No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ಬ್ಲಾಕ್‌ ಫಂಗಸ್‌ ಬಗ್ಗೆ ಆತಂಕ ಬೇಡ: ಆರೋಗ್ಯ ಸಚಿವ ಸುಧಾಕರ್‌

kalpa News by kalpa News
May 21, 2021
in ದಾವಣಗೆರೆ
0
ಬ್ಲಾಕ್‌ ಫಂಗಸ್‌ ಬಗ್ಗೆ ಆತಂಕ ಬೇಡ: ಆರೋಗ್ಯ ಸಚಿವ ಸುಧಾಕರ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ದಾವಣಗೆರೆ : ರಾಜ್ಯದ ಕೆಲವೆಡೆ ಕಾಣಿಸಿಕೊಂಡಿರುವ ಬ್ಲಾಕ್‌ ಫಂಗಸ್‌ ರೋಗದ ಬಗ್ಗೆ ಕೆಲವರು ವದಂತಿಗಳನ್ನು ಹರಡಿಸುತ್ತಿದ್ದು ಈ ಬಗ್ಗೆ ಜನತೆ ಭಯ ಭೀತರಾಗುವ ಅಗತ್ಯವಿಲ್ಲ. ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ಇದೊಂದು ಶಿಲೀಂದ್ರದಿಂದ ಉಂಟಾಗುವ ರೋಗ. ಇದಕ್ಕೆ ಅನೇಕ ಕಾರಣಗಳಿವೆ. ಅತಿಯಾದ ಸ್ಟಿರಾಯ್ಡ್‌ ಸೇವನೆ, ಹೆಚ್ಚಿನ ಆಕ್ಸಿಜನ್‌ ಬಳಕೆ, ಹೆಚ್ಚು ಅವಧಿಗೆ ಐಸಿಯುನಲ್ಲಿರುವುದು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು, ಮಧುಮೇಹ, ಮೂತ್ರಪಿಂಡ, ಕ್ಯಾನ್ಸರ್‌ ಮುಂತಾದ ರೋಗಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ರೋಗ ನಿರೋಧಕ ಶಕ್ತಿ ಕಡಿಮೆ ಆಗಿದ್ದಲ್ಲಿ ಅಂತವರಿಗೆ ಕೋವಿಡ್‌ ಬಂದು ಹೋದ ನಂತರ ಈ ಕಾಯಿಲೆ ಕಾಣಿಸಿಕೊಳ್ಳುತ್ತಿದೆ ಎಂದು ಕೋವಿಡ್‌ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ದಾವಣಗೆರೆಯಲ್ಲಿ ಮಾತನಾಡಿದರು.

ಈಗಾಗಲೇ ಈ ರೋಗದ ಪತ್ತೆ, ಚಿಕಿತ್ಸೆ ಮತ್ತು ಔಷಧೋಪಚಾರಗಳ ಬಗ್ಗೆ ವರದಿ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ. ಇಂದು ಅವರು ವರದಿ ನೀಡುವ ನಿರೀಕ್ಷೆಯಿದೆ. ಆರಂಭಿಕ ಹಂತದಲ್ಲಿ ಇಎನ್‌ಟಿ ತಜ್ಞರು ಪರಿಶೀಲನೆ ನಡೆಸಬೇಕು. ಹೀಗಾಗಿ ಕೋವಿಡ್‌ ನಿಂದ ಗುಣಮುಖರಾದ ಎಲ್ಲರಲ್ಲಿ ಈ ಕಾಯಿಲೆ ಸಂಬಂಧ ತಪಾಸಣೆ ನಡೆಸಬೇಕು ಎಂದು ಸೂಚನೆ ನೀಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರಕ್ಕೆ ಮನವಿ
ಫಂಗಸ್‌ ಚಿಕಿತ್ಸೆಗೆ ಸಂಬಂಧಿಸಿದ ಔಷಧದ ಸರಬರಾಜು ಕಡಿಮೆಯಿದೆ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ರಾಜ್ಯಕ್ಕೆ ಕಳುಹಿಸಿಕೊಡುವಂತೆ ಕೇಂದ್ರ ಸಚಿವ ಸದಾನಂದಗೌಡರಿಗೆ ಮನವಿ ಮಾಡಲಾಗಿದೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಔಷಧ ಲಭ್ಯವಾಗಲಿದೆ. ಈಗಾಗಲೇ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಂತೆ ಸೂಚನೆಯನ್ನೂ ನೀಡಲಾಗಿದೆ. ಹೀಗಾಗಿ ಜನರು ಆತಂಕ ಪಡುವ ಭಯಭೀತರಾಗುವ ಅಗತ್ಯವಿಲ್ಲ ಎಂದರು.

ಇನ್ನೂ ಕೋವಿಡ್‌ ಎರಡನೇ ಅಲೆ ಕೆಲ ಜಿಲ್ಲೆಗಳಲ್ಲಿ ಹೊರತುಪಡಿಸಿ ಹೆಚ್ಚಿನ ಜಿಲ್ಲೆಗಳಲ್ಲಿ ಇಳಿಮುಖ ಸ್ಥಿತಿಯಲ್ಲಿದೆ. ಇದು ಸಮಾಧಾನಕರ ಅಂಶ. ರಾಜ್ಯ ಸರ್ಕಾರ ಕೈಗೊಂಡ ಕಠಿಣ ಕ್ರಮ ಮತ್ತು ಜನತೆಯ ಸಹಕಾರದಿಂದ ಇದು ಸಾಧ್ಯವಾಗಿದೆ. ಇದೇ ರೀತಿ ಜನತೆ ಸಹಕಾರ ನೀಡಿದರೆ ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಬಹುದಾಗಿದೆ ಎಂದು ತಿಳಿಸಿದರು.

ಕೆಲ ಲೋಪಗಳಿವೆ:
ಕೋವಿಡ್‌ ನಿಯಂತ್ರಣ ವಿಷಯಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯಲ್ಲಿ ಕೆಲ ನ್ಯೂನ್ಯತೆಗಳಿವವೆ. ಅವುಗಳ ನಿವಾರಣೆಗೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಆರು ತಿಂಗಳ ಹಿಂದೆಯೇ ಕಳುಹಿಸಿಕೊಟ್ಟಿದ್ದ ವೆಂಟಿಲೇಟರ್‌ಗಳನ್ನು ಕೆಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಿಲ್ಲ. ಹಾಗೆಯೇ ಗ್ರಾಮ ಮಟ್ಟದ ಟಾಸ್ಕ್‌ಫೋರ್ಸ್‌ಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿಲ್ಲ. ರೋಗ ಲಕ್ಷಣಗಳಿಲ್ಲದ ಸೋಂಕಿತರನ್ನು ಕೋವಿಡ್‌ ಆರೈಕೆ ಕೇಂದ್ರಗಳಿಗೆ ಕಡ್ಡಾಯವಾಗಿ ದಾಖಲು ಮಾಡಿ ಔಷಧೋಪಚಾರ ನೀಡಲು ಸೂಚಿಸಲಾಗಿದೆ. ಮುಂದಿನ ವಾರದೊಳಗೆ ಈ ಎಲ್ಲಾ ಲೋಪಗಳನ್ನು ಸರಿಪಡಿಸಲು ಗಡುವು ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಇರುವ ಖಾಸಗಿ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ಶೇಕಡಾ ಎಪ್ಪತ್ತೈದರಷ್ಟು ಹಾಸಿಗೆಗಳನ್ನು ನೀಡಬೇಕು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ ಐವತ್ತರಷ್ಟು ಹಾಸಿಗೆ ನೀಡಬೇಕು ಎಂಬ ವಿಷಯ ಸರಿಯಾಗಿ ಪಾಲನೆ ಆಗಿಲ್ಲ. ಒಂದೆರಡು ದಿನದಲ್ಲಿ ಜಿಲ್ಲಾಡಳಿತ ಈ ಬಗ್ಗೆ ಕ್ರಮ ಜರುಗಿಸಬೇಕು. ಅಗತ್ಯವಾದರೆ ಕಾನೂನು ಮೂಲಕ ಶಿಸ್ತುಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರಿಗೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕೊರತೆ ಪ್ರಶ್ನೆಯಿಲ್ಲ
ಜಿಲ್ಲೆಯಲ್ಲಿ ಆಕ್ಸಿಜನ್‌ ಮತ್ತು ಔಷಧಗಳ ಕೊರತೆಯಿಲ್ಲ. ಅಗತ್ಯ ಪ್ರಮಾಣದ ಎಲ್ಲ ನೆರವನ್ನೂ ಒದಗಿಸಲಾಗಿದೆ. ಜಿಲ್ಲೆಯ ವ್ಯಾಪ್ತಿಗೆ ಸೇರಿರುವ ಎಲ್ಲಾ ತಾಲ್ಲೂಕುಗಳಲ್ಲಿ ಕನಿಷ್ಟ ನೂರು ಹಾಸಿಗೆಗಳಿಗೆ ಆಕ್ಸಿಜನ್‌ ಸಂಪರ್ಕ ನೀಡುವ ಆಲೋಚನೆ ಇದೆ. ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ ಎಲ್ಲಾ ಹಾಸಿಗೆಗಳಿಗೆ ಆಕ್ಸಿಜನ್‌ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ವ್ಯಾಕ್ಸಿನ್‌ ವಿಷಯದಲ್ಲೂ ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು. ಶಿಕ್ಷಕರನ್ನೂ ಆ ಪಟ್ಟಿಗೆ ಸೇರಿಸಲಾಗಿದೆ. ಒಟ್ಟಾರೆ ಮೂರನೇ ಅಲೆ ಬರುವ ವೇಳೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಖಾಲಿ ಇರುವ ವೈದ್ಯರ ಬಹುತೇಕ ಎಲ್ಲಾ ಹುದ್ದೆಗಳನ್ನು ಒಂದು ವಾರದಲ್ಲಿ ತುಂಬಲಾಗುವುದು. ಹಾಗೆಯೇ ತಜ್ಞರ ಹುದ್ದೆಗಳನ್ನು ನೇಮಕ ಮಾಡಲಾಗುತ್ತಿದೆ. ಕೆಲ ದಿನಗಳಲ್ಲಿ ಆ ಪ್ರಕ್ರಿಯೆ ಕೂಡ ಮುಗಿಯಲಿದೆ. ಗುತ್ತಿಗೆ ಆಧಾರದಲ್ಲಿ ಅಗತ್ಯ ಸಂಖ್ಯೆ ಸಿಬ್ಬಂದಿ ನೇಮಕ ಅಧಿಕಾರವನ್ನೂ ಜಿಲ್ಲಾಡಳಿತಗಳಿಗೆ ನೀಡಲಾಗಿದೆ ಎಂದು ಸಚಿವ ಸುಧಾಕರ್‌ ವಿವರಿಸಿದರು.

ಸಂಸದರಾದ ಜಿ.ಎಂ, ಸಿದ್ದೇಶ್ವರ್‌, ನಗರಪಾಲಿಕೆ ಮೇಯರ್‌ ಎಸ್‌,ಟಿ ವಿರೇಶ್‌, ಚನ್ನಗಿರಿ ಶಾಸಕರಾದ ಮಾಡಾಳು ವಿರುಪಾಕ್ಷಪ್ಪ, ದಾವಣಗೆರೆ ಶಾಸಕ ರವೀಂದ್ರನಾಥ್‌, ಮಾಯಕೊಂಡ ಶಾಸಕರಾದ ಪ್ರೊ.ಲಿಂಗಣ್ಣ, ಹರಿಹರ ಶಾಸಕರಾದ ಎಸ್. ರಾಮಪ್ಪ, ವಿಧಾನಪರಿಷತ್‌ ಸದಸ್ಯರಾದ ಭೋಜೇಗೌಡ, ಜಿಲ್ಲಾಧಿಕಾರಿ ಮಹಂತೇಶ್‌ ಬೀಳಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯಮಹಂತೇಶ್‌, ಎಸ್ಪಿ ಹನುಮಂತರಾಯ, ಡಿಎಚ್‌ಒ ಡಾ. ನಾಗರಾಜ್‌ ಅವರು ಸಭೆಯಲ್ಲಿ ಹಾಜರಿದ್ದರು.

ಚಿಗಟೇರಿ ಆಸ್ಪತ್ರೆಗೆ ಭೇಟಿ
ಇದಕ್ಕೂ ಮೊದಲು ಬೆಳಗ್ಗೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸುಧಾಕರ್‌ ಅವರು ಒಂದೂವರೆ ತಾಸಿಗೂ ಹೆಚ್ಚು ಕಾಲ ಕೋವಿಡ್‌ ಚಿಕಿತ್ಸೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಕಂಡು ಬಂದ ಲೋಪಗಳ ಬಗ್ಗೆ ಅಧಿಕಾರಿಗಳನ್ನುತರಾಟೆ ತೆಗೆದುಕೊಂಡ ಸಚಿವರು, ಎಲ್ಲಾ ಕೊರತೆಗಳನ್ನು ಒಂದೆರಡು ದಿನಗಳಲ್ಲಿ ನಿವಾರಿಸಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Black fungusDavanagereKannada NewsKannada News LiveKannada News OnlineKannada News WebsiteKannada WebsiteLatest News KannadaMinister SudhakarNews in KannadaNews Kannadaಕೋವಿಡ್ ಎರಡನೇ ಅಲೆದಾವಣಗೆರೆಬ್ಲಾಕ್ ಫಂಗಸ್ಸಚಿವ ಡಾ. ಕೆ. ಸುಧಾಕರ್‌
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಳ್ಳಕೆರೆ: ಫ್ರಂಟ್ ಲೈನ್ ವಾರಿಯರ್ಸ್ ಪತ್ರಕರ್ತರಿಗೂ ಸುರಕ್ಷತಾ ಕಿಟ್ ನೀಡಲು ಮನವಿ

Next Post

BIG BREAKING NEWS: ರಾಜ್ಯದಾದ್ಯಂತ ಜೂನ್ 7ರವರೆಗೆ ಲಾಕ್‌ಡೌನ್ ವಿಸ್ತರಣೆ: ಪೊಲೀಸರಿಗೆ ಫುಲ್ ಪವರ್

kalpa News

kalpa News

Next Post
ಕೊರೋನಾ ಸ್ಪೋಟ: ಹಾಸನದಲ್ಲಿ ಮೇ 4ರವರೆಗೆ ಲಾಕ್‌ಡೌನ್: ಡಿಸಿ ಆದೇಶಕ್ಕೆ ವರ್ತಕರು ಕಂಗಾಲು

BIG BREAKING NEWS: ರಾಜ್ಯದಾದ್ಯಂತ ಜೂನ್ 7ರವರೆಗೆ ಲಾಕ್‌ಡೌನ್ ವಿಸ್ತರಣೆ: ಪೊಲೀಸರಿಗೆ ಫುಲ್ ಪವರ್

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL