No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ಕೋಮು ಸಂಘರ್ಷ ಸೃಷ್ಟಿಸುವವರಿಗೆ ಸರ್ಕಾರದ ಸವಲತ್ತು ಮೊಟಕುಗೊಳಿಸಿ: ರೇಣುಕಾಚಾರ್ಯ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 21, 2022
in ದಾವಣಗೆರೆ
0
ಕೋಮು ಸಂಘರ್ಷ ಸೃಷ್ಟಿಸುವವರಿಗೆ ಸರ್ಕಾರದ ಸವಲತ್ತು ಮೊಟಕುಗೊಳಿಸಿ: ರೇಣುಕಾಚಾರ್ಯ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  |

ಪದೇ ಪದೇ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಿ ಅಶಾಂತಿ ಮೂಡಿಸುತ್ತಿರುವ ದೇಶ ದ್ರೋಹಿಗಳಿಗೆ ಮತದಾನದ ಹಕ್ಕು, ಬಿಪಿಎಲ್ ಪಡಿತರ ಚೀಟಿ ಸೇರಿದಂತೆ ಸರ್ಕಾರದ ಸವಲತ್ತುಗಳನ್ನು ಮೊಟಕುಗೊಳಿಸಬೇಕೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ- ನ್ಯಾಮತಿ ವಿಧಾನಸಭೆ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ MP Renukacharya ಒತ್ತಾಯಿಸಿದ್ದಾರೆ.

ಜಿಲ್ಲೆಯ ನ್ಯಾಮತಿ ತಾಲ್ಲೂಕು ಕುಂಕುವ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಇಲ್ಲಿಯ ಅನ್ನ,ಗಾಳಿ, ನೀರು ಸೇವನೆ ಮಾಡಿ ಕೊನೆಗೆ ನಮ್ಮಲ್ಲೇ ವಿದ್ರೋಹಿ ಚಟುವಟಿಕೆಗಳನ್ನು ನಡೆಸುವವರಿಗೆ ಸುಮ್ಮನೆ ಬಿಡಬಾರದು. ಸರ್ಕಾರದ ಸವಲತ್ತುಗಳನ್ನು ಸಂಪೂರ್ಣವಾಗಿ ಹಿಂಪಡೆದಾಗಲೇ ಇವರು ಸರಿದಾರಿಗೆ ಬರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಲವು ಮೌಲ್ವಿಗಳು ಎಲ್ಲಿಂದ ಬರುತ್ತಾರೆ, ಏನು ಮಾಡುತ್ತಾರೆ? ಇವರಿಗೆ ಆಶ್ರಯ ಕೊಡುವವರು ಯಾರು? , ಗುರುತಿನ ಚೀಟಿಯೂ ಇರುವುದಿಲ್ಲಘಿ, ಆಧಾರ್ ಕಾರ್ಡ್ ಇರುವುದಿಲ್ಲ. ಇಲ್ಲಿದ್ದುಕೊಂಡೇ ಕೊನೆಗೆ ಒಂದು ದಿನ ಬೆಂಕಿ ಹಚ್ಚಿ ಬೇರೆ ಕಡೆ ಪರಾರಿಯಾಗುತ್ತಾರೆ. ಇಂಥವರನ್ನು ಸರ್ಕಾರ ಗುರುತಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.

ಕೆಜಿಹಳ್ಳಿ-ಡಿಜೆಹಳ್ಳಿಯಿಂದ ಆರಂಭವಾದ ಈ ಕೋಮುಗಲಭೆ ಈಗ ಹುಬ್ಬಳ್ಳಿ ತಲುಪಿದೆ. ಯಾರು ಇಂತಹ ಘಟನೆಗಳನ್ನು ಪದೇ ಪದೇ ಮಾಡುತ್ತಾರೋ ಅಂಥವರನ್ನು ಮುಲಾಜಿಲ್ಲದೆ ನೇಣಿಗೆ ಹಾಕಬೇಕು ಎಂದು ಆಗ್ರಹಿಸಿದರು.

ಇವರಿಗೆ ಅಂತಿಂಥ ಶಿಕ್ಷೆ ನೀಡಿದರೆ ಸರಿಯಾಗುವುದಿಲ್ಲ. ಕೋಮುಗಲಭೆ ನಡೆಸುವವರನ್ನು ಗಲ್ಲಿಗೆ ಹಾಕಿದಾಗ ಮಾತ್ರ ಮುಂದಿನವರಿಗೆ ಪಾಠವಾಗುತ್ತದೆ. ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಗಂಭೀರವಾಗಿ ಪರಿಗಣಿಸಲಿ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಕಾರಣ:
ಕಳೆದ ಶನಿವಾರ ಹಳೇಹುಬ್ಬಳ್ಳಿಯಲ್ಲಿ ನಡೆದಿರುವ ಕೋಮುಗಲಭೆಗೆ ಕಾಂಗ್ರೆಸ್ ನಾಯಕರ ಕುಮ್ಮಕು ಕಾರಣ. ಅಲ್ತಾಪ್ ಹಳ್ಳೂರ ಯಾವ ಪಕ್ಷಕ್ಕೆ ಸೇರಿದವನು ಎಂದು ಅವರು ಪ್ರಶ್ನಿಸಿದರು.

ಅಮಾಯಕ ಹುಡುಗನೊಬ್ಬ ವಾಟ್ಸಪ್‍ನಲ್ಲಿ ಬಂದ ಸ್ಟೇಟಸ್‍ನ್ನು ಹಾಕಿದ್ದಕ್ಕೆ ಗಲಭೆ ನಡೆಸುವ ಅವಶ್ಯಕತೆ ಇತ್ತೆ? ಮೌಲ್ವಿ ಮತ್ತು ಅಲ್ತಾಪ್ ಹಳ್ಳೂರ ಸೇರಿಕೊಂಡೇ ಜನರನ್ನುಪ್ರಚೋದಿಸಿದ್ದಾರೆ. ಕೇವಲ ಅರ್ಧಗಂಟೆಯೊಳಗೆ ಮೂರು ಟ್ರಾಕ್ಟರ್ ಲೋಡ್ ಕಲ್ಲುಗಳನ್ನು ಯಾವ ಕಾರಣಕ್ಕೆ ಸಂಗ್ರಹಿಸಲಾಗಿತ್ತು ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ನಾಯಕರ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಷಡ್ಯಂತ್ರ ನಡೆಸಲಾಗಿದೆ. ತಕ್ಷಣ ಬೇಷರತ್ತ್ ರಾಜ್ಯದ ಜನತೆಗೆ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.

ನಾವು ದೇವಸ್ತಾನಕ್ಕೆ ಹೋದರೆ ನಮಗೆ ಆರತಿ ಎತ್ತಿ ಪ್ರಸಾದ ತೀರ್ಥ ನೀಡುತ್ತಾರೆ. ನಾಡಿನ ಒಳಿತು ಮತ್ತು ಜನರ ಹಿತಕ್ಕಾಗಿ ನಾವು ಪ್ರಾರ್ಥನೆ ಮಾಡುತ್ತೇವೆ. ಮಸೀದಿ ಮತ್ತು ಮದರಸಾಗಳಲ್ಲಿ ಇದನ್ನು ಕಾಣಲು ಸಾಧ್ಯವೇ ಎಂದು ಅನುಮಾನ ವ್ಯಕ್ತಪಡಿಸಿದರು.

ಮಸೀದಿ ಮತ್ತು ಮದಸರಗಳಲ್ಲಿ ಮದ್ದು, ಗುಂಡು ಸಂಗ್ರಹಣೆ ಮಾಡುತ್ತಾರೆ. ಮದರಸಾಗಳು ಶಿಕ್ಷಣ ನೀಡುವ ಬದಲು ಧರ್ಮ ಪ್ರಚೋದನೆ ಮಾಡುವ ಕೆಲಸ ಮಾಡುತ್ತಿವೆ. ಮುಗ್ಗ ಮಕ್ಕಳ ಮನಸ್ಸನ್ನು ಮೌಲ್ವಿಗಳು ಹಾಳು ಮಾಡುತ್ತಿದ್ದಾರೆ. ತಕ್ಷಣವೇ ರಾಜ್ಯ ಸರ್ಕಾರ ಮದರಸಾ ಮತ್ತು ಮಸೀದಿಗಳಲ್ಲಿ ನಡೆಯುತ್ತಿರುವ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ರೇಣುಕಾಚಾರ್ಯ ಒತ್ತಾಯಿಸಿದರು.

ಹಿಂದೆ ನಾನು ಇದನ್ನು ಹೇಳಿದ್ದಕ್ಕೆ ಕೆಲವರು ನನ್ನ ‌ವಿರುದ್ದ ಪ್ರತಿಭಟನೆ ನಡೆಸಿದರು. ಈಗ ಹುಬ್ಬಳ್ಳಿಯಲ್ಲಿ ಸ್ವತಃ ‌ಧರ್ಮ ಬೋಧನೆ ‌ಮಾಡುವ ಮೌಲ್ವಿಯೇ ಇದರಲ್ಲಿ ‌ಶಾಮೀಲಾಗಿದ್ದಾರೆ.ಬಂಧಿಸುವವರನ್ನು ಅಮಾಯಕರು ಎನ್ನುವ ಮಾಜಿ ಸಿ.ಎಂ ಸಿದ್ದರಾಮಯ್ಯ ಇದಕ್ಕೆ ಉತ್ತರ ಕೊಡಬೇಕು ಎಂದು ಹೇಳಿದರು.

ನಮ್ಮಲ್ಲಿ ಜಾತಿ, ಧರ್ಮ, ಬೇಧವಿಲ್ಲದೆ ಹಿಂದೂ ಮುಸ್ಲಿಂ ಎನ್ನದೆ ನಾವೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಬದುಕಿತ್ತಿ್ದೇವೆ. ಕೆಲವರು ಇದನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ನಿಮ್ಮ ಆಟ ನಡೆಯುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DavanagereKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMP RenukacharyNewsinKannadaNewsKannadaಎಂ.ಪಿ.ರೇಣುಕಾಚಾರ್ಯದಾವಣಗೆರೆ
Share197Tweet123Send
Previous Post

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು

Next Post

50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ಗಳ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ: ಸಿಎಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ಗಳ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ: ಸಿಎಂ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

May 1, 2026
ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

May 1, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

May 1, 2026
ಬಹುಭಾಷಾ ಚಲನಚಿತ್ರ `ವಿಲಕ್ಷ’ ಚಾಪ್ಟರ್-1 ಆ.14ರಂದು ವಿಶ್ವದಾದ್ಯಂತ ಬಿಡುಗಡೆ

ಬಹುಭಾಷಾ ಚಲನಚಿತ್ರ `ವಿಲಕ್ಷ’ ಚಾಪ್ಟರ್-1 ಆ.14ರಂದು ವಿಶ್ವದಾದ್ಯಂತ ಬಿಡುಗಡೆ

May 1, 2026
ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್

ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್

May 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL