ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಸ್ಥಳೀಯ ಕುಕ್ಕೆ ಸುಬ್ರಹ್ಮಣ್ಯ ಶಾಲೆಯೊಂದಕ್ಕೆ ಭೇಟಿ ನೀಡಿದ ಗೃಹಸಚಿವರನ್ನು ವಿದ್ಯಾರ್ಥಿಗಳು ಶ್ಲೋಕದೊಂದಿಗೆ ಸ್ವಾಗತಿಸಿದರು. ಹಾಗೂ ಸಚಿವ ಆರಗ ಜ್ವಾನೇಂದ್ರ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿ, ಭ್ರಷ್ಟಾಚಾರದ ಬಗ್ಗೆ ಮಕ್ಕಳು ಕೇಳಿದ ಪ್ರಶ್ನೆಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು.
ಇದೇ ಸಂದರ್ಭದಲ್ಲಿ ಕುಕ್ಕೆ ಪೊಲೀಸ್ ಠಾಣೆಯು ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹಸಚಿವರು ಭಾಗವಹಿಸಿ ಗೌರವವಂದನೆ ಸ್ವೀಕರಿಸಿದರು.
Also read: ಸುಸಜ್ಜಿತ ಬೆಂಗಳೂರು ನಿರ್ಮಾಣವಾಗಲು ಕೆಂಪೇಗೌಡರ ವಿವೇಚನೆ, ದೂರದೃಷ್ಟ್ಟಿಯೇ ಕಾರಣ
ನಂತರ ಮಂಗಳೂರಿನಲ್ಲಿ ನಡೆದ ‘ತುರ್ತು ಪರಿಸ್ಥಿತಿ ಸಂದರ್ಭದ ಹೋರಾಟಗಾರರಿಗೆ ಬಿಜೆಪಿ ವತಿಯಿಂದ ಆಯೋಜಿಸಲಾದ ಗೌರವಾರ್ಪಣೆ’ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿ ಮಾತನಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post