ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಎಟಿಎಂಗಳಲ್ಲಿ ಸಾರ್ವಜನಿಕರಿಗೆ ಸಹಾಯ ಮಾಡುವ ನೆಪದಲ್ಲಿ ಡೆಬಿಟ್ ಕಾರ್ಡ್ ನಂಬರ್ ಹಾಗೂ ಪಾಸ್’ವರ್ಡ್ಗಳನ್ನು ಪಡೆದು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಭದ್ರಾವತಿಯ ಹುಡ್ಕೋ ಕಾಲೋನಿ ನಿವಾಸಿ ಎನ್. ಸಾಗರ ದಡಿಯಾ ದಿಲೀಪ್ ಎಂದು ಗುರುತಿಸಲಾಗಿದೆ.
ಭದ್ರಾವತಿಯ ಹೊಸೂರು ಸಿದ್ದಾಪುರ ಗ್ರಾಮದ ವ್ಯಕ್ತಿಯೊಬ್ಬರು ಶಿವಮೊಗ್ಗದ ಕೆಎಸ್’ಆರ್’ಟಿಸಿ ಬಸ್ ನಿಲ್ದಾಣದ ಬಳಿಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಡ್ರಾ ಮಾಡುವಾಗ ಅಡಚಣೆ ಉಂಟಾಗಿದೆ. ಈ ವೇಳೆ ಅಪರಿಚಿತ ವ್ಯಕ್ತಿಯಿಂದ ಸಹಾಯ ಕೋರಿದ್ದು, ಇದನ್ನು ದುರುಪಯೋಗಪಡಿಸಿಕೊಂಡ ಆರೋಪಿ ಸಾಗರ್, ಸಹಾಯ ಕೇಳಿದ ವ್ಯಕ್ತಿಯಿಂದ ಡೆಬಿಟ್ ಕಾರ್ಡ್ ನಂಬರ್ ಹಾಗೂ ಪಾಸ್ ವರ್ಡ್ ಅನ್ನು ಪಡೆದು ನಂತರ ಅವರ ಅಕೌಂಟ್ ನಿಂದ ರೂ 37,887 ರೂ. ಹಣವನ್ನು ಡ್ರಾ ಮಾಡಿದ್ದಾನೆ.
ಹಣ ಕಳೆದುಕೊಂಡ ವ್ಯಕ್ತಿ ನೀಡಿದ ದೂರಿನ ಆಧಾರದಲ್ಲಿ ಶಿವಮೊಗ್ಗ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆ ಪೊಲೀಸರು ತನಿಖೆ ನಡೆಸಿ ಆರೋಪಿ ಸಾಗರನನ್ನು ಬಂಧಿಸಿ ಆತನಿಂದ 45 ಸಾವಿರ ರೂ.ಗಳನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post