅವಕಾಶವಲ್ಲ
ಕೊರೋನಾ ಹರಡುವಿಕೆ ಮುಂಜಾಗ್ರತಾ ಕ್ರಮವಾಗಿ ರಾಜ್ಯದಾದ್ಯಂತ ಮುಸ್ಲಿಮರ ಸಾಮೂಹಿಕ ಪ್ರಾರ್ಥನೆಯನ್ನು ರಾಜ್ಯ ವಕ್ಫ್ ಬೋರ್ಡ್ ರದ್ದು ಮಾಡಿದೆ.
ಶುಕ್ರವಾರದ ಪ್ರಾರ್ಥನೆಯನ್ನು ತಮ್ಮ ಮನೆಗಳಲ್ಲೇ ಮಾಡಿಕೊಳ್ಳಬೇಕು ಎಂದು ಸೂಚಿಸಿರುವ ಬೋರ್ಡ್, ಅನಾವಶ್ಯಕವಾಗಿ ಮನೆಯಿಂದ ಹೊರಕ್ಕೆ ಬರಬೇಡಿ ಎಂದಿದೆ.
Get in Touch With Us info@kalpa.news Whatsapp: 9481252093







Discussion about this post