ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರದ ಮೂರು ಠಾಣಾ ವ್ಯಾಪ್ತಿಯಲ್ಲಿ ಜಾರಿಗೊಳಿಸಲಾಗಿರುವ ಕರ್ಫ್ಯೂವನ್ನು ಸಡಿಲಿಕೆ ಮಾಡಲಾಗಿದ್ದು ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ.
ಈ ಕುರಿತಂತೆ ಐಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ.
ಇನ್ನು ವೈನ್ ಶಾಪ್’ಗಳಿಗೆ ಮುಂಜಾನೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಅವಕಾಶ ನೀಡಲಾಗಿದೆ.
ಇದೇ ವೇಳೆ ನಗರದಾದ್ಯಂತ ಜಾರಿಯಲ್ಲಿರುವ 144 ಸೆಕ್ಷನ್ ಡಿ.12ರವರೆಗೂ ಮುಂದುವರೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post