ಹುಬ್ಬಳ್ಳಿ: ದಸರಾ ಹಬ್ಬರ ಹಿನ್ನೆಲೆಯಲ್ಲಿ ಪ್ರಯಾಣಿಕರ ಒತ್ತಡ ಹೆಚ್ಚಾಗುವ ಕಾರಣ ಇದನ್ನು ಸರಿದೂಗಿಸಲು ಹಾಗೂ ಪ್ರಯಾಣಿಕರಿಗೆ ಸಹಕಾರಿಯಾಗಲು ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಓಡಿಸಲಿದೆ.
ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ಎಕ್ಸ್ ಪ್ರೆಸ್(06557) ರೈಲು ಅಕ್ಟೋಬರ್ 9ರಿಂದ ಅ.21ರವರೆಗೂ ಓಡಲಿದೆ. ಈ ವಿಶೇಷ ರೈಲು ಪ್ರತಿದಿನ 8.45ಕ್ಕೆ ಬೆಂಗಳೂರಿನಿಂದ ಹೊರಟು 11.35ಕ್ಕೆ ಮೈಸೂರು ತಲುಪಲಿದೆ. ಅ.10ರಿಂದ 22ರವರೆಗೂ ವಿಶೇಷ ಎಕ್ಸ್ ಪ್ರೆಸ್(06558) ರೈಲು ಪ್ರತಿದಿನ ಮಧ್ಯಾಹ್ನ 12.50ಕ್ಕೆ ಮೈಸೂರಿನಿಂದ ಹೊರಡಲಿದ್ದು, ಮಧ್ಯಾಹ್ನ 3.45ಕ್ಕೆ ಬೆಂಗಳೂರು ತಲುಪಲಿದೆ.
ಅಕ್ಟೋಬರ್ 9 ರಿಂದ 25ರವರೆಗೆ ಶ್ರವಣಬೆಳಗೊಳ – ಶಿವಮೊಗ್ಗ ಟೌನ್ ವಿಶೇಷ ಎಕ್ಸ್ ಪ್ರೆಸ್ ವಾರಕ್ಕೆ ಮೂರು ದಿನ ಸಂಚರಿಸಲಿದೆ.
ಯಶವಂತಪುರ-ಮೈಸೂರು ಪ್ಯಾಸೆಂಜರ್(56215) ರೈಲು ಆದಿಚುಂಚನಗಿರಿ ಹಾಗೂ ಸಿದ್ದಾಪುರ, ಬೆಂಗಳೂರು ನಗರ-ಕೋಲಾರ ಪ್ಯಾಸೆಂಜರ್ (76551) ರೈಲು ದೊಡ್ಡನಟ್ಟ, ಜನ್ನಘಟ್ಟ, ಗಿಡ್ನಳ್ಳಿ ನಿಲ್ದಾಣದಲ್ಲಿ; ಚನ್ನಪಟ್ಟಣ-ಕೋಲಾರ (76525) ದೊಡ್ಡನಟ್ಟ, ಗೊಟ್ಟಿಹಳ್ಳಿ, ಜನ್ನಘಟ್ಟ ಹಾಗೂ ಗಿಡ್ನಳ್ಳಿ ನಿಲ್ದಾಣದಲ್ಲಿ 3 ತಿಂಗಳು ನಿಲುಗಡೆಗೊಳ್ಳುವುದಿಲ್ಲ ಎಂದು ಇಲಾಖೆ ತಿಳಿಸಿದೆ.
Discussion about this post