ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಜಿಲ್ಲಾ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಕುಖ್ಯಾತ ಅಂತಾರಾಜ್ಯ ವಾಹನ ಹಾಗೂ ಸರಗಳ್ಳತನದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳದ ತಿರುವನಂತಪುರA ವೆಲ್ಲಿಟ್ಟಿ ವೀಡು ಮೂಲದ ಆದಿತ್ ಗೋಪಾನ್ ಮುತ್ತು ಕೃಷ್ಣ(32) ಎಂಬಾತನನ್ನು ಬಂಧಿಸಲಾಗಿದೆ.
ಏನೆಲ್ಲಾ ಪ್ರಕರಣಗಳು ಈತನ ವಿರುದ್ಧ ದಾಖಲಾಗಿದೆ?
- ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ದ ಮಹಿಳೆಯು ತನ್ನ ಮನೆಯ ಬಳಿ ಓಣಿಯಲ್ಲಿದ್ದಾಗ ಅಪರಿತ ವ್ಯಕ್ತಿಯು ದ್ವಿಚಕ್ರ ವಾಹನದಲ್ಲಿ ಬಂದು ಚಿನ್ನದ ಸರವನ್ನು ಕಸಿದುಕೊಂಡು ಹೋದ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.
ಈ ಪ್ರಕರಣದ ಆರೋಪಿ ಪತ್ತೆ ಬಗ್ಗೆ ಕದ್ರಿ ಠಾಣೆಯಲ್ಲಿ ವಿಶೇಷ ತಂಡವನ್ನು ರಚಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಇತ್ತೀಚೆಗೆ ಆರೋಪಿಯ ಬಗ್ಗೆ ವಿಶೇಷ ತಂಡಕ್ಕೆ ದೊರೆತ ಮಾಹಿತಿಯಂತೆ ಕದ್ರಿ ಜೋಗಿ ಮಠದ ಬಳಿ ವಾಹನ ತಪಸಾಣೆ ನಡೆಸುತ್ತಿದ್ದರು. ಆ ಸಮಯ ಸಂಶಯಾಸ್ಪದವಾಗಿ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದ ವ್ಯಕ್ತಿಯನ್ನು ನಿಲ್ಲಿಸಿ ಪರಿಶೀಲಿಸಿದಾಗ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ ವಾಹನವಾಗಿತ್ತು. ವಿಚಾರಿಸಿದಾಗ ಆರೋಪಿಯು ಕಳ್ಳತನ ಮಾಡಿದ ದ್ವಿ ಚಕ್ರ ವಾಹನವನ್ನು ಬಳಸಿಕೊಂಡು ವಯೋವೃದ್ದರು, ಒಂಟಿ ಮಹಿಳೆಯರನ್ನು ಗುರುತಿಸಿ ಸರಗಳ್ಳತನ ಮಾಡಿರುವುದ ಬೆಳಕಿಗೆ ಬಂದಿದೆ. - ಕದ್ರಿ ಬಟ್ಟಗುಡ್ಡೆ ಬಳಿ ವಯೋವೃದ್ದ ಮಹಿಳೆಯ 1.5 ಪವನ್ ಸರವನ್ನು ಸುಲಿಗೆ ಮಾಡಿದ ಪ್ರಕರಣ.
- ಮುಲ್ಕಿ ಠಾಣಾ ವ್ಯಾಪ್ತಿಯ ಕೋಟೆಕೇರಿ ಬಳಿ ಒಂಟಿ ಮಹಿಳೆಗೆ ಚೂರಿ ತೋರಿಸಿ ಬೆದರಿಸಿ 2 ಪವನ್ ಚಿನ್ನದ ಸರವನ್ನು ಸುಲಿಗೆ ಪ್ರಕರಣ.
- ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ದ್ವಿ ಚಕ್ರ ವಾಹನ ಕಳವು ಮಾಡಿದ ಪ್ರಕರಣ.
- ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ದ್ವಿ ಚಕ್ರ ವಾಹನ ಕಳವು ಮಾಡಿದ ಪ್ರಕರಣ.
- ಸುರತ್ಕಲ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಬಳಿ ನಡೆಸಿದ ದ್ವಿ ಚಕ್ರ ವಾಹನ ಕಳವು ಪ್ರಕರಣ
- ಸುರತ್ಕಲ್ ಠಾಣಾ ವ್ಯಾಪ್ತಿಯ ಅಗರಮೇಲು ಬಳಿ ನಡೆಸಿದ ದ್ವಿ ಚಕ್ರ ವಾಹನ ಕಳವು ಪ್ರಕರಣ.
ಈ ಎಲ್ಲಾ ಪ್ರಕರಣಗಳು ಒಟ್ಟು ಸೇರಿ ಆರೋಪಿಯಿಂದ 1,50,000 ರೂ. ಮೌಲ್ಯದ 4 ದ್ವಿ ಚಕ್ರ ವಾಹನ ಮತ್ತು ರೂ. 3.5 ಲP್ಷÀ ಮೌಲ್ಯದ ಚಿನ್ನಾಭರಣ ಸಮೇತ ಒಟ್ಟು 6 ಲP್ಷÀ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 3 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.
ಈ ಪ್ರಕರಣದ ಪತ್ತೆಯ ಕಾರ್ಯಕ್ಕೆ ಸಂಬAಧಿಸಿದAತೆ ಮಂಗಳೂರು ಕೇಂದ್ರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಪ್ರತಾಪ್ ಸಿಂಗ್ ತೋರಟ್, ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀP್ಷÀಕರಾದ ಅನಂತ ಪದ್ಮಾನಾಭ ಅವರ ನೇತೃತ್ವದಲ್ಲಿ ಪಿಎಸ್’ಐಗಳಾದ ಮನೋಹರ್ ಪ್ರಸಾದ್, ಜ್ಯೊತಿ ಮತ್ತು ಕದ್ರಿ ಅಪರಾಧ ಪತ್ತೆ ವಿಭಾಗದ ಎಎಸ್’ಐ ಚಂದ್ರಶೇಖರ್, ಎಚ್’ಸಿಗಳಾದ ಸಂತೋಷ್ ಡಿ.ಕೆ, ಸುರೇಶ್, ಪಿಸಿಗಳಾದ ಸುನೀಲ್, ಮಣಿಕಂಠ, ವಿನ್ಸೆಂಟ್ ಕುರುವಿಲ್ಲಾ ಮತ್ತು ಮಪಿಸಿ ಜಕ್ಕವ್ವ ಹಾಗೂ ಕದ್ರಿ ಠಾಣೆಯ ಸಿಬ್ಬಂದಿ ವರ್ಗ ಈ ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಠಾಣೆಗಳಲ್ಲಿ 2025 ನೇ ಸಾಲಿನಲ್ಲಿ ಈವರೆಗೆ ಒಟ್ಟು 72 ದ್ವಿ ಚಕ್ರ ವಾಹನಗಳು ಕಳವಾಗಿದ್ದು ಇದರ ಪೈಕಿ ಕಳವಾದ 57 ದ್ವಿ ಚಕ್ರವಾಹನಗಳನ್ನು ಪತ್ತೆ ಮಾಡಲಾಗಿದ್ದು, 15 ಚಕ್ರವಾಹನಗಳು ಮಾತ್ರ ಪತ್ತೆಗೆ ಬಾಕಿ ಇದೆ. ಮಂಗಳೂರು ನಗರದಲ್ಲಿ ಒಟ್ಟು 79% ರಷ್ಟು ಕಳವಾದ ದ್ವಿ ಚಕ್ರವಾಹನಗನ್ನು ಪತ್ತೆ ಹಚ್ಚಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















