No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ತ್ಯಾಜ್ಯ ವಿಲೇವಾರಿಗಳ ಅಭಿವೃದ್ಧಿ

ಈ ಎಲ್ಲ ಕಸಗಳನ್ನು ಹೀಗೆ ಬೇರ್ಪಡಿಸಿ, ಪಾಲಿಕೆಯೊಂದಿಗೆ ಸಹಕರಿಸಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 19, 2019
in Special Articles
0
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ತ್ಯಾಜ್ಯ ವಿಲೇವಾರಿಗಳ ಅಭಿವೃದ್ಧಿ

Representational File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸ್ಮಾರ್ಟ್ ಸಿಟಿಗೆ ಶಿವಮೊಗ್ಗ ಘೋಷಣೆಯಾದ ಮೇಲೆ ಸಾಕಷ್ಟು ಬದಲಾವಣೆ ಮಾಡಲಾಗಿದೆ. ನಗರವನ್ನು ಅಭಿವೃದ್ಧಿಪಡಿಸಲು ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ತ್ಯಾಜ್ಯ ವಿಲೇವಾರಿಯೋ ಒಂದಾಗಿದೆ. ಹೀಗೆ ಉನ್ನತ ಉನ್ನತ ಯೋಜನೆಗಳನ್ನು ಹಾಕಿಕೊಂಡು ಶಿವಮೊಗ್ಗ ನಗರ ತನ್ನದೆ ಆದ ಶ್ರೇಷ್ಠ ಸ್ಥಾನವನ್ನು ಪಡೆದುಕೊಳ್ಳುತ್ತಿದೆ. ಅದರಲ್ಲೂ ಮುಖ್ಯವಾಗಿ ಪರಿಸರ ಸಂರಕ್ಷಿಸುವ ಉದ್ದೇಶದಿಂದ ಮಹಾನಗರ ಪಾಲಿಕೆಯು ತ್ಯಾಜ್ಯ ವಿಲೇವಾರಿ ಮಾಡುವ ಮಹತ್ತರವಾದ ಕಾರ್ಯವನ್ನು ಆರಂಭಿಸಿದೆ.

ನಮ್ಮ ಮಹಾನಗರಗಳಲ್ಲಿ ಪ್ರತಿದಿನ ಉತ್ಪತ್ತಿಯಾಗುವ ಘನತ್ಯಾಜ್ಯಗಳು 162 ಟನ್‌ಗಳಷ್ಟು ತ್ಯಾಜ್ಯಗಳನ್ನು ಹಸಿ ಕಸ ಮತ್ತು ಒಣ ಕಸ ಹಾಗೂ ಬೇಡವಾದ ಕಸವೆಂದು ವಿಂಗಡಣೆ ಮಾಡಿ ಪಾಲಿಕೆಯ ತ್ಯಾಜ್ಯದ ಗಾಡಿಗೆ ನೀಡುವಂತೆ ಆದೇಶಿಸಿದೆ.

ಅಡುಗೆ ಮನೆ ಕಸ
ತರಕಾರಿ, ಹಣ್ಣುಗಳ ಸಿಪ್ಪೆಗಳು, ಉಳಿದ ಆಹಾರ ಪದಾರ್ಥಗಳು, ಮೊಟ್ಟೆಯ ಸಿಪ್ಪೆ, ಚಿಕನ್, ಮೀನು, ಮಾಂಸ ಮೂಳೆಗಳು, ಕೊಳೆತ ಹಣ್ಣುಗಳು ಮತ್ತು ತರಕಾರಿಗಳು, ಖ್ಯಾದ ಪದಾರ್ಥಗಳಿಗೆ ಅಂಟಿದ ಟಿಶ್ಯೂ ಪೇಪರ್ಸ್‌, ಚಹಾ, ಕಾಫಿ ಪುಡಿ ಹಾಗೂ ಟೀ ಬ್ಯಾಗ್’ಗಳು, ಬಾಲೆ ಎಲೆ, ದೊನ್ನೆ ಇತ್ಯಾದಿ.

ಪ್ಲಾಸ್ಟಿಕ್
(ಮಣ್ಣಾಗಿದ್ದರೆ ತೊಳೆಯಬೇಕು) ಪ್ಲಾಸ್ಟಿಕ್ ಕವರ್, ಬಾಟಲ್, ಡಬ್ಬಿಗಳು, ಮಿಠಾಯಿ ಹೊದಿಕೆಗಳು ಪ್ಲಾಸ್ಟಿಕ್ ಬಟ್ಟಲುಗಳು, ಹಾಲು ಮತ್ತು ಮೊಸರು ಪ್ಯಾಕೇಟ್‌ಗಳು.

ಕಾಗದ
ದಿನ ಪತ್ರಿಕೆ ಅಥವಾ ಇತರೆ ನಿಯತಕಾಲಿಕೆಗಳು, ಲೇಖನ ಸಾಮಾಗ್ರಿ, ಜಂಕ್ ಮೇಲ್ ರಟ್ಟಿನ ಡಬ್ಬಿಗಳು, ಫಿಜಾ ಡಬ್ಬಿಗಳು, ಟೆಟ್ರಾ ಪ್ಯಾಕ್, ಪೇಪರ್ ಬಟ್ಟಲುಗಳು, ಟೀ ಹಾಗೂ ನೀರಿನ ಪೇಪರ್ ಲೋಟಗಳು.

ಲೋಹಗಳು
ಲೋಹದ ಹಾಳೆಯ ಪಾತ್ರೆಗಳು ಅಥವಾ ಡಬ್ಬಿಗಳು ಮತ್ತು ತಗಡಿನ ಕ್ಯಾನುಗಳು ಹಾಗೂ ಗಜಿನ ಬಾಟಲಿಗಳು.

ಇತರೆ ಒಣ ಕಸ
ರಬ್ಬರ್, ಥರ್ಮೋಕೋಲ್, ಹಳೆ ಬಟ್ಟೆ, ಸ್ಪಾಂಜ್’ಗಳು, ಸೌಂದರ್ಯ ಪ್ರಸಾಧನಗಳು, ಸಿರಾಮಿಕ್, ಕಟ್ಟಿಗೆ ತುಣುಕುಗಳು, ತೆಂಗಿನ ಚಿಪ್ಪುಗಳು ಸೇರಿದಂತೆ ಬ್ಯಾಟರಿಗಳು, ಸಿಡಿಗಳು, ಟೇಪ್ಸ್‌, ಥರ್ಮಾಮೀಟರ್, ಬಲ್ಬ್‌, ಟ್ಯೂಬ್’ಗಳು ಮತ್ತು ಸಿಎಫ್’ಎಲ್ ಬಲ್ಬ್‌ಗಳು.

ಬೇಡವಾದ ಕಸ
ಡೈಪರ್ಸ್‌’ಗಳು, ಸ್ಯಾನಿಟರಿ ನ್ಯಾಪಕೀನ್ಸ್‌, ಬ್ಯಾಂಡೇಜ್, ಕಾಂಡೋಮ್, ಉಪಯೋಗಿಸಿದ ಟಿಶ್ಯುಗಳು, ಔಷಧಿಗಳು, ಗುಡಿಸಿದ ಧೂಳು ಮತ್ತು ಮಿಶ್ರಕಸ ಸೀಮಿತ ಪ್ರಮಾಣದಲ್ಲಿ ಆಗಿದೆ.

ಅತೀವವಾಗಿ ಮಣ್ಣಾದ ಪ್ಲಾಸ್ಟಿಕ್ ಅಥವಾ ಮಣ್ಣಾದ ಕಾಗದಗಳು ಹಾಗೂ ತೀಕ್ಷ್ಣ ಸಣ್ಣಪ್ರಮಾಣದಲ್ಲಿ ಮಾತ್ರ ಪತ್ರಿಕೆಯಲ್ಲಿ ಸುತ್ತಿ ಅದನ್ನು ಪ್ರತ್ಯೇಕವಾಗಿ ಒಪ್ಪಿಸಬೇಕು. ರೇಜರ್ಸ್‌, ಬ್ಲೇಡ್ಸ್‌ ಉಪಯೋಗಿಸಿದ ಸಿರಿಂಜುಗಳು ಇಂಜೆಕ್ಷನ್ ಟ್ಯೂಬ್‌ಗಳು. ನಿರ್ಮಾಣ ಅವಶೇಷಗಳು ಪ್ರತ್ಯೇಕವಾಗಿ ಬಪ್ಪಿಸಬೇಕು ರಬ್ಬರ್, ಪೇಂಟ್ಸ್‌, ಸಿಮೆಂಟ್, ಪುಡಿ, ಇಟ್ಟಿಗೆಗಳು, ಹೂವಿನ ಮಡಿಕೆಗಳು, ಹೂಳು ಒಡೆದ ಗಾಜುಗಳು ಮುಂತಾದ ಪ್ಲಾಸ್ಟಿಕ್ ಬೇರ್ಪಡಿಸಿ ಘನ ತ್ಯಾಜ್ಯಗಳು ಪ್ರತ್ಯೇಕವಾಗಿ ಮಾಡುವ ಕೆಲಸಗಳು ಕೂಡ ನಡೆಯುತ್ತಿದೆ. ಆದರೆ ನಮ್ಮ ದೇಶದಲ್ಲಿ ಘನತ್ಯಾಜ್ಯಗಳು ಪ್ರತಿವರ್ಷ ಹೆಚ್ಚುತ್ತಿದ್ದು, ಘನತ್ಯಾಜ್ಯ ಅಥವಾ ಪ್ಲಾಸ್ಟಿಕ್ ಬಳಕೆ ಕುರಿತು ನಾವೆಲ್ಲರೂ ಈಗಿನಿಂದಲೇ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕಾಗಿದೆ.

ಪರಿಸರ ಕಾಳಜಿ ನಮ್ಮ ಮನೆಯಿಂದಲೇ ಆರಂಭವಾಗಬೇಕು, ಆದರೆ ಹಾಗೆ ಆಗುತ್ತದೆಯೇ? ಅನಗತ್ಯವಾಗಿ ಬಿಟ್ಟು ನೀರನ್ನು ಪೋಲು ಮಾಡುವುದು, ಕಾರು ಮತ್ತು ವಾಹನ ತೊಳೆಯಲು ಯಥೇಚ್ಛವಾಗಿ ನೀರು ಬಳಸಿ ರಸ್ತೆಯವರೆಗೆ ನೀರು ಹರಿದು ಹೋಗುವಂತೆ ಮಾಡುವುದು. ವಿದ್ಯುತ್ ಪೋಲು, ನೈಸರ್ಗಿಕವಾಗಿ ಸಿಗುವ ಸಂಪನ್ಮೂಲಗಳನ್ನು ಪೋಲು ಮಾಡುವುದು, ಪ್ರವಾಸಿ ತಾಣಗಳಲ್ಲಿ ತಿಂದುಂಡ ಪ್ಲಾಸ್ಟಿಕ್ ತಟ್ಟೆ, ಲೋಟಗಳನ್ನು ಬಿಸಾಡುವುದು, ಕಂಡಕಂಡಲ್ಲಿ ಕಸಕಡ್ಡಿಗಳನ್ನು ಚೆಲ್ಲುವುದು, ಅವುಗಳಿಗೆ ಬೆಂಕಿ ಹೆಚ್ಚಿ ಸುಡುವುದು, ಸುಮುದ್ರದ ನೀರನ್ನು ಕಲುಷಿತಗೊಳಿಸುವುದು ಹೀಗೆ ಪರಿಸರ ಸಮತೋಲನ ಹಾಳು ಮಾಡುವ ಕೆಲಸ ಯಥೇಚ್ಛವಾಗಿ ನಡೆಯುತ್ತಲೇ ಬಂದಿದೆ.

ಪ್ಲಾಸ್ಟಿಕ್ ಅತಿಯಾದ ಬಳಕೆ ನಮ್ಮ ಪ್ರಾಣಿಗಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುವುದನ್ನು ಅನೇಕ ಸಂಶೋಧನೆಗಳು ಹೇಳುತ್ತವೆ. ಪ್ಲಾಸ್ಟಿಕ್ ಕೇವಲ ಪರಿಸರಕ್ಕಷ್ಟೇ ಅಲ್ಲ ಮನುಷ್ಯರಿಗೆ, ಪ್ರಾಣಿಗಳಿಗೆ ಆರೋಗ್ಯ ಸಮಸ್ಯೆ ಸೃಷ್ಟಿಸುತ್ತದೆ. ಇತ್ತೀಚೆಗಂತೂ ನಾವು ತಿನ್ನುವ ಆಹಾರವು ಕೂಡ ಕಲಬೆರಕೆಯಾಗಿ ಪ್ಲಾಸ್ಟಿಕ್’ನಿಂದ ತಯಾರು ಮಾಡಲಾಗುತ್ತಿದೆ ಎಂಬ ಅಘಾತಕಾರಿ ಮಾಹಿತಿ ಬಹಿರಂಗವಾಗಿತ್ತು.

ತ್ಯಾಜ್ಯ ನಿರ್ವಹಣೆ ಪ್ರಮುಖ ಉದ್ದೇಶವೇ ಕಸ ಹಾಗೂ ನಿರುಪಯುಕ್ತ ವಸ್ತುಗಳನ್ನು ಅದಷ್ಟು ಕಡಿಮೆ ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳುವುದು ಉತ್ತಮ ವಿಧಾನ. ಇದನ್ನು ತ್ಯಾಜ್ಯ ಬೀಳದಂತೆ ಎಚ್ಚರಿಕೆ ವಹಿಸುವ ಮೂಲಕವೂ ನಿಯಂತ್ರಿಸಬಹುದಾಗಿದೆ. ತ್ಯಾಜ್ಯ ಪ್ರಮಾಣ ಕಡಿಮೆ ಮಾಡಲು ಹಳೆ ವಸ್ತುಗಳ ಮರುಬಳಕೆ ಉಪಯುಕ್ತ. ತ್ಯಾಜ್ಯಗಳ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಮಹಾನಗರ ಪಾಲಿಕೆಯು ತ್ಯಾಜ್ಯ ಬೇರ್ಪಡಿಸಿ ವಿಲೇವಾರಿ ಮಾಡುವ ಯೋಜನೆಯನ್ನು ಜಾರಿಗೆ ತಂದಿದೆ.

ಟನ್’ಗಟ್ಟಲೆ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ನದಿಗಳಿಗೆ ಹಾಗೂ ಸಮುದ್ರಕ್ಕೆ ಸುರಿಯುತ್ತಿರುವುದರಿಂದ ಬಹಳ ದೊಡ್ಡ ಮಟ್ಟದಲ್ಲಿ ಅಪಾಯ ಉಂಟಾಗುತ್ತದೆ. ನೀರಿನೊಂದಿಗೆ ಬೆರೆತುಕೊಂಡು ಸಮುದ್ರ ಜೀವಿಗಳು ಅದನ್ನು ಆಹಾರವಾಗಿ ಸೇವಿಸಿ ತೊಂದರೆಗೆ ಸಿಲುಕುತ್ತಿರುವುದು ಒಂದೆಡೆಯಾದರೆ, ಮೀನು ಮತ್ತಿತರ ಕಡಲಿನ ಆಹಾರಗಳು ತಿನ್ನುವ ಜೀವಿಗಳಿಗೆ ಅಪಾಯ ತಂದೊಡ್ಡುತ್ತದೆ. ಹೀಗೆ ವಿಷಯುಕ್ತ ಕಡಲ ಜೀವಿಗಳನ್ನು ತಿಂದು ಬದುಕುವ ಮಾನವ ಹಾಗೂ ಇನ್ನಿತರ ಪ್ರಾಣಿ-ಪಕ್ಷಿಗಳು ಸಂಕಷ್ಟಕ್ಕೆ ಗುರಿಯಾಗಿ ಇಡಿ ಆಹಾರ ಸರಪಣಿ ವಿಷಯುಕ್ತವಾಗುತ್ತದೆ.

ಸಮುದ್ರ ಹಕ್ಕಿಗಳು, ಒಂದು ಲಕ್ಷಕ್ಕೂ ಅಧಿಕ ಹಾಗೂ ಇನ್ನಿತರ ಸಮುದ್ರ ಜೀವಿಗಳು ಪ್ಲಾಸ್ಟಿಕ್’ಗಳು ವಿಷಕಾರಕ ಅಂಶಗಳಿಂದ ಸಾಯುತ್ತಿವೆ ಎಂದು ಅಧ್ಯಯನಗಳು ಹೇಳುತ್ತಿವೆ. ಜೊತೆಗೆ ಎಲ್ಲೆಂದರಲ್ಲಿ ಬಿಸಾಡುವ ಪ್ಲಾಸ್ಟಿಕ್’ಗಳನ್ನು ತಿನ್ನುವ ಪಶು, ಪಕ್ಷಿಗಳು ಕೂಡ ಅಪಾಯಕ್ಕೆ ಸಿಲುಕುತ್ತವೆ. ಇವುಗಳ ಬಗ್ಗೆ ಸಚಿತ್ರ ವರದಿಗಳನ್ನೆಲ್ಲಾ ಪತ್ರಿಕೆಗಳಲ್ಲಿ ಓದಿದ್ದೇವೆ, ಕಣ್ಣೆದುರಿಗೆ ನೋಡುತ್ತಿದ್ದೇವೆ. ಹಾಗಿದ್ದೂ ಕೂಡ ನಾವು ಪ್ಲಾಸ್ಟಿಕ್ ಬಳಕೆಯನ್ನು ತಡೆಯುವಲ್ಲಿ ವಿಫಲರಾಗಿದ್ದೇವೆ.

ಇಷ್ಟೇ ಅಲ್ಲದೇ ಪ್ಲಾಸ್ಟಿಕನ್ನು ಹಾಗೆಯೇ ಬಿಸಾಡಿದರೆ ಮಣ್ಣಿನಲ್ಲಿ ಕರಗುವುದಿಲ್ಲ. ಪ್ರತಿದಿನವೂ ನಮ್ಮ ಸುತ್ತ ಪ್ಲಾಸ್ಟಿಕ್ ಬ್ಯಾಗ್’ಗಳು, ಬಾಟಲ್, ಆಹಾರ ಕಂಟೈನರ್, ಕಾಫಿ/ಟೀ ಕಪ್ಪುಗಳು, ಪ್ಲಾಸ್ಟಿಕ್’ನಲ್ಲಿ ಸುತ್ತಿಕೊಡುವ ಆಹಾರ ಪದಾರ್ಥಗಳು ಇತ್ಯಾದಿ ಪ್ಲಾಸ್ಟಿಕ್ ಉತ್ವನ್ನಗಳು ನಾವು ಬಳಸಿ ಅವುಗಳನ್ನು ಯಾವುದೇ ಮುನ್ನೆಚ್ಚರಿಕೆ ವಹಿಸದೇ ಕಂಡ ಕಂಡಲ್ಲಿ ಬಿಸಾಕುತ್ತೇವೆ.

ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎಂದು ಹೇಳಬಹುದು. ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ ಮತ್ತು ಪರಿಸರದ ಸೌಂದರ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ. ಇದರ ಜೊತೆಯಲ್ಲಿ ಕಸವು ಅಲಂಕಾರಿಕ ವಸ್ತುಗಳನ್ನು ತಯಾರಿಸಲು ಕೂಡಾ ಸಂಪನ್ಮೂಲವಾಗಿ ಬಹುಮುಖ್ಯ ಪಾತ್ರ ನಿರ್ವಹಿಸುವುದು.

ಒಟ್ಟಾರೆ ನಮ್ಮ ಸತ್ತಲೂ ಪ್ರತಿದಿನ ಉತ್ಪತ್ತಿಯಾಗುವ ಲಕ್ಷ ಲಕ್ಷ ಟನ್’ಗಟ್ಟಲೇ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಿಲೇವಾರಿ ಮಾಡುವ ಉದ್ದೇಶದಿಂದ ಮಹಾನಗರ ಪಾಲಿಕೆಯು ಸಾರ್ವಜನಿಕರಲ್ಲಿ ಒಣಕಸ, ಹಸಿಕಸ, ಬೇಡವಾದ ಕಸವೆಂದು 3 ರೀತಿಯಲ್ಲಿ ವಿಂಗಡಣೆ ಮಾಡಿ ಮಹಾನಗರ ಪಾಲಿಕೆಯ ವಾಹನಕ್ಕೆ ನೀಡುವಂತೆ ಸೂಚಿಸಿದೆ.

ಪರಿಸರ ದಿನಾಚರಣೆಯನ್ನು ಕೇವಲ ಆಚರಣೆಗಷ್ಟೇ ಸೀಮಿತಗೂಳಿಸದೆ, ನಿತ್ಯದ ಬದುಕಿನಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಪ್ರಜ್ಞಾಪೂರ್ವವಾಗಿ ದೂರವಾಗಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂಬುವುದು ಮಹಾನಗರ ಪಾಲಿಕೆಯ ಮುಖ್ಯ ಉದ್ದೇಶವಾಗಿದೆ.

ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮಹತ್ವ ನೀಡಬೇಕು. ಹಿಂದೆಲ್ಲಾ ಆಹಾರವೇ ಔಷಧವಾಗಿರುತ್ತಿತ್ತು. ಇಂದು ಆಹಾರವೇ ವಿಷವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಆರೋಗ್ಯ ಕಾಪಾಡುವುದು ಕಷ್ಟ ಹೀಗಾಗಿ ಮುನ್ನೆಚ್ಚರಿಕೆಯಾಗಿ ಪ್ರತಿಯೊಬ್ಬರು ಪ್ಲಾಸ್ಟಿಕ್ ನಿಯಂತ್ರಣದಿಂದ ಮುಕ್ತಿ ಹೊಂದಿ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವಂತೆ ಮಾಡುವುದೂ ನಮ್ಮೆಲ್ಲರ ಹೊಣೆಯಾಗಿರುತ್ತದೆ.

Get in Touch With Us info@kalpa.news Whatsapp: 9481252093

Tags: CorporationEnvironmental protectionGarbageKannada ArticlePlasticSandhya SihimogeShivamoggaSmart CityWaste Disposalಕಸತ್ಯಾಜ್ಯ ವಿಲೇವಾರಿಪರಿಸರ ರಕ್ಷಣೆಪ್ಲಾಸ್ಟಿಕ್ಸಂಧ್ಯಾ ಸಿಹಿಮೊಗೆಸ್ಮಾರ್ಟ್ ಸಿಟಿ
Share200Tweet123Send
Previous Post

ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ದಾಳಿ

Next Post

ಮಂಗಳೂರಿನಲ್ಲಿ ಭುಗಿಲೆದ್ದ ಹಿಂಸಾಚಾರ: ಹಲವೆಡೆ ಕರ್ಫ್ಯೂ, ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಂಗಳೂರಿನಲ್ಲಿ ಭುಗಿಲೆದ್ದ ಹಿಂಸಾಚಾರ: ಹಲವೆಡೆ ಕರ್ಫ್ಯೂ, ನಾಳೆ ಶಾಲಾ ಕಾಲೇಜುಗಳಿಗೆ ರಜೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL