ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಭಾರೀ ನಿರೀಕ್ಷೆ ಮೂಡಿಸಿರುವ ಕೊರೋನಾ ಲಸಿಕೆಯನ್ನು ಬಿಗಿ ಭದ್ರತೆಯಲ್ಲಿ ಇಂದು ನಗರಕ್ಕೆ ತರಲಾಗಿದ್ದು, ಅಧಿಕಾರಿಗಳು ಪೂಜೆ ಸಲ್ಲಿಸುವ ಮೂಲಕ ಬರಮಾಡಿಕೊಂಡಿದ್ದಾರೆ.

ಇನ್ನು, ಜ.16ರ ನಾಳೆಯಿಂದ ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಹೊಸನಗರ, ತೀರ್ಥಹಳ್ಳಿ, ಸಾಗರ ಹಾಗೂ ಸೊರಬಗಳಲ್ಲಿ ಲಸಿಕೆ ವಿತರಣೆ ಆರಂಭವಾಗಲಿದೆ. ಜ.18ರಿಂದ ಜಿಲ್ಲೆಯಾದ್ಯಂತ 91 ಕೇಂದ್ರಗಳಲ್ಲಿ ಪ್ರತಿ ಬೂತ್’ನಲ್ಲೂ 100 ಜನರಿಗೆ ಲಸಿಕೆ ವಿತರಣೆ ಮಾಡಲಾಗುವುದು ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post