No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಡಿ.31-ಜ.2 | ಶಿವಮೊಗ್ಗ | ಶ್ರೀಗಂಧದ ಅಪರೂಪದೊಂದು ಕಾರ್ಯಕ್ರಮ | ಶ್ರೀ ಸತ್ಯಾತ್ಮ ತೀರ್ಥರ ಉಪಸ್ಥಿತಿ

"ಶ್ರೀರಾಮನ ಆದರ್ಶ" | ಗುರುಗಳಿಂದ ಅನುಗ್ರಹ ಸಂದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 30, 2024
in Special Articles
0
ಡಿ.31-ಜ.2 | ಶಿವಮೊಗ್ಗ | ಶ್ರೀಗಂಧದ ಅಪರೂಪದೊಂದು ಕಾರ್ಯಕ್ರಮ | ಶ್ರೀ ಸತ್ಯಾತ್ಮ ತೀರ್ಥರ ಉಪಸ್ಥಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಜಗತ್ತಿನ ಸಾಹಿತ್ಯದಲ್ಲಿಯೇ ಅಗ್ರಮಾನ್ಯವಾದ ಕೃತಿಯೆಂದು ಭಾಜನವಾಗಿರುವ ಆದಿ ಕಾವ್ಯವೆಂದೇ ಕರೆಸಿಕೊಳ್ಳುವ ಕೃತಿ ಶ್ರೀಮದ್ ರಾಮಾಯಣ. ಇದು ಆದಿ ಕವಿಯಾದ ವಾಲ್ಮೀಕಿಯಿಂದ ವಿರಚಿತವಾಗಿದ್ದು ‘ಚತುರ್ವಿಂಶತಿ ಸಾಹಸ್ರೀ ಸಂಹಿತಾ’ ಎಂದು ಕರೆಯುವ ಈ ಐತಿಹಾಸಿಕ ಮಹಾಕಾವ್ಯ ಪ್ರಸಿದ್ಧ ಗಾಯತ್ರಿ ಮಂತ್ರದ ಅಕ್ಷರಗಳಲ್ಲಿರುವ ಸಂಖ್ಯೆಯ ಸಹಸ್ರಗುಣವಾದ 24,000 ಶ್ಲೋಕಗಳನ್ನು ಹೊಂದಿದೆ.

ಪ್ರಸ್ತುತ ರಾಮಾಯಣ #Ramayana ಕಾವ್ಯದಲ್ಲಿ ರಾಮನು ಮಾತಾ ಪಿತೃ ಭಕ್ತನೂ, ಬಂಧು ನಿಷ್ಠೆ ಹೊಂದಿದವನೂ, ಮಹಾವೀರ, ಸತ್ಯವಾದಿ, ಧರ್ಮಪಾಲಕ, ದುಷ್ಟಸಂಹಾರಕನಾಗಿ ಚಿತ್ರಿತನಾದರೆ, ಪಾವಿತ್ರ್ಯ ದ ಸಂಕೇತವೇ ಸೀತೆಯಾಗಿದ್ದಾಳೆ. ಆಕೆ ಶ್ರೀರಾಮನ ಸಹಧರ್ಮಚಾರಿಣಿ. ಲಕ್ಷ್ಮಣ ರಾಮನ ನೆರಳಿನಂತೆ ಆತನ ಹಿಂಬಾಲಕ. ಭರತನ ಭ್ರಾತೃಪ್ರೇಮ, ಹನುಮನ ಸ್ವಾಮಿ ಭಕ್ತಿ, ಶ್ರೀರಾಮ – ಸುಗ್ರೀವ – ವಿಭೀಷಣರ ಸ್ನೇಹ. ಆನಂತರ ದುಷ್ಟತೆಯ ಪ್ರತೀಕವಾದ ರಾವಣ ಸಂಹಾರ. ಅಂತ್ಯದಲ್ಲಿ ಧರ್ಮಕ್ಕೆ ಜಯವೆಂಬ ಪ್ರತಿಪಾದನೆ. ಮೊದಲಾದ ವಿಷಯಗಳು ನಿರೂಪಿತವಾಗಿದೆ. ಹೀಗೆ ಉತ್ತಮ ಆದರ್ಶಗಳನ್ನು, ಉಜ್ವಲ ಧರ್ಮವನ್ನು, ಸುಂದರವಾಗಿ ಮತ್ತು ಹೃದಯ ಸ್ಪರ್ಶಿಯಾಗಿ ಕಟ್ಟಿಕೊಡುವ ಕಾವ್ಯ ಬೇರೆಲ್ಲಿಯೂ ಕಾಣಬರದು. ಇದರಲ್ಲಿನ ರಾಮ ಆದರ್ಶದ ಕೇಂದ್ರ ಬಿಂದು. ಪ್ರಸ್ತುತ ಸಮಾಜದ ತಲ್ಲಣಗಳಿಗೆ ರಾಮರಾಜ್ಯದ ಕಲ್ಪನೆ ಪರಿಹಾರವಾಗಬಲ್ಲದು. ಹಾಗಾಗಿ ಬರೀ ರಾಮರಾಜ್ಯ ಅಂದರೆ ಸಾಕಾಗದು, ಬದಲಿಗೆ ರಾಮನ ಆದರ್ಶ ಹೇಗಿತ್ತು ಅನ್ನೋದನ್ನ ತಿಳಿಯಬೇಕು.
‘ರಾಮೋ ವಿಗ್ರಹವಾನ್ ಧರ್ಮಃ’ ಎಂದು ಹೇಗೆ ಹೇಳಿದ್ದಾರೆಂದು ತಿಳಿಯುವ ಅಗತ್ಯವಿದೆ. ಆಗ ಮಾತ್ರ ಮಾತು ಕೃತಿಯಾಗಬಹುದು. ಆದ್ದರಿಂದ ಈ ಒಂದು ಉದಾತ್ತ ಚಿಂತನೆಯಿಂದಲೇ ರಾಮರಾಜ್ಯದ ಕಲ್ಪನೆಯೊಂದಿಗೆ ರಾಮನ ಸಂದೇಶ ಪ್ರಸಾರವಾಗಬೇಕು ಅನ್ನುವ ದೃಷ್ಟಿಯಿಂದಲೇ ಸ್ವಾಮಿಗಳವರಲ್ಲಿ ವಿಶೇಷವಾಗಿ ವಿನಂತಿ ಮಾಡಿ ಈ ವಿಷಯವನ್ನೇ ಪ್ರವಚನ ಹಾಗೂ ಅನುಗ್ರಹ ಸಂದೇಶಕ್ಕೆ ಇಡಲಾಗಿದೆ.

ಮೌಲ್ಯಗಳ ಕೊರತೆ ಈ ದಿನಗಳಲ್ಲಿ ಹೆಚ್ಚು ಕಂಡುಬರುವ ವಿಷಯ. ಕುಟುಂಬ ವ್ಯವಸ್ಥೆ ಸದೃಢವಾಗಿರಲು ರಾಮನ ಆದರ್ಶ ಬೇಕು. ಆತ ಏಕಪತ್ನಿ ವ್ರತಸ್ಥ, ಭರತ ಲಕ್ಷ್ಮಣರನ್ನು ಒಟ್ಟಿಗೆ ಕರೆದೊಯ್ದು ಭಾತೃತ್ವದ ಗಟ್ಟಿಯಾದ ಪರಿಕಲ್ಪನೆ ನೀಡಿದ. ಅಸೂಯೆ ಅಂದು ಕೂಡ ಇತ್ತು. ಆದರೆ ಕುಟುಂಬ ಹಾಳಾಗಲಿಲ್ಲ. ಹೀಗೆ ಇನ್ನೂ ಹತ್ತು ಹಲವು ಕೌಟುಂಬಿಕ ಮೌಲ್ಯಗಳನ್ನು ರಾಮಾಯಣದಲ್ಲಿರುವುದನ್ನು ಶ್ರೀಗಳವರು ತಮ್ಮ ಪ್ರವಚನದಲ್ಲಿ ಕಟ್ಟಿಕೊಡಲಿದ್ದಾರೆ. ನಮ್ಮ ಯೋಚನೆಗಿಂತಲೂ ಬೇರೆ ಬೇರೆ ಆಯಾಮಗಳಲ್ಲಿ, ಕ್ಲಿಷ್ಟ ವಿಷಯಗಳನ್ನು ಸರಳ ಸುಲಭವಾದ ಶೈಲಿಯಲ್ಲಿ ತಿಳಿಸುವುದೇ ಸ್ವಾಮಿಗಳವರ ವಿಶೇಷತೆ. ಹಾಗಾಗಿಯೇ ಶ್ರೀಗಂಧ ಆಯೋಜಿಸಿದೆ ಈ ಕಾರ್ಯಕ್ರಮ.

ಶ್ರೀಗಂಧ #SriGandha ಎಂದರೆ ಸದ್ಭಾವ, ಸದ್ವಿಚಾರ, ಸದಭಿರುಚಿ, ಸತ್ಕಾರ್ಯ ಎನ್ನುವುದಕ್ಕೆ ಅನ್ವರ್ಥವಾಗಿರುವಂತೆ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಿ ಕಲಾರಾಧಕರ ಮೆಚ್ಚುಗೆಗೆ ಪಾತ್ರವಾಗಿದ್ದು. ಇದಕ್ಕೆ ಪ್ರೇರಕ ಶಕ್ತಿಯಾಗಿ ನಿಂತವರು ಸನ್ಮಾನ್ಯ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಶ್ರೀಗಂಧದ ಅಧ್ಯಕ್ಷರಾದ ಶ್ರೀ ಕೆ.ಎಸ್. ಈಶ್ವರಪ್ಪನವರು. #KSEshwarappa ನಾಡಿನ ಖ್ಯಾತನಾಮರ ಉಪನ್ಯಾಸ, ಗಾಯನ, ನಾಟ್ಯವೇ ಮೊದಲಾದ ಆಧ್ಯಾತ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದ ಸಂಸ್ಥೆ. ಈಗ ಮತ್ತೊಂದು ಜ್ಞಾನ ಯಜ್ಞಕ್ಕೆ ತಯಾರಾಗಿದೆ. ಖ್ಯಾತವಾಗ್ಮಿಗಳು ನಾಡಿನ ಅಗ್ರಮಾನ್ಯ ಸಂತರಲ್ಲಿ ಒಬ್ಬರಾದ ಜಗದ್ಗುರು ಶ್ರೀಮನ್ ಮಧ್ವಾಚಾರ್ಯ #Madhvacharya ಮೂಲ ಮಹಾಸಂಸ್ಥಾನ ಶ್ರೀಮದ್ ಉತ್ತರಾದಿ ಮಠಾಧೀಶರಾದ ಶ್ರೀ ಶ್ರೀ 1008 ಶ್ರೀ ಸತ್ಯಾತ್ಮತೀರ್ಥ ಶ್ರೀ ಪಾದಂಗಳವರಿಂದ ಸಾರ್ವಜನಿಕವಾಗಿ ಮೂರು ದಿನಗಳ ‘ಶ್ರೀ ರಾಮನ ಆದರ್ಶ’ ಎಂಬ ವಿಶೇಷ ಪ್ರವಚನ ಹಾಗೂ ಆಶೀರ್ವಚನ ನೀಡುವ ಕಾರ್ಯಕ್ರಮ ಆಯೋಜಿಸಿದೆ.

ಉತ್ತರಾದಿ ಮಠಾಧೀಶರು ಗುರುಗಳೂ ಹೌದು. ಖ್ಯಾತ ವಾಗ್ಮಿಗಳೂ ಹೌದು. ತಮ್ಮ ಪ್ರಖರ ವಾಗ್ಝರಿಯಿಂದಲೇ ಎಲ್ಲರಿಗೂ ಚಿರಪರಿಚಿತರಾದ ಶ್ರೀಗಳು ಸೆಲೆಬ್ರಿಟಿ ಪಟ್ಟಕ್ಕೇರಿದ್ದಾರೆ. ಅವರ ಪ್ರವಚನದ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ಧಿಯಾಗಿರುವುದನ್ನು ನಾವಿಗಾಗಲೇ ಕಂಡಿದ್ದೇವೆ. ಅತ್ಯಂತ ಪ್ರೇರಣಾದಾಯಿಯಾದ ಪ್ರವಚನ ಅವರದು. ಅವರ ಪ್ರವಚನದಿಂದಲೇ ಅನೇಕರ ಬಾಳು ಬೆಳಗಿದ್ದನ್ನು ಕಂಡಿದ್ದೇವೆ. ಅಂತಹ ಮಹನೀಯರು ನಮ್ಮ ಶಿವಮೊಗ್ಗ ನಗರಕ್ಕೆ ಆಗಮಿಸಿ ನಮ್ಮನ್ನೆಲ್ಲ ಅನುಗ್ರಹಿಸಲಿದ್ದಾರೆ.
1996 ಏಪ್ರಿಲ್ 24ರಂದು ಶ್ರೀ ಸತ್ಯಪ್ರಮೋದ ತೀರ್ಥ ಸ್ವಾಮೀಜಿಯವರ #SatyatmaThirthaSwamiji ಸಮ್ಮುಖದಲ್ಲಿ ತಮಿಳುನಾಡಿನ ತಿರು ಕೊಯ್ಲೂರು ರಘೋತ್ತಮ ತೀರ್ಥ ಬೃಂದಾವನದ ಸನ್ನಿಧಿಯಲ್ಲಿ, ಬ್ರಹ್ಮಚರ್ಯದಿಂದ ತಮ್ಮ 23ನೇ ವಯಸ್ಸಿನಲ್ಲಿ ಸರ್ವಜ್ಞರಾಗಿದ್ದವರು ಸನ್ಯಾಸ ದೀಕ್ಷೆ ಸ್ವೀಕರಿಸಿ ಸತ್ಯಾತ್ಮತೀರ್ಥರೆಂದು ನಾಮಾಂಕಿತರಾದರು. ಈ ರೀತಿಯಾಗಿ ಬ್ರಹ್ಮಚರ್ಯದಿಂದ ಸನ್ಯಾಸತ್ವ ಸ್ವೀಕರಿಸಿದ ಕಾರಣಕ್ಕಾಗಿ ಅವರನ್ನು ಅಭಿನವ ರಘೋತ್ತಮತೀರ್ಥರೆಂದು ಕರೆಯುತ್ತಾರೆ. ಗುರುಗಳು ಬೆಂಗಳೂರು, ಗುಲ್ಬರ್ಗ, ಮಳಖೇಡ, ಉಡುಪಿ, ರಾಜಮಂಡ್ರಿ, ಹೈದರಾಬಾದ್, ಪುಣೆ, ರಾಯಚೂರು, ಧಾರವಾಡವೇ ಮೊದಲಾದ ಕಡೆ ತಮ್ಮ ಆಧ್ಯಾತ್ಮಿಕ ಪ್ರವಚನ ನೀಡಿದ್ದಾರೆ. ವ್ಯಕ್ತಿತ್ವ ವಿಕಸನದಂತಹ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಧರ್ಮ ಮತ್ತು ತತ್ವಶಾಸ್ತ್ರ ದಂತಹ ವಿಷಯಗಳ ಕುರಿತು ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮರಾಠಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ಪ್ರವಚನ ನೀಡಿದವರಾಗಿದ್ದಾರೆ.

ದ್ವೈತ ತತ್ವಶಾಸ್ತ್ರವನ್ನು ಪುನರುಜ್ಜೀವನಗೊಳಿಸಿದ ಮಹಾ ಯತಿ ಇವರು. ತತ್ವಜ್ಞಾನಿ, ವಿದ್ವಾಂಸ, ಅಧ್ಯಾತ್ಮಿಕ ಚಿಂತಕರಾದ ಉತ್ತರಾದಿ ಮಠಾಧೀಶರು 1998ರಲ್ಲಿ ವಿಶ್ವ ಮಾಧ್ವ ಮಹಾ ಪರಿಷತ್ ನ ಸಂಸ್ಥಾಪಕರು. ಸಾಮಾಜಿಕವಾಗಿಯೂ ಅನೇಕ ಕೈಂಕರ್ಯಗಳನ್ನು ನೆರವೇರಿಸಿದ ಗುರುಗಳು ಪ್ರಸ್ತುತ ಯುವ ಸಮುದಾಯಕ್ಕೆ ಒಂದು ಪ್ರೇರಕ ಶಕ್ತಿಯಾಗಿದ್ದಾರೆ ಎಂಬುವುದರಲ್ಲಿ ಸಂಶಯವಿಲ್ಲ. ಇಂತಹ ಮಹನೀಯ ಸಂತರು ಶಿವಮೊಗ್ಗದ ನೆಲಕ್ಕೆ ಆಗಮಿಸಿ ನಮ್ಮನ್ನೆಲ್ಲ ಪಾವನಗೊಳಿಸಲೋಸುಗವೇ ಶ್ರೀಗಂಧ ಸಂಸ್ಥೆ ವಿಶೇಷವಾದ ಮನವಿ ಮಾಡಿ ಡಿಸೆಂಬರ್ 31, ಜನವರಿ 1 ಹಾಗೂ 2ರಂದು ಶುಭ ಮಂಗಳ ಸಮುದಾಯ ಭವನದಲ್ಲಿ ಪ್ರತಿನಿತ್ಯ ಸಂಜೆ 6ರಿಂದ ವಿವಿಧ ವಿದ್ವಾಂಸರುಗಳಿಂದ `ಸಾನಾತನ ಧರ್ಮ`ದ ಕುರಿತಾಗಿ ಚರ್ಚೆ ಹಾಗೂ 6.30ರಿಂದ ” ರಾಮನ ಆದರ್ಶ” ಎನ್ನುವ ಉತ್ತರಾದಿ #UttaradiMatha ಗುರುಗಳ ಪ್ರವಚನ ಆಯೋಜಿಸಿದೆ.

ಧಾರ್ಮಿಕ ಮನೋಭಾವವನ್ನು ಇನ್ನಷ್ಟು ಉದ್ದೀಪನಗೊಳಿಸುವ ಕಾರ್ಯಕ್ರಮ ಇದು. ಕ್ಯಾಲೆಂಡರ್ ಇಯರ್ ನ ಸ್ವಾಗತವನ್ನು ಈ ತರದ ಜಾಗೃತಿ ಕಾರ್ಯಕ್ರಮಗಳ ಮೂಲಕ ಸಮಾಜಕ್ಕೆ ಒಂದೊಳ್ಳೆಯ ಸಂದೇಶ ಕೊಡುವಂತೆ ಆಗಬೇಕೆಂಬುದು ಶ್ರೀಗಂಧ ಸಂಸ್ಥೆಯ ಅಧ್ಯಕ್ಷರಾದ, ಸಾಂಸ್ಕೃತಿಕ ರಾಯಭಾರಿಯಾದ ಶ್ರೀ ಕೆ.ಎಸ್. ಈಶ್ವರಪ್ಪನವರ ಅಭಿಲಾಷೆ. ಅದರಂತೆ ಅವರ ಪುತ್ರ ಕೆ.ಇ. ಕಾಂತೇಶ್ #KEKanteesh ಅವರು ಸಹ. ಇದು ಸಾರ್ವಜನಿಕವಾಗಿ ಆಯೋಜನೆಗೊಂಡ ಕಾರ್ಯಕ್ರಮ. ಸಮಾಜದ ಎಲ್ಲ ವರ್ಗದ ಜನರು ಭಾಗವಹಿಸಿ ಅದರಲ್ಲೂ ಮುಖ್ಯವಾಗಿ ಯುವ ಸಮುದಾಯ ಬಹು ಸಂಖ್ಯೆಯಲ್ಲಿ ಆಗಮಿಸಿ, ಈ ಜ್ಞಾನ ಯಜ್ಞದಲ್ಲಿ ಭಾಗಿಯಾಗಬೇಕೆಂದು ವಿನಂತಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     
Kalahamsa Infotech private limited

Tags: K S EshwarappaKannada News WebsiteLatest News KannadaShiamogga NewsShimogaShivamoggaSri Satyatma Thirtha SwamijiSriGandha ShivamoggaUttaradi Mathaಉತ್ತರಾದಿ ಮಠಾಧೀಶರುಕೆ.ಎಸ್. ಈಶ್ವರಪ್ಪನಾಟ್ಯರಾಮರಾಜ್ಯವಾಲ್ಮೀಕಿಶಿವಮೊಗ್ಗಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿಶ್ರೀಗಂಧ
Share196Tweet123Send
Previous Post

ಹುಬ್ಬಳ್ಳಿ ಸಿಲಿಂಡರ್ ಸೋರಿಕೆ ಪ್ರಕರಣ | ಮತ್ತೋರ್ವ ಸಾವು | ಮೃತರ ಸಂಖ್ಯೆ 5ಕ್ಕೆ ಏರಿಕೆ

Next Post

ಉದ್ದಟತನದಿಂದ ಸೃಜಶೀಲ ಸಾಹಿತ್ಯ ಹಾದಿತಪ್ಪುತ್ತದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉದ್ದಟತನದಿಂದ ಸೃಜಶೀಲ ಸಾಹಿತ್ಯ ಹಾದಿತಪ್ಪುತ್ತದೆ

ಉದ್ದಟತನದಿಂದ ಸೃಜಶೀಲ ಸಾಹಿತ್ಯ ಹಾದಿತಪ್ಪುತ್ತದೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

April 26, 2026
ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

April 26, 2026
ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

April 26, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL