Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಾವಣಗೆರೆ

ರೈತರು ಪ್ರಬುದ್ಧರಾಗಿ ಹಕ್ಕು ಚಲಾಯಿಸಬೇಕು: ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅಭಿಪ್ರಾಯ

October 25, 2021
in ದಾವಣಗೆರೆ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ |

ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ತನ್ನ ಕುಟುಂಬ ವರ್ಗಕ್ಕೂ ಅಷ್ಟಾಗಿ ಆದ್ಯತೆ ನೀಡದೆ ತಾನು ದುಡಿವ ಎಲ್ಲವನ್ನು ದೇಶಕ್ಕೆ ನೀಡಿರುವ ರೈತಾಪಿ ವರ್ಗದವರು ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಇಂದು ಕೂಡ ಕತ್ತಲಲ್ಲಿ ಜೀವನ ಸಾಗಿಸುತ್ತಿದ್ದು, ನೀವು ಎಲ್ಲಿಯವರೆಗೂ ಪ್ರಬುದ್ದರಾಗಿ ನಿಮ್ಮ ಹಕ್ಕನ್ನು ನೀವು ಚಲಾಯಿಸುವುದಿಲ್ಲವೋ, ನಿಮಗೆ ಮೋಸ ಮಾಡುತ್ತಿರುವ ವರ್ಗ ಯಾವುದೆಂದು ತಿಳಿದುಕೊಳ್ಳುವುದಿಲ್ಲವೋ ಅಲ್ಲಿಯವರೆಗೂ ನಿಮ್ಮ ಪಡಿಫಟಾಲು ತಪ್ಪುವುದಿಲ್ಲ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅವರು ಹೇಳಿದರು.

ತಾಲೂಕಿನ ಕಾಶಿಪುರ ಗ್ರಾಮದಲ್ಲಿ ಶ್ರೀ ಕಾಶಿಲಿಂಗೇಶ್ವರ ನೀರು ಬಳಕೆದಾರರ ಸಹಕಾರ ಸಂಘ ಹಮ್ಮಿಕೊಂಡಿದ್ದ ವಾರ್ಷಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.



ಪ್ರಸ್ತುತ ಅಡಿಕೆ ಬೆಳೆಗೆ ಉತ್ತಮ ಬೆಲೆ ಬಂದಿದ್ದು, ಅದೇ ರೀತಿ ರೈತರು ಬೆಳೆಯುವ ಆಯಾ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಕ್ಕರೆ ರಾಜ್ಯ ಸರ್ಕಾರ ಸಾಲ ಮನ್ನಾವಾಗಲಿ ಇನ್ನಿತರ ಯೋಜನೆಗಳಾಗಲಿ ಘೋಷಿಸುವ ಅವಶ್ಯಕತೆ ಬೀಳುವುದಿಲ್ಲ, ಬದಲಿಗೆ ರೈತರು ಬೇರೊಬ್ಬರಿಗೆ ಸಾಲ ನೀಡುವ ಮೂಲಕ ಆರ್ಥಿಕ ಸ್ಥಿತಿವಂತರಾಗುತ್ತಾರೆ ಈ ನಿಟ್ಟಿನಲ್ಲಿ ಸರ್ಕಾರ ಆಲೋಚನೆ ಮಾಡಬೇಕು ಎಂದು ಮನವಿ ಮಾಡಿದರು.

ಕೊರೋನಾ ಬಂದಂತಹ ಸಂದರ್ಭದಲ್ಲಿ ದೇಶದ ಎಲ್ಲಾ ರಂಗಗಳು ಬಾಗಿಲು ಮುಚ್ಚಿದ್ದವು, ಆದರೆ ರೈತರು ಮಾಡುವ ಕಾಯಕ ನಿಂತಿರಲಿಲ್ಲ. ಒಂದು ವೇಳೆ ಅವರು ತಮ್ಮ ಕಾಯಕವನ್ನು ನಿಲ್ಲಿಸಿದ್ದರೆ ಕೊರೋನಾ ಮಾರಕ ರೋಗದಿಂದ ಸಂಭವಿಸಿದ ಸಾವಿಗಿಂತ ಹಸಿವಿನಿಂದ ಸಂಭವಿಸುವ ಸಾವಿನ ವರದಿ ಹೆಚ್ಚಾಗುತ್ತಿತ್ತು, ಹಾಗಾಗಿ ಈ ದೇಶದ ಮಾಲಿಕರು ರೈತಾಪಿ ವರ್ಗದವರಾದ ನಾವಲ್ಲದೆ ಬೇರೆ ಯಾರು ಆಗಲು ಸಾಧ್ಯ ಎಂದು ಹೆಮ್ಮೆ ಪಟ್ಟರು.

ಭಗವಂತ ಕೊರೋನಾ ಮಹಾಮಾರಿಯನ್ನು ನಮ್ಮೆಲ್ಲರ ಅಹಂಕಾರವನ್ನು, ಕೆಟ್ಟ ಮನಸ್ಥಿತಿಯನ್ನು, ಆಡಂಬರದ ಜೀವನ ಶೈಲಿಯನ್ನು, ಅತೀವ ಭ್ರಷ್ಟಾಚಾರವನ್ನು ತೊಲಗಿಸಲು ನೀಡಿರುವ ಶಿಕ್ಷೆ ಎಂದು ನಂಬಿದ್ದೇನೆ, ಹಾಗಾಗಿ ನಾವೆಲ್ಲರೂ ಇದನ್ನು ಅರಿತು ಇರುವ ನಾಲ್ಕು ದಿನಗಳಲ್ಲಿ ಸಮಾಜಕ್ಕಾಗಿ ಒಳ್ಳೆಯ ಕೆಲಸಗಳನ್ನು ಮಾಡಬೇಕು, ಎಷ್ಟೇ ಆಸ್ತಿ ಅಂತಸ್ತು ಮಾಡಿದರು ಕೊನೆಗೆ ನಮ್ಮನ್ನು ಉಳುವುದು ಆರಡಿ ಜಾಗದಲ್ಲಿ, ಹಾಗಾಗಿ ನಾವೆಲ್ಲರೂ ಭೂಮಿಗೆ ಬರುವುದಕ್ಕೆ ಸಮಯ ನಿಗದಿ ಮಾಡಿಕೊಳ್ಳಬಹುದು, ಆದರೆ ಹೋಗುವುದಕ್ಕೆ ನಿಗದಿಯಿಲ್ಲ ಎಂದು ಕಿವಿ ಮಾತು ಹೇಳಿದರು.

ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಯಡಿಯೂಪ್ಪ ಅವರನ್ನು ನಾನು ಈ ಸಂದರ್ಭದಲ್ಲಿ ನೆನಪು ಮಾಡಿಕೊಳ್ಳಲೆಬೇಕು. ಏಕೆಂದರೆ, ಭದ್ರಾ ಕಾಡಾ ಇತಿಹಾಸದಲ್ಲಿ ಒಬ್ಬ ಹೆಣ್ಣು ಮಗಳಿಗೆ ಅಧ್ಯಕ್ಷ ಗಾದಿ ನೀಡಿರಲಿಲ್ಲ ಆದರೆ ಅವರು ನನ್ನ ಹೋರಾಟವನ್ನು ಗುರುತಿಸಿ ಸೂಕ್ತ ಸ್ಥಾನ ಮಾನ ನೀಡಿ ನಿಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಾರೆ, ಒಂದು ವೇಳೆ ಅವರು ಕೂಡ ಗುರುತಿಸದಿದ್ದರೆ ನನ್ನ ಪ್ರತಿಭೆಯನ್ನು ತೋರಿಸಲು ವೇದಿಕೆ ಸಿಗುತ್ತಿರಲಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನಾನು ಅವರಿಗೆ ಋಣಿಯಾಗಿರುತ್ತೇನೆ ಎಂದು ನೆನಪು ಮಾಡಿಕೊಂಡರು.

ಸಹಕಾರ ಸಂಘದ ಅಧ್ಯಕ್ಷರಾದ ಗುರುಮೂರ್ತಿ ಅವರು ಮಾತನಾಡಿ, ನೀವು ಅಧ್ಯಕ್ಷರಾದ ನಂತರ ಕಾಡಾ ಪ್ರಾಧಿಕಾರದ ಕಾರ್ಯ ಚಟುವಟಿಕೆಯನ್ನು ರಾಜ್ಯಕ್ಕೆ ಪರಿಚಯಿಸಿದ್ದೀರಿ, ಭದ್ರಾ ಜಲಾಶಯ ನಿರ್ಮಾಣವಾದ ನಂತರ ನೀರು ತಲುಪದಿದ್ದ ಜಾಗಗಳಿಗೆ ನೀರು ತಲುಪುವಂತೆ ಮಾಡಿ ರೈತ ಸ್ನೇಹಿಯಾಗಿದ್ದೀರಿ, ನಿಮ್ಮನ್ನು ನೇಮಕ ಮಾಡಿ ನಮ್ಮ ಸೇವೆ ಮಾಡಲು ಕಳುಹಿಸಿಕೊಟ್ಟ ಯಡಿಯೂರಪ್ಪ ಅವರಿಗೆ ಈ ಮೂಲಕ ಕೃತಜ್ಞತೆ ಅರ್ಪಿಸುತ್ತೇವೆ ಎಂದು ಧನ್ಯತಾ ಭಾವ ಸಮರ್ಪಿಸಿದರು.

ನಮ್ಮ ಸಂಘದ ವ್ಯಾಪ್ತಿಯಲ್ಲಿ ಜಮೀನುಗಳಿಗೆ ಹೋಗುವ ಅಚ್ಚುಕಟ್ಟು ರಸ್ತೆಗಳು ದುರಸ್ತಿಯ ಕಾರಣ ನಿತ್ಯ ಕೆಲಸಗಳಿಗೆ ತೊಂದರೆಯಾಗಿದ್ದು, ರಸ್ತೆಗಳು ಅಭಿವೃದ್ದಿ ಮಾಡಲು ಆದ್ಯತೆ ಮೇರೆಗೆ ಅನುದಾನ ನೀಡುವಂತೆ ಒತ್ತಾಯಿಸಿದಾಗ, ಬರುವ ದಿನಗಳಲ್ಲಿ ನೂತನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಭದ್ರಾ ಅಚ್ಚುಕಟ್ಟು ಪ್ರಾಧಿಕಾರವನ್ನು ಮಾದರಿಯಾಗಿ ಅಭಿವೃದ್ದಿ ಮಾಡಲು ಸೂಕ್ತ ಅನುದಾನ ನೀಡುವಂತೆ ಮನವರಿಕೆ ಮಾಡುತ್ತೇನೆ, ಒಂದು ವೇಳೆ ತಡವಾಗುವ ಮುನ್ಸೂಚನೆ ಕಂಡು ಬಂದರೆ ನಾಲೆಗಳಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಿದ ಘಳಿಗೆಯ ದಿನದಿಂದ ಮತ್ತೊಮ್ಮೆ ನಮ್ಮ ವ್ಯಾಪ್ತಿಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರದ ನರೇಗಾ ಅನುದಾನವನ್ನು ಬಳಸಿಕೊಂಡು ರಸ್ತೆ ಅಭಿವೃದ್ದಿ, ನಾಲಾ ಸ್ವಚ್ಛತೆಗೆ ಚಾಲನೆ ನೀಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಾಶಿ ಲಿಂಗೇಶ್ವರ ನೀರು ಬಳಕೆದಾರರ ಸಂಘದ ಅಧ್ಯಕ್ಷರಾದ ಗುರುಮೂರ್ತಿ ಅವರು, ನೀರಾವರಿ ಇಲಾಖೆಯ ಅಧಿಕಾರಿಗಳಾದ ವಿಜಯ್, ಪರಮೇಶ್ವರಪ್ಪ ಹಾಗೂ ಭದ್ರಾ ಕಾಡಾ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಾಗೇಂದ್ರ ಅವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bhadra CadaDavanagereKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಕಾಡಾದಾವಣಗೆರೆ
Previous Post

ವಿದ್ಯಾರ್ಥಿಗಳಿಗೆ ನೋಟ್‌ಪುಸ್ತಕ, ಹೂವು, ಸಿಹಿ ನೀಡಿ ಸ್ವಾಗತಿಸಿದ ಶಿಕ್ಷಣ ಸಚಿವರು

Next Post

ಕಲಾವಿದರ ಸಹಾಯಾರ್ಥ ಹೊಸಪೇಟೆಯಲ್ಲಿ ನಡೆದ ಮಜಾಭಾರತ ಕಾಮಿಡಿ ಕಿಲಾಡಿಗಳು ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಲಾವಿದರ ಸಹಾಯಾರ್ಥ ಹೊಸಪೇಟೆಯಲ್ಲಿ ನಡೆದ ಮಜಾಭಾರತ ಕಾಮಿಡಿ ಕಿಲಾಡಿಗಳು ಸಂಪನ್ನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!