ಕಲ್ಪ ಮೀಡಿಯಾ ಹೌಸ್ | ದೆಹಲಿ |
ಶ್ರೀರಂಗಪಟ್ಟಣ to ಚನ್ನರಾಯಪಟ್ಟಣ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು Union Minister Nitin Gadkari ಭೇಟಿ ಮಾಡಿ ಮಾತುಕತೆ ನಡೆಸಿದರು.
ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಅವರು, ಶ್ರೀರಂಗಪಟ್ಟಣ- ಕೆಆರ್ ಪೇಟೆ- ಚನ್ನರಾಯಪಟ್ಟಣ- ಅರಸೀಕೆರೆ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಉನ್ನತ್ತಿಕರಿಸಲು ಮನವಿ ಮಾಡಿದರು. ಸಚಿವ ಡಾ ನಾರಾಯಣಗೌಡ Minister Narayana Gowda ಅವರ ಮನವಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದರು.
ಶ್ರೀರಂಗಪಟ್ಟಣ- ಕೆಆರ್ ಪೇಟೆ- ಚನ್ನರಾಯಪಟ್ಟಣ- ಅರಸೀಕೆರೆ ರಸ್ತೆ ಶಿವಮೊಗ್ಗ, ಮೈಸೂರು ನಗರಗಳಿಗೆ ಸಂಪರ್ಕ ಕಲ್ಪಿಸಲಿದ್ದು ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚಾರಿಸುತ್ತವೆ. ಹಾಗಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕು ಎಂದು ಮನವಿ ಮಾಡಿದ್ದೇನೆ. ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು ಭಾರತ್ ಮಾಲಾ -2 ಯೋಜನೆಯಡಿ ಇದನ್ನು ಪರಿಗಣಿಸುವುದಾಗಿ ತಿಳಿಸಿದ್ದಾರೆ. ಇದರಿಂದ ಮಂಡ್ಯ, ಹಾಸನ, ಶಿವಮೊಗ್ಗ,ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕರ್ನಾಟಕದ ಹಿರಿಯ ಸಾಹಿತಿ ಎಸ್ ಎಲ್ ಬೈರಪ್ಪ ಅವರ ಪರ್ವ ಕಾದಂಬರಿ ಇಂಗ್ಲೀಷ್ ಅನುವಾದಿತ ಪ್ರತಿಯನ್ನು ಸಚಿವ ಡಾ.ನಾರಾಯಣಗೌಡ ಅವರು ಉಡುಗೊರೆಯಾಗಿ ನೀಡಿದರು. ಈ ವೇಳೆ ಕುತೂಹಲಭರಿತರಾಗಿ ಕಾದಂಬರಿ ಬಗ್ಗೆ ಮಾಹಿತಿ ಪಡೆದ ಕೇಂದ್ರ ಸಚಿವರು, ಇದನ್ನು ಖಂಡಿತವಾಗಿ ಓದುತ್ತೇನೆ ಎಂದು ಹೇಳಿದರು.
Also read: ಜಿಲ್ಲಾಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಮುಂದೂಡಿಕೆ
ಈ ವೇಳೆ ಸಚಿವ ಡಾ.ನಾರಾಯಣಗೌಡ ಅವರ ಆಪ್ತ ಕಾರ್ಯದರ್ಶಿ ಹೆಚ್ ಜಿ ಪ್ರಭಾಕರ್ ಅವರು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post