No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕೋವಿಡ್19‌ ಅನುಭವ ಭಾರತವನ್ನು ಅಗ್ರಮಾನ್ಯ ರಾಷ್ಟ್ರವನ್ನಾಗಿಸಲಿದೆ: ಡಾ. ಅಶ್ವತ್ಥನಾರಾಯಣ

kalpa News by kalpa News
May 18, 2020
in Small Bytes, ಬೆಂಗಳೂರು ನಗರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ತಂತ್ರಜ್ಞಾನ ಬಳಸಿಕೊಂಡು ಆಡಳಿತದಲ್ಲಿ ತ್ವರಿತ ಸುಧಾರಣೆಗಳನ್ನು ತರಬಹುದು ಎಂಬುದನ್ನು ಕೋವಿಡ್19 ನಮಗೆ ಹೇಳಿಕೊಟ್ಟಿದೆ. ನಮ್ಮ ಈ ಅನುಭವ ಮುಂದಿನ ಹತ್ತು ವರ್ಷದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತವನ್ನು ಬಹು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಅಮೆರಿಕ ಕನ್ನಡ ಕೂಟಗಳ ಆಗರ (ಅಕ್ಕ ಸಂಘಟನೆ) ಆಯೋಜಿಸಿದ್ದ ವೀಡಿಯೋ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. “ಕೋವಿಡ್19ನಿಂದಾಗಿ ಆರೋಗ್ಯ ಸಮಸ್ಯೆ, ಸಾವು-ನೋವು ಸಂಭವಿಸಿದೆ. ಇದೊಂದು ಹಿನ್ನಡೆಯೂ ಹೌದು. ಇದಕ್ಕೆ ಯಾವ ಸಿದ್ಧತೆಯನ್ನೂ ಮಾಡಿಕೊಂಡಿರಲಿಲ್ಲ ಎಂಬುದೂ ಸತ್ಯ. ಆದರೆ, ಈ ಸಮಸ್ಯೆಯನ್ನು ಒಂದು ಅವಕಾಶವಾಗಿ ಬಳಸಿಕೊಂಡು ಅತ್ಯಂತ ವೇಗವಾಗಿ ಬದಲಾವಣೆಗಳಿಗೆ ಒಗ್ಗಿಕೊಂಡು ಹೊಸ ಕಾರ್ಯಕ್ರಮಗಳನ್ನು ಅಳವಡಿಸಿಕೊಂಡೆವು. ತಂತ್ರಜ್ಞಾನದ ಮೂಲಕ ಎಲ್ಲವೂ ಸಾಧ್ಯ ಎಂಬುದನ್ನು ತೋರಿಸಿದ್ದೇವೆ,” ಎಂದರು.

“ನಾವು ಬದಲಾವಣೆಗೆ ಎಷ್ಟೊಂದು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಹೊಂದಿಕೊಂಡಿದ್ದೇವೆ ಎಂದರೆ ಕೆಲವೊಂದು ವಿಭಾಗಗಳಲ್ಲಿ ಮಾತ್ರ ಲಾಕ್‌ಡೌನ್ ನಿಂದ ತೊಂದರೆಯಾಗಿದೆಯೇ ಹೊರತು ಬಹುತೇಕ ಕ್ಷೇತ್ರಗಳಲ್ಲಿ ಹೆಚ್ಚಿನ ದುಷ್ಪರಿಣಾಮ ಆಗಲಿಲ್ಲ. ಟೆಲಿಮೆಡಿಸಿನ್, ಟೆಲಿ ಕನ್ಸಲ್ಟಿಂಗ್ ಮೂಲಕ ಜನರ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ತಲುಪಿಸಿದ್ದೇವೆ. ಜನರಿಗೆ ಪಡಿತರ, ಔಷಧ ಸೇರಿದಂತೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ತಲುಪಿಸಲಾಗಿದೆ. ಪಡಿತರ ವಿತರಣೆಯಲ್ಲಿ ಭಾರತ, ಅದರಲ್ಲೂ ಕರ್ನಾಟಕ ಮಾಡಿರುವ ಸಾಧನೆ ವಿಶ್ವಕ್ಕೆ ಮಾದರಿ ಎಂದರೆ ಅತಿಶಯೋಕ್ತಿಯಲ್ಲ,” ಎಂದು ತಿಳಿಸಿದರು.

ಮೋದಿಯೇ ದೊಡ್ಡ ನಂಬಿಕೆ
“ಇಂತಹ ಸಮಸ್ಯೆಗಳು ಎದುರಾದಾಗ ರಾತ್ರೋರಾತ್ರಿ ಎಲ್ಲವೂ ಬಗೆಹರಿಯಬೇಕು ಎಂದು ಬಯಸುತ್ತಾರಾದರೂ ಅದು ಸಾಧ್ಯವಾಗುವುದಿಲ್ಲ. ಆದರೆ, ಭಾರತೀಯರಲ್ಲಿ ನಂಬಿಕೆಯೇ ಅತಿ ದೊಡ್ಡ ಶಕ್ತಿ. ಅದರಂತೆ ಪ್ರಧಾನಿ ನರೇಂದ್ರ ಮೋದಿ ಅವರು ಜನರ ಪಾಲಿಗೆ ನಂಬಿಕೆಯಾಗಿದ್ದು, ಈ ನಂಬಿಕೆ ನಮ್ಮನ್ನು ಸಮಸ್ಯೆಯಿಂದ ಕಾಪಾಡಿದೆ. ಕೆಲವು ದುಷ್ಟ ಶಕ್ತಿಗಳು ಈ ಪರಿಸ್ಥಿತಿಯ ದುರ್ಲಾಭ ಪಡೆದು ಏನೆೇನೋ ಮಾಡಬೇಕು ಎಂದು ಪ್ರಯತ್ನಿಸಿದರೂ ಅದು ಸಾಧ್ಯವಾಗಲಿಲ್ಲ,” ಎಂದು ಹೇಳಿದರು.

“ಕೋವಿಡ್ ಸಮಸ್ಯೆಯನ್ನು ದೇಶ ಒಗ್ಗಟ್ಟಿನಿಂದ ಎದುರಿಸಿದೆ. ಜನ ಭಾವನಾತ್ಮಕವಾಗಿಯೂ ಸರ್ಕಾರದ ಜತೆ ಕೈಜೋಡಿಸಿದ್ದಾರೆ ಎಂಬುದಕ್ಕೆ ಕೊರೊನಾ ವಾರಿಯರ್ಸ್‌ಗೆ ದೇಶದ ಜನ ಸಲ್ಲಿಸಿದ ಗೌರವವೇ ಸಾಕ್ಷಿ. ಅದೇ ರೀತಿ ಅಮೆರಿಕದಲ್ಲಿ ಭಾರತೀಯ ಮೂಲದ ಡಾ.ಉಮಾರಾಣಿ ಅವರ ಸೇವೆಗೆ ಸಂದ ಗೌರವ ಭಾರತೀಯರು ಯಾವ ರೀತಿ ಸೇವಾ ಮನೋಭಾವ ಹೊಂದಿದ್ದಾರೆ ಎಂಬುದಕ್ಕೆ ಸಾಕ್ಷಿ,” ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಮುಂಚೂಣಿಯಲ್ಲಿ ಕರ್ನಾಟಕ
“ಕೋವಿಡ್ ಕಾಣಿಸಿಕೊಂಡ ಸಂದರ್ಭದಲ್ಲಿ ಕರ್ನಾಟಕದಲ್ಲಿ 2 ಪ್ರಯೋಗಾಲಯಗಳಲ್ಲಿ ಮಾತ್ರ ಪರೀಕ್ಷೆ ನಡೆಸಲು ಅವಕಾಶವಿತ್ತು. ಟೆಸ್ಟ್ ಕಿಟ್, ನಿರ್ದಿಷ್ಟ ಆಸ್ಪತ್ರೆ, ಪಿಪಿಇ ಕಿಟ್, ಎನ್‌ 95 ಮಾಸ್ಕ್‌ ಯಾವುದೂ ಇರಲಿಲ್ಲ. ಆದರೆ, ತ್ವರಿತಗತಿಯಲ್ಲಿ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಂಡೆವು. ಪ್ರಸ್ತುತ ರಾಜ್ಯದಲ್ಲಿ 35 ಪ್ರಯೋಗಾಲಯಗಳಿದ್ದು, ನಿತ್ಯ 35 ಸಾವಿರ ಟೆಸ್ಟ್ ಮಾಡುವ ಸಾಮರ್ಥ್ಯ ಬೆಳೆಸಿಕೊಂಡಿದ್ದೇವೆ. ಕೋವಿಡ್ ಚಿಕಿತ್ಸೆಗಾಗಿ 39 ಸಾವಿರ ಹಾಸಿಗೆ ಮೀಸಲಿಡಲಾಗಿದ್ದು, ಜಿಲ್ಲಾ, ತಾಲೂಕು ಮಟ್ಟದ ಆಸ್ಪತ್ರೆಗಳಲ್ಲೂ ಆಕ್ಸಿಜನ್ ಸೌಲಭ್ಯ ಒದಗಿಸಲಾಗಿದೆ. ಟೆಲಿ ಐಸಿಯೂ ಘಟಕಗಳಿವೆ. ಪಿಪಿಇ ಕಿಟ್‌ನಲ್ಲಿ ಸ್ವಾವಂಬನೆ ಸಾಧಿಸಿದ್ದೇವೆ. ಹೊಸ ವೆಂಟಿಲೇಟರ್ಸ್ ಸಂಖ್ಯೆ ಲಕ್ಷಕ್ಕೆ ಹೆಚ್ಚಿದೆ,” ಎಂದು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

“ಕೋವಿಡ್ ವಿಚಾರದಲ್ಲಿ ನಮಗೆ ಸವಾಲಾಗಿದ್ದು ವಲಸೆ ಕಾರ್ಮಿಕರು. ಅವರಿಗೆ ಊಟ, ವಸತಿ ಕಲ್ಪಿಸುವುದು ಕಷ್ಟ. ಅಲ್ಲದೆ, ರಾಜ್ಯಕ್ಕೆ ಬರುವವರು ಹೋಗುವವರು ಸಂಖ್ಯೆಯೂ ಹೆಚ್ಚು. ಇನ್ನೊಂದಡೆ ಹೊರರಾಜ್ಯದಿಂದ ಬಂದ ವಲಸೆ ಕಾರ್ಮಿಕರನ್ನು ಕ್ವಾರಂಟೈನ್ ಮಾಡುವುದು ಕೂಡ ಕಷ್ಟಸಾದ್ಯವಾಗಿತ್ತು. ಆದರೆ, ಎಎದೆಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ಯಾವುದೇ ಕೊರತೆಯಾಗದಂತೆ ನೋಡಿಕೊಂಡಿದ್ದೇವೆ,” ಎಂದು ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಡಾ.ಅಶ್ವತ್ಥನಾರಾಯಣ, “ಕೋವಿಡ್ ಚಿಕಿತ್ಸೆಗೆ ಅಗತ್ಯ ಮಾದರಿ ಸಂಗ್ರಹಿಸಲು ಮೊಬೈಲ್ ವಾಹನ ವ್ಯವಸ್ಥೆ ಮಾಡಲಾಗಿದೆ. ಮನೆ ಮನೆಗೂ ಯೂನಿವರ್ಸಲ್ ಸ್ಕ್ರೀನಿಂಗ್, ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ಮುಂತಾದ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ತಂತ್ರಜ್ಞಾನವನ್ನು ಸಂಪೂರ್ಣ ಬಳಕೆಮಾಡಿಕೊಂಡು ಜನರ ಆರೋಗ್ಯ ಮಾಹಿತಿ ಸಂಗ್ರಹಿಸುವ ಮೂಲಕ ಭವಿಷ್ಯದಲ್ಲಿ ಆರೋಗ್ಯ ಸಮಸ್ಯೆ ಎದುರಾದರೆ ಆಗ ಮಾಹಿತಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ,” ಎಂದು ಹೇಳಿದರು.

ಕರ್ನಾಟಕದ ಬಗ್ಗೆ ವೈದ್ಯರ ಮೆಚ್ಚುಗೆ
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಅದರಲ್ಲೂ ಮುಖ್ಯವಾಗಿ‌ ಕರ್ನಾಟಕದ ಸಾಧನೆ ಬಗ್ಗೆ ಅಮೆರಿಕದಲ್ಲಿ ಕೊರೊನಾಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹಾಗೂ ಅಕ್ಕ ಬಳಗದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಾಧನೆಗಾಗಿ ಸರ್ಕಾರ ಮತ್ತು ರಾಜ್ಯದ ಜನತೆಗೆ ಡಾ.ಅಶ್ವತ್ಥನಾರಾಯಣ ಅವರ ಮೂಲಕ ಅಭಿನಂದಿಸಿದರು.

ಸಂವಾದದಲ್ಲಿ ಅಮೆರಿಕದಲ್ಲಿ ಕೋವಿಡ್19 ಚಿಕಿತ್ಸೆ ನೀಡುತ್ತಿರುವ ಕರ್ನಾಟಕ ಮೂಲದ ವೈದ್ಯರಾದ ಡಾ.ಅನುರಾಧ ತಾವರೇಕೆರೆ, ಡಾ.ಕಲ್ಪನಾ ಉದಯ್, ಡಾ.ಉಮಾರಾಣಿ ಮಧುಸೂಧನ್, ಭಾರತದ ಜತೆಗಿನ ಸಮನ್ವಯಕಾರರಾದ ಡಾ.ಶಾಲಿನಿ ನಲ್ವಾಡ್ ತಮ್ಮ ಅನುಭವ ಹಂಚಿಕೊಂಡರಲ್ಲದೇ, ಹಲವು ಸಲಹೆಗಳನ್ನು ನೀಡಿದರು. ಅಕ್ಕ ಸಂಘಟನೆ ಅಧ್ಯಕ್ಷ ಅಮರನಾಥ ಗೌಡ, ದಯಾನಂದ್ ತುಮಕೂರು, ಸುರೇಶ್ ಕೃಷ್ಣಪ್ಪ ಸೇರಿದಂತೆ ಸಂಘಟನೆ ಪದಾಧಿಕಾರಿಗಳು ಹಾಜರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: BENGALURUCoronavirusCovid19IndiaDCM AshwathnarayanKannadaNewsWebsiteLatestNewsKannadaಕೋವಿಡ್19ಡಿಸಿಎಂ ಅಶ್ವತ್ಥನಾರಾಯಣಬೆಂಗಳೂರು
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವೈದ್ಯರು ಸರ್ಕಾರಿ ಸೇವೆಯತ್ತ ಹೆಚ್ಚಿನ ಆಸಕ್ತಿ ತೋರಲಿ: ಸಚಿವ ಬಿ.ಸಿ. ಪಾಟೀಲ್

Next Post

ಮಲೆನಾಡಲ್ಲಿ ಕೊರೋನಾ ಕೇಕೆ! ಶಿವಮೊಗ್ಗದಲ್ಲಿ ಒಂದೇ ದಿನ 10 ಪಾಸಿಟಿವ್!

kalpa News

kalpa News

Next Post
Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಮಲೆನಾಡಲ್ಲಿ ಕೊರೋನಾ ಕೇಕೆ! ಶಿವಮೊಗ್ಗದಲ್ಲಿ ಒಂದೇ ದಿನ 10 ಪಾಸಿಟಿವ್!

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL