ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹರಿಹರ: ಹರಿಹರ ಪೊಲೀಸ್ ಇಲಾಖೆಯಿಂದ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗಿತ್ತು. ಪೊಲೀಸರ ವಸತಿಗೃಹ ಆವರಣದಲ್ಲಿ ನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಶೈಲಾಶ್ರೀ ಇವರು ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು.
ನಂತರ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಕೇವಲ ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಮಾತ್ರ ಗಿಡ ನೆಡುವುದು ಅವುಗಳ ರಕ್ಷಣೆ ಪೋಷಣೆ ಬಗ್ಗೆ ಕಾಳಜಿ ವಹಿಸುವುದು ಅಲ್ಲ ವರ್ಷದ ಮುನ್ನೂರ ಅರವತ್ತೈದು ದಿನವೂ ಪರಿಸರದ ಬಗ್ಗೆ ಕಾಳಜಿ ಇರಬೇಕು. ಪರಿಸರ ಇದ್ದರೆ ಮಾತ್ರ ಮಾನವ ಹಾಗೂ ಪ್ರಾಣಿ ಸಂಕುಲ ಉಳಿಯಲು ಸಾಧ್ಯ. ಎಲ್ಲರೂ ಪರಿಸರದ ಬಗ್ಗೆ ಕಾಳಜಿ ಹೊಂದಿ ಗಿಡಮರ ಬೆಳೆಸುವುದರ ಮೂಲಕ ಅವುಗಳ ರಕ್ಷಣೆಗೆ ಮುಂದಾಗೋಣ ಎಂದರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ವರ್ಗದವರಾದ ಶ್ರೀನಿವಾಸ್, ನಾಗರಾಜ್, ಕೃಷ್ಣ, ಹನುಮಂತಪ್ಪ, ಶಿವು ಉಪಸ್ಥಿತರಿದ್ದರು.
(ವರದಿ: ಪ್ರಕಾಶ್ ಮಂದಾರ, ಹರಿಹರ)
Get In Touch With Us info@kalpa.news Whatsapp: 9481252093




Discussion about this post