No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದಿನದ 24 ಗಂಟೆಯೂ ತಾಲೂಕು ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ | ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

kalpa News by kalpa News
January 20, 2025
in ಬೆಂಗಳೂರು ನಗರ
0
ದಿನದ 24 ಗಂಟೆಯೂ ತಾಲೂಕು ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ | ಸಚಿವ ದಿನೇಶ್ ಗುಂಡೂರಾವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಕ್ಷಿಣ ಕನ್ನಡ  |

ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನ ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ #Dinesh Gundurao ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸಚಿವರು ಮಾತನಾಡುತ್ತಿದ್ದರು.

ಸಾರ್ವಜನಿಕರಿಗೆ ತಾಲೂಕು ಆಸ್ಪತ್ರೆಗಳಲ್ಲಿಯೇ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳನ್ನ ಒದಗಿಸಿಕೊಡುವುದು ಅತಿ ಮುಖ್ಯವಾಗಿದೆ. ಜನರು ಜಿಲ್ಲಾಸ್ಪತ್ರೆಗಳೆ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಜಿಲ್ಲಾಸ್ಪತ್ರೆಗಳಲ್ಲಿ ಸಿಗುವ ಸೌಲಭ್ಯಗಳನ್ನ ತಾಲೂಕು ಆಸ್ಪತ್ರೆಗಳಲ್ಲಿಯೇ ನೀಡುವ ಮೂಲಕ ಜನರ ಸಮೀಪಕ್ಕೆ ಆರೋಗ್ಯ ಸೇವೆಗಳನ್ನ ಒದಗಿಸುತ್ತ ಮುಂಬರುವ ಬಜೆಟ್ ನಲ್ಲಿ ಮಹತ್ವದ ಯೋಜನೆ ಘೋಷಣೆಯಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌
ಈ ನಿಟ್ಟಿನಲ್ಲಿ ಪ್ರಸ್ತುತ ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಸಂಖ್ಯೆಯನ್ನ ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ. ಇದರಿಂದ ರಾತ್ರಿ ವೇಳೆಯಲ್ಲಿಯೂ ಆಸ್ಪತ್ರೆಗಳಿಗೆ ಬರುವ ಜನರಿಗೆ ತಜ್ಞ ವೈದ್ಯರ ಸೇವೆ ಲಭ್ಯವಾಗಲಿದೆ. ಅಲ್ಲದೇ ತಜ್ಞ ವೈದ್ಯರಿಗೆ ಬೇಕಾಗುವ ಎಲ್ಲ ವೈದ್ಯಕೀಯ ಪರಿಕರಿಗಳನ್ನ ಸರ್ಕಾರ ತಾಲೂಕು ಆಸ್ಪತ್ರೆಗಳಲ್ಲಿಯೂ ಒದಗಿಸಲಿದೆ. ದಿನದ 24 ಗಂಟೆಯೂ ತಾಲೂಕು ಆಸ್ಪತ್ರೆಗಳು ಸಕ್ರೀಯವಾಗಿ ಕಾರ್ಯನಿರ್ವಹಿಸುವಂತೆ ಯೋಜನೆ ರೂಪಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮಚ್ಚನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ನೂತನ ಕಟ್ಟಡವನ್ನ ನಾಲ್ಕು ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, 11 ಕೋಟಿ ವೆಚ್ಚದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರಗಳನ್ನ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಅಲ್ಲದೇ ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಕಟ್ಟಡ ದುರಸ್ಥಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ವಿಸ್ತ್ರತವಾದ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

Also read: ಇವಿ ಮೊಬಿಲಿಟಿಯಲ್ಲಿ ಕ್ರಾಂತಿ | 1 ಚಾರ್ಜಿಂಗ್‌ಗೆ 500 ಕಿಮೀ ಸವಾರಿ | 5000ಕ್ಕೂ ಹೆಚ್ಚು ಬಾರಿ ಚಾರ್ಜಿಂಗ್‌ ಕ್ಷಮತೆ

ಬಿಜೆಪಿ ಶಾಸಕ ಹರೀಶ್ ಪುಂಜಾಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಶಾಸಕ ಹರೀಶ್ ಪುಂಜಾ ವೇದಿಕೆಯ ಮೇಲಿದ್ದ ಸಚಿವ ದಿನೇಶ್ ಗುಂಡೂರಾವ್ ಎದುರು ಎರಡು ಬೇಡಿಕೆಯನ್ನ ಮುಂದಿಟ್ಟರು. ನಾನೊಬ್ಬ ಆಶಾ ಕಾರ್ಯಕರ್ತೆಯರ ಕುಟುಂಬದಿಂದ ಬಂದವನಾಗಿದ್ದು, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಿಸಬೇಕು. ಹಾಗೂ 70 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯನ್ನ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಕುರಿತು ತಮ್ಮ ಭಾಷಣದ ವೇಳೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್ ಆಶಾ ಕಾರ್ಯಕರ್ತೆಯರಿಗೆ ಏಪ್ರಿಲ್ ತಿಂಗಳಿನಿಂದ 10 ಸಾವಿರ ಮುಂಗಡವಾಗಿ ನೀಡಲು ಈಗಾಗಲೇ ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಿನ ಸಹಕಾರ ನೀಡಲಾಗಿದೆ. ಆದರೆ ಕೇಂದ್ರ ಸರ್ಕಾರ ಗೌರವಧನ ಹೆಚ್ಚಿಸುವ ಕಾರ್ಯ ಮಾಡಬೇಕು. ನೀವು, ನಿಮ್ಮ ಸಂಸದರು ಕೇಂದ್ರದಲ್ಲಿ ಪ್ರಭಾವ ಬಳಸಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ವಿಸುವಂತೆ ಒತ್ತಾಯಿಸಿ ಎಂದು ಶಾಸಕ ಹರೀಶ್ ಪುಂಜಾ ಅವರಿಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದರು. ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ 5 ಸಾವಿರ ಗೌರವಧನ ನೀಡುತ್ತಿದೆ. ಕೇಂದ್ರ ಸರ್ಕಾರ 3 ಸಾವಿರ ನೀಡುತ್ತಿದ್ದು , ಅದರಲ್ಲೂ ಶೇ 40 ರಷ್ಟು ಪಾಲನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ. ಪ್ರತಿ ಬಾರಿ ರಾಜ್ಯ ಸರ್ಕಾರ ಗೌರವಧನ ಹೆಚ್ಚಳ ಮಾಡಿಕೊಂಡು ಬರುತ್ತಿದೆ. ಆದರೆ ಕೇಂದ್ರ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳವಾಗಿಯೇ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ವಯೋ ವಂದನ ಯೋಜನೆ ಅನುಷ್ಠಾನ ವಿಚಾರದಲ್ಲಿ ರಾಜ್ಯ ಸರ್ಕಾರ ಮುಕ್ತವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕೆಲವು ಸ್ಪಷ್ಟನೆ ಕೇಳಿ ನವೆಂಬರ್ ತಿಂಗಳಿನಲ್ಲಿಯೇ ಪತ್ರ ಬರೆಯಲಾಗಿದೆ. ಕೇಂದ್ರದಿಂದ ಇನ್ನೂ ಉತ್ತರ ದೊರೆತಿಲ್ಲ. ಆಯುಷ್ಮಾನ್ ಭಾರತ್ ಯೋಜನೆಯ ಪ್ರಕಾರ ಶೇ 60 ರಷ್ಟು ಕೇಂದ್ರ ಹಾಗೂ ಶೇ 40 ರಷ್ಟು ರಾಜ್ಯ ಸರ್ಕಾರ ಅನುದಾನ ನೀಡಬೇಕು. ಆದರೆ ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರ ಶೇ 75 ರಷ್ಟು ಅನುದಾನದ ಪಾಲನ್ನ ಭರಿಸುತ್ತಿದ್ದು, ಶೇ 25 ರಷ್ಟು ಅನುದಾನವನ್ನು ಮಾತ್ರ ಕೇಂದ್ರ ಸರ್ಕಾರ ನೀಡುತ್ತಿದೆ. ರಾಜ್ಯ ಸರ್ಕಾರ 1 ಕೋಟಿ 20 ಲಕ್ಷ ಕುಟುಂಬಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯನ್ನ ಜೋಡಿಸಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯದ 65 ಲಕ್ಷ ಕುಟುಂಬಗಳನ್ನ ಮಾತ್ರ ಈ ಯೋಜನೆಗೆ ಪರಿಗಣಿಸಿದೆ. ರಾಜ್ಯ ಸರ್ಕಾರ 1 ಕೋಟಿ 20 ಲಕ್ಷ ಕುಟುಂಬಗಳನ್ನ ಯೋಜನೆಯ ವ್ಯಾಪ್ತಿಗೆ ತಂದಿರುವುದರಿಂದ ಬಹುತೇಕ 70 ವರ್ಷ ಮೇಲ್ಪಟ್ಟವರು ಯೋಜನೆಯ ಲಾಭ ಪಡೆಯಬಹುದಾಗಿದೆ.. ಈ ಎಲ್ಲ ವಿಚಾರಗಳ ಕುರಿತು ಕೇಂದ್ರ ಸರ್ಕಾರದಿಂದ ಸ್ಪಷ್ಟ ಉತ್ತರ ಸಿಕ್ಕ ಬಳಿಕ ವಯೋ ವಂದನ ಯೋಜನೆಯನ್ನ ರಾಜ್ಯ ಅನುಷ್ಠಾನಗೊಳಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: coastal newsDakshina KannadaDinesh GunduraoKannada News WebsiteKannada_NewsKannada_News_LiveKannada_News_OnlineKannada_WebsiteKarawali NewsMangaloreNews_in_KannadaNews_KannadaUdupiಆರೋಗ್ಯ ಸಚಿವ ದಿನೇಶ್ ಗುಂಡೂರಾವ್ದಕ್ಷಿಣ ಕನ್ನಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇವಿ ಮೊಬಿಲಿಟಿಯಲ್ಲಿ ಕ್ರಾಂತಿ | 1 ಚಾರ್ಜಿಂಗ್‌ಗೆ 500 ಕಿಮೀ ಸವಾರಿ | 5000ಕ್ಕೂ ಹೆಚ್ಚು ಬಾರಿ ಚಾರ್ಜಿಂಗ್‌ ಕ್ಷಮತೆ

Next Post

ಜ.22 | ಇರುವಕ್ಕಿಯಲ್ಲಿ ಕೃಷಿ ವಿವಿ 9ನೇ ಘಟಿಕೋತ್ಸವ | ಕಾಗೋಡು ತಿಮ್ಮಪ್ಪಗೆ ಡಾಕ್ಟರೇಟ್ ಪ್ರದಾನ

kalpa News

kalpa News

Next Post
ಜ.22 | ಇರುವಕ್ಕಿಯಲ್ಲಿ ಕೃಷಿ ವಿವಿ 9ನೇ ಘಟಿಕೋತ್ಸವ | ಕಾಗೋಡು ತಿಮ್ಮಪ್ಪಗೆ ಡಾಕ್ಟರೇಟ್ ಪ್ರದಾನ

ಜ.22 | ಇರುವಕ್ಕಿಯಲ್ಲಿ ಕೃಷಿ ವಿವಿ 9ನೇ ಘಟಿಕೋತ್ಸವ | ಕಾಗೋಡು ತಿಮ್ಮಪ್ಪಗೆ ಡಾಕ್ಟರೇಟ್ ಪ್ರದಾನ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL