ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಜಿಲ್ಲೆಯಲ್ಲಿ ದಿನೇ ದಿನೇ ಮಕ್ಕಳಿಗೆ ಕೊರೋನಾ ಸೋಂಕು ತುಗುಲಿತ್ತಿರೋ ಕಾರಣ, ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ನೀಡಿದೆ. ಈ ಹಿನ್ನಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಾದಂತೆ ತಾಲೂಕಿನ 1 ರಿಂದ 8ನೇ ತರಗತಿ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿನ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾದಂತ ಶಾಲೆಗಳ ತಾಲೂಕಿನಲ್ಲಿ 1 ರಿಂದ 8ನೇ ತರಗತಿಯವರೆಗೆ ನಾಳೆಯಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ರಜೆಯನ್ನು ಘೋಷಣೆ ಮಾಡಿ ಆದೇಶಿಸಿದ್ದಾರೆ.
ಇನ್ನೂ 1 ರಿಂದ 8ನೇ ತರಗತಿಗೆ ಮಾತ್ರವೇ ರಜೆಯನ್ನು ಘೋಷಿಸಲಾಗಿದ್ದು, ಇತರೆ ತರಗತಿಗಳು ಎಂದಿನಂತೆ ನಡೆಯಲಿವೆ. 9, 10 ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಜೆ ಇಲ್ಲ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post