ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ದಾವಣಗೆರೆ ಭಾಗದ ಪ್ರಯಾಣಿಕರ /ಭಕ್ತರ ಅನುಕೂಲಕ್ಕಾಗಿ ದಾವಣಗೆರೆ ವಿಭಾಗದಿಂದ ಡಿ.23 ರಿಂದ ಪುಣ್ಯ ಸ್ಥಳಗಳಿಗೆ ಪ್ರತಿನಿತ್ಯ ವೇಗದೂತ ಸಾರಿಗೆ ಸೌಕರ್ಯವನ್ನು ಪ್ರಯಾಣಿಕರ ಹಿತದೃಷ್ಠಿಯಿಂದ ಕಲ್ಪಿಸಲಾಗಿದೆ.
ಮಾರ್ಗದ ವಿವರ:
ಪ್ರತಿದಿನ ಸಂಜೆ 6.55ಕ್ಕೆ ದಾವಣಗೆರೆಯಿಂದ ಹೊರಟು ಹರಿಹರ ಶಿವಮೊಗ್ಗ ಚಿಕ್ಕಮಂಗಳೂರು ಧರ್ಮಸ್ಥಳ ಮಾರ್ಗವಾಗಿ ಬೆಳಿಗ್ಗೆ 4.30ಕ್ಕೆ ಕುಕ್ಕೆ ಸುಬ್ರಮಣ್ಯ ತಲುಪಲಿದೆ.
ಪ್ರತಿದಿನ ಬೆಳಿಗ್ಗೆ 11.30ಕ್ಕೆ ಕುಕ್ಕೆ ಸುಬ್ರಮಣ್ಯದಿಂದ ಹೊರಟು ಧರ್ಮಸ್ಥಳ, ಚಿಕ್ಕಮಂಗಳೂರು, ಶಿವಮೊಗ್ಗ, ಹರಿಹರ ಮಾರ್ಗವಾಗಿ ಸಂಜೆ 6.55 ಕ್ಕೆದಾವಣಗೆರೆ ತಲುಪಲಿದೆ. ಮುಂಗಡ ಬುಕ್ಕಿಂಗ್ ಮಾಡಲು ತಿತಿತಿ.ಞsಡಿಣಛಿ.iಟಿ ನ್ನು ಸಂಪರ್ಕಿಸಬಹುದೆಂದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Also read: ಬೆಳಗಾವಿ ಅಧಿವೇಶನಕ್ಕೆ ಈಶ್ವರಪ್ಪ ಗೈರು: ಸ್ಪೀಕರ್ಗೆ ಬರೆದ ಪತ್ರದಲ್ಲೇನಿದೆ?


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















