ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ದಾವಣಗೆರೆ ಚನ್ನಗಿರಿ ಸಂಪರ್ಕಿಸುವ ರಾಜ್ಯ ಹೆದ್ದಾರಿ ಪಕ್ಕದ ಹದಡಿ ಕೆರೆಯ ಏರಿ ಒಂದು ಭಾಗದಲ್ಲಿ ಸತತ ಕುಸಿತಕ್ಕೊಳಗಾಗುತ್ತಿದ್ದು ಶಾಶ್ವತ ದುರಸ್ತಿಗೆ ಸರ್ಕಾರ 1.70 ಕೋಟಿ ಮಂಜೂರು ಮಾಡಿದೆ ಎಂದು ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜು Minister B A Basavaraju ಹೇಳಿದರು.
ಕೆರೆ ಏರಿಯ ಕುಸಿತದ ಭಾಗ ಪರಿಶೀಲಿಸಿದ ಅವರು ಪತ್ರಕರ್ತರೊಂದಿಗೆ ಮಾತನಾಡಿ ಮಳೆ ಮುಗಿದ ತಕ್ಷಣ ಕಾಮಗಾರಿ ಆರಂಭಿಸಿ ಶೀಘ್ರದಲ್ಲಿ ಕಾಮಗಾರಿ ಮುಗಿಸಲಾಗುವುದು ಹಾಗೂ ಕಾಮಗಾರಿ ಮುಗಿಯುವವರೆಗೆ ಭಾರಿ ವಾಹನಗಳು ಈ ರಸ್ತೆಯಲ್ಲಿ ಸಂಚರಿಸದಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಹಾಗೂ ಎಸ್’ಪಿ ಅವರಿಗೆ ಸೂಚಿಸಲಾಗಿದೆ ಎಂದರು.

Also read: ಮಳೆಯಿಂದ ಮನೆ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಈಶ್ವರಪ್ಪ ಭೇಟಿ
ಮಳೆ ಹಾನಿ ತುರ್ತು ಕಾರ್ಯಗಳಿಗೆ ಸರ್ಕಾರ ಜಿಲ್ಲೆಗೆ 15 ಕೋಟಿ ರೂಗಳನ್ನು ನೀಡಿದೆ ಎಂದರು.











Discussion about this post