ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಯಾವ ಬ್ರಾಣ್ಮಣರೂ ಸಹ ಒಂದು ರೂಪಾಯಿ ನೀಡಿ ಊದಿನ ಕಡ್ಡಿ ತರುವುದೂ ಇಲ್ಲ, ಹಚ್ಚುವುದೂ ಇಲ್ಲ ಎನ್ನುವ ಮೂಲಕ ವಿಪ್ರ ಸಮುದಾಯದ ವಿರುದ್ಧ ಸಚಿವ ಕೆ.ಎನ್. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬ್ರಾಹ್ಮಣರು ಈಗ ಹೋಮ ಹವನ ಕಡಿಮೆ ಮಾಡಿದ್ದಾರೆ. ಆದರೆ ನಾವೇ ಶೂದ್ರರೇ ಹೆಚ್ಚು ಹೋಮ, ಹವನ ಮಾಡುತ್ತಿದ್ದೇವೆ. ಅವರು ಒಂದು ರೂಪಾಯಿ ಖರ್ಚು ಮಾಡಿ ಹೂವ, ಊದುಬತ್ತಿ ತರಲ್ಲ, ಬೇರೆಯವರು ತಂದಿದ್ದರಲ್ಲಿ ಪೂಜೆ ಮಾಡ್ತಾರೆ, ಹೀಗೆ ಹೇಳಿದರೆ ನಾನು ಬ್ರಾಹ್ಮಣರ ವಿರೋಧಿ ಅಂತ ಅಲ್ಲ, ಇದು ನಾನು ಹೇಳಿದ್ದಲ್ಲ ನನ್ನ ಸ್ನೇಹಿತರು ಹೇಳಿದ್ದು ಎಂದಿದ್ದಾರೆ.
ಯಾರನ್ನೂ ಮೇಲ್ವರ್ಗದವರೆಂದು ಕರೆಯಬಾರದು, ಹಾಗೆ ಕರೆದರೆ ನಾವು ಕೆಳವರ್ಗದವರು ಎಂದಾಗುತ್ತದೆ. ನಾವೇನು ಕೆಳವರ್ಗದವರಾ ಎಂಬಿತ್ಯಾದಿ ವ್ಯಾಖ್ಯಾನಗಳನ್ನು ಮಾಡಿದ ಅವರು ಈಗಿನ ಸಾಮಾಜಿಕ ಸ್ಥಿತಿಗತಿಗಳನ್ನು ವಿವರಿಸುತ್ತಾ ಈ ಮಾತನ್ನಾಡಿದ್ದಾರೆ.
Also read: ದೇಶದ ಅತ್ಯುನ್ನತ ಸ್ಪೈ ಏಜೆನ್ಸಿ ‘ರಾ’ ಮುಖ್ಯಸ್ಥರಾಗಿ ರವಿ ಸಿನ್ಹಾ ನೇಮಕ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post