ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಪರನಿಂತ ನರೇಂದ್ರ ಮೋದಿ ಸರಕಾರಕ್ಕೆ ಹಾಗೂ ಬಸವರಾಜ್ ಬೊಮ್ಮಾಯಿ ಸರಕಾರಕ್ಕೆ ಬಿಜೆಪಿ ಎಸ್.ಟಿ. ಮೋರ್ಚಾ ದ.ಕ. ಜಿಲ್ಲಾ ಮಾಧ್ಯಮ ಸಂಚಾಲಕ ಜಯರಾಮ ನಾಯ್ಕ ಕುಂಟ್ರಕಲ ಕೃತಜ್ಞತೆ ಸಲ್ಲಿಸಿದ್ದಾರೆ.
ಪರಿಶಿಷ್ಟ ಜಾತಿಯ ಮೀಸಲಾತಿ ಶೇ.15ರಿಂದ ಶೇ. 17ಕ್ಕೇರಿಸಿ, ಪರಿಶಿಷ್ಟ ಪಂಗಡದ ಮೀಸಲಾತಿ ಶೇ. 3ರಿಂದ ಶೇ. 7ಕ್ಕೇರಿಸಿದ ಕೆಲವೇ ದಿನಗಳಲ್ಲಿ 10 ಸೆಂಟ್ಸ್ ಭೂಪರಿವರ್ತನೆಯ ಆದೇಶ ಹೊರಡಿಸಿದ್ದು, ಎರಡೂ ಸಮುದಾಯದ ಅಗತ್ಯ ಬೇಡಿಕೆ ಈಡೇರಿದೆ. ಈ ಆದೇಶ ಆಗುವಲ್ಲಿ ನಿರಂತರ ಕ್ರೀಯಾಶೀಲರಾಗಿ ಕಾರ್ಯ ಪ್ರವರುತ್ವರಾದ ಬಸವರಾಜ್ ಬೊಮ್ಮಾಯಿ ಸರಕಾರದ ಎಲ್ಲಾ ಶಾಸಕರಿಗೆ, ಸಚಿವರಿಗೆ ಕೃತಜ್ಞತೆ ತಿಳಿಸಿದ್ದಾರೆ.
ದೇಶದ ಅತ್ಯುನ್ನತ ಸ್ಥಾನವಾದ ರಾಷ್ಟ್ರಪತಿ ಹುದ್ದೆಯನ್ನು ಕೇಂದ್ರ ಸರಕಾರ ಈ ಹಿಂದೆ ಪರಿಶಿಷ್ಟ ಜಾತಿಗೆ ಸೇರಿದವರಾದ ರಾಮನಾಥ ಕೋವಿಂದ್ ಹಾಗೂ ಪ್ರಸ್ತುತ ಪರಿಶಿಷ್ಟ ಪಂಗಡಕ್ಕೆ ಸೇರಿದ ದ್ರೌಪದಿ ಮುರ್ಮುರವರನ್ನು ಆಯ್ಕೆ ಮಾಡುವ ಮುಖೇನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಪರನಿಂತು ದೇಶದ ಘನತೆಯನ್ನು ಹೆಚ್ಚಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರಕಾರ ದಲಿತರ ಬೇಡಿಕೆಗಳನ್ನು ಈಡೇರಿಸುತ್ತಾ ವಿರೋಧಿಗಳ ಬಾಯಿ ಮುಚ್ಚಿಸಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಪರನಿಂತ ಕೇಂದ್ರದ ನರೇಂದ್ರ ಮೋದಿ ಸರಕಾರಕ್ಕೆ ಹಾಗೂ ರಾಜ್ಯದ ಬಸವರಾಜ್ ಬೊಮ್ಮಾಯಿ ಸರಕಾರಕ್ಕೆ ಅಭಿನಂದನೆ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post