No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಕೃಷಿ ಮೇಳಗಳು ಜಾತ್ರೆಗಳಾಗದೇ ವ್ಯವಸಾಯ ಕ್ಷೇತ್ರಕ್ಕೆ ಯುವಕರನ್ನು ಸೆಳೆಯಬೇಕು: ಸಿಎಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 10, 2023
in ಹುಬ್ಬಳ್ಳಿ-ಧಾರವಾಡ
0
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಧಾರವಾಡ |

ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.

ಅವರು ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ- 2023 ಉದ್ಘಾಟಿಸಿ, ಮಾತನಾಡಿ, ಇಂದು ಶೇ.60ರಷ್ಟು ಜನ ಕೃಷಿ ಮಾಡುತ್ತಿದ್ದು, ಭಾರತವು ಕೃಷಿ ಪ್ರಧಾನ ದೇಶವಾಗಿದ್ದರೂ ಸಾಕಷ್ಟು ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಮಳೆ ಆಧಾರಿತ ಕೃಷಿ ಭೂಮಿ ಇರುವದರಿಂದ ಮಳೆ ಕೊರತೆಯಾಗಿ ಸಮಸ್ಯೆ ಆಗುತ್ತಿದೆ ಎಂದರು
ಯುವಕರು, ಹೆಚ್ಚುಜನ ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ಕೃಷಿ ವಿವಿಗಳು ಕಾರ್ಯ ಮಾಡಬೇಕು. ವಿಶ್ವವಿದ್ಯಾಲಯದ ಸಂಶೋಧನೆ, ತಾಂತ್ರಿಕತೆಗಳು ರೈತರ ಜಮೀನುಗಳಿಗೆ ತಲುಪಿದರೆ ಮಾತ್ರ ಸಾರ್ಥಕವಾಗುತ್ತದೆ. ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯುವಂತೆ ಆಕರ್ಷಕವಾಗಿ ಸಂಘಟಿಸಬೇಕು ಎಂದರು.

ಒಣ ಬೇಸಾಯ ಮಾಡುವ ರೈತರ ಬಗ್ಗೆ ವಿಶೇಷ ಕಾಳಜಿ ಇದೆ. ಒಣಬೇಸಾಯ ಮಾಡಲು ಅಗತ್ಯ ಸುಧಾರಿತ ಹೊಸ ತಳಿಗಳ ಸಂಶೋಧನೆ ಮಾಡಬೇಕು. ಬಿತ್ತಿದ ಯಾವುದೇ ಮುಖ್ಯ ಬೆಳೆ ಹಾಳಾದರೆ, ಅದಕ್ಕೆ ಪರ್ಯಾಯವಾದ ತಕ್ಷಣದ ಬೆಳೆಗಳನ್ನು ಮಾಡಬೇಕು ಎಂಬುದರ ಬಗ್ಗೆ ವಿಜ್ಞಾನಿಗಳು ಆಸಕ್ತಿ ವಹಿಸಿ, ಸಂಶೋಧನೆ ಮಾಡಬೇಕು ಎಂದು‌ ಮುಖ್ಯಮಂತ್ರಿಗಳು ತಿಳಿಸಿದರು.
ಪ್ರಯೋಗಾಲಯದ ಸಂಶೋಧನೆಗಳು ರೈತರ ಭೂಮಿಗೆ ತಲುಪಬೇಕು
ಲ್ಯಾಬ್ ಟು ಲ್ಯಾಂಡ್ ಅಂದರೆ ಪ್ರಯೋಗಾಲಯದ ಸಂಶೋಧನೆಗಳು ರೈತರ ಭೂಮಿಗೆ ತಲುಪಬೇಕು. ಅಂದಾಗ ಮಾತ್ರ ವಿಜ್ಞಾನಿಗಳ ಸಂಶೋಧನೆಗಳು ಫಲಪ್ರದವಾಗುತ್ತದೆ ಎಂದು ಅವರು ಹೇಳಿದರು.

ರೈತರಿಗೆ ಉನ್ನತ ತಾಂತ್ರಿಕತೆ ಇರುವ ಕಟಾವು ಯಂತ್ರ
ಕೃಷಿ ಭಾಗ್ಯ, ಕೃಷಿ ಯಂತ್ರಧಾರೆ ಯೊಜನೆಗಳ ಮರುಜಾರಿ ಘೋಷಿಸಲಾಗಿದೆ. ರಾಜ್ಯದಲ್ಲಿ ಸಣ್ಣ ರೈತರು ಹೆಚ್ಚಿಗೆ ಇರುವದರಿಂದ ಉನ್ನತ ತಾಂತ್ರಿಕತೆ ಇರುವ ಕಟಾವು ಯಂತ್ರಗಳನ್ನು ರೈತರಿಗೆ ನೀಡಲು ಕ್ರಮವಹಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ
ಕೋರಮಂಗಲ ಚಲ್ಲಘಟ್ಟ(ಕೆಸಿ) ವ್ಯಾಲಿ ಮೂಲಕ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಳಕ್ಕೆ, ನೀರಾವರಿಗೆ ಅನಕೂಲ ಮಾಡಲಾಗಿದೆ. ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ರೈತರಿಗೆ ರೂ. 5 ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ
ರಾಜ್ಯ ಸರಕಾರ ಈ ವರ್ಷದಿಂದ ರೈತರಿಗೆ ರೂ. 5 ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ ಮತ್ತು ರೂ.15 ಲಕ್ಷದವರೆಗೆ ಕೇವಲ ಶೇ. 3 ರಷ್ಟು ಬಡ್ಡಿ ನಿಗದಿಗೊಳಿಸಿ, ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಹದಾಯಿ ಯೋಜನೆಗೆ ಬದ್ಧ
ಮಹಾದಾಯಿ ಯೋಜನೆ ಜಾರಿಗೊಳಿಸಲು ಸರಕಾರ ಬದ್ದವಾಗಿದೆ. ಕೇಂದ್ರ ಸರಕಾರ ಶೀಘ್ರವಾಗಿ ಸ್ಪಂದಿಸಿ, ಸಮಸ್ಯೆ ಬಗೆಹರಿಸಿದರೆ ಯೋಜನೆ ಅನುಷ್ಠಾನ ಸುಲಭ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Also read: ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ, ದೆಹಲಿಯ ಇಸ್ಕಾನ್ ದೇವಾಲಯಕ್ಕೆ ಅಮಿತ್ ಶಾ ಭೇಟಿ

ಕೇಂದ್ರ ಸರಕಾರ ಗೋವಾ ಸರಕಾರದೊಂದಿಗೆ ಸಮಾಲೋಚಿಸಿ, ಪರಿಸರ ಮತ್ತು ಅರಣ್ಯ ಸಂಬಂಧಿಸಿದ ತಕರಾರು ಪರಿಹರಿಸಿದರೆ ರಾಜ್ಯ ಸರಕಾರ ತಕ್ಷಣ ಕ್ರಮ ವಹಿಸಲಿದೆ. ರಾಜ್ಯ ಸರಕಾರಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದು ಅವರು ಹೇಳಿದರು.
ಬೆಣ್ಣಿಹಳ್ಳ ಯೋಜನೆ: ಶೀಘ್ರ ಜಾರಿ
ಬೆಣ್ಣಿಹಳ್ಳ ಯೋಜನೆಯನ್ನು ಡಿಪಿಆರ್ ಮಾಡಿಸಿ, ಶೀಘ್ರವಾಗಿ ಜಾರಿಗೊಳಿಸಲಾಗುವುದು. ಧಾರವಾಡ ಜಿಲ್ಲೆಯ ಹಾಗೂ ಉತ್ತರ ಕರ್ನಾಟಕದ ರೈತರ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಿ, ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು .

ಪಂಚ ಗ್ಯಾರಂಟಿಗಳೊಂದಿಗೆ ಎಲ್ಲ ಅಭಿವೃದ್ಧಿ ಕಾರ್ಯಗಳ ಮುಂದುವರಿಕೆ; ಸರಕಾರ ಆರ್ಥಿಕವಾಗಿ ಸುಸ್ಥಿರವಾಗಿದೆ
ಬಡವರ ವಿರೋಧಿಗಳು ಪಂಚ ಗ್ಯಾರಂಟಿ ಅನುಷ್ಠಾನ ವಿಷಯದಲ್ಲಿ ಸರಕಾರದ ವಿರುದ್ಧ ಸುಳ್ಳ ಆರೋಪ ಮಾಡುತ್ತಿದ್ದಾರೆ, ಆದರೆ ಸರಕಾರ ಆರ್ಥಿಕವಾಗಿ ಸುಸ್ಥಿರವಾಗಿದ್ದು, ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗಿದೆ. ಪಂಚಗ್ಯಾರಂಟಿಗಳು ಸೇರಿ ರಾಜ್ಯದ ಅಭಿವೃದ್ಧಿಗಾಗಿ ಮುಂದಿನ ವರ್ಷ ಸುಮಾರು 3 ಲಕ್ಷ 80 ಸಾವಿರ ಕೋಟಿ ರೂ. ಗಳ ಬಜೆಟ್ ಮಂಡಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಯಾರಿಗೂ ಭಯಬೇಡ
ಪಂಚಗ್ಯಾರಂಟಿ ಯೋಜನೆಗಳ ಜಾರಿಯಿಂದ ಅಭಿವೃದ್ಧಿಗೆ ಹಣದ ಕೊರತೆ ಆಗಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಸರಕಾರಕ್ಕೆ ಯಾವುದೇ ರೀತಿಯ ಆರ್ಥಿಕ ತೊಂದರೆ ಇಲ್ಲ. ಸರಕಾರದ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳು ಮುಂದುವರೆಯಲಿವೆ. ಪ್ರಸಕ್ತ ವರ್ಷ ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೆ ಸುಮಾರು 32 ಸಾವಿರ ಕೋಟಿ ರೂ.ಗಳ ಅಗತ್ಯವಿದೆ. ಮುಂದಿನ ವರ್ಷದಿಂದ ಪ್ರತಿವರ್ಷ ಪಂಚ ಗ್ಯಾರಂಟಿಗಳ ಜಾರಿಗೆ ಸುಮಾರು 56 ಸಾವಿರ ಕೋಟಿ ರೂ.ಗಳು ಬೇಕಾಗುತ್ತದೆ. ಈ ಎಲ್ಲ ಅಗತ್ಯ ಹಣ ಹೊಂದಿಸಲು ಸರಕಾರ ಸಶಕ್ತವಾಗಿದೆ. ಯಾರಿಗೂ ಭಯಬೇಡ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪಂಚ ಗ್ಯಾರಂಟಿಗಳ ವೆಚ್ಚ ಸೇರಿ ಮುಂದಿನ ವರ್ಷದ ಬಜೆಟ್ ಸುಮಾರು 380 ಲಕ್ಷ ಕೋಟಿಗಳಾಗುವ ಅಂದಾಜಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೃಷಿ ಸಚಿವ ಹಾಗೂ ಕೃಷಿವಿವಿ ಸಮ ಕುಲಾಧಿಪತಿ ಎನ್. ಚಲುವರಾಯಸ್ವಾಮಿ ಅವರು ಕೃಷಿ ವಿವಿಯ ವಿಶೇಷ ಪ್ರಕಟಣೆಗಳನ್ನು ವೇದಿಕೆಯಲ್ಲಿ ಬಿಡುಗಡೆ ಮಾಡಿದರು.

ಶ್ರೇಷ್ಠ ಕೃಷಿ ಪ್ರಶಸ್ತಿ ಪುರಸ್ಕೃತ ರೈತ ಮಹಿಳೆಯರಿಗೆ, ಪ್ರಗತಿಪರ ರೈತರಿಗೆ ಮುಖ್ಯಮಂತ್ರಿಗಳು ಪ್ರಶಸ್ತಿ ವಿತರಿಸಿ, ಗೌರವಿಸಿದರು.

ಕೃಷಿ ಸಚಿವ ಎನ್. ಚಲುರಾಯಸ್ವಾಮಿ , ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ವಿಧಾನ ಪರಿಷತ್ ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ, ಬಸವರಾಜ ಶಿವಣ್ಣನವರ, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ, ಕೃಷಿ ಇಲಾಖೆ ಆಯುಕ್ತರಾದ ವೈ.ಎಸ್.ಪಾಟೀಲ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಜಿ.ಪಂ. ಸಿಇಒ ಸ್ವರೂಪ. ಟಿ.ಕೆ., ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ ಹಾಗೂ ಕೃಷಿ ವಿವಿ ಆಡಳಿತ ಮಂಡಳಿ ಸದಸ್ಯರು, ಅಧಿಕಾರಿಗಳು ವೇದಿಕೆಯಲ್ಲಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Share197Tweet123Send
Previous Post

ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ, ದೆಹಲಿಯ ಇಸ್ಕಾನ್ ದೇವಾಲಯಕ್ಕೆ ಅಮಿತ್ ಶಾ ಭೇಟಿ

Next Post

ಪ್ರಾಥಮಿಕ ಹಂತದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ: ಹೆಚ್.ಡಿ. ಕುಮಾರಸ್ವಾಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎಂದುಕೊಂಡಿದೆ ಕಾಂಗ್ರೆಸ್: ಮಾಜಿ ಸಿಎಂ ಎಚ್’ಡಿಕೆ ಕಿಡಿ

ಪ್ರಾಥಮಿಕ ಹಂತದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ: ಹೆಚ್.ಡಿ. ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ 9-10ರಂದು ಹೊಸಹಳ್ಳಿ ಕೆ.ವೆಂಕಟರಾಮ್ ಅವರಿಗೆ ನಾಗರಿಕ ಸನ್ಮಾನ ಸಮಾರಂಭ

ಮೇ 9-10ರಂದು ಹೊಸಹಳ್ಳಿ ಕೆ.ವೆಂಕಟರಾಮ್ ಅವರಿಗೆ ನಾಗರಿಕ ಸನ್ಮಾನ ಸಮಾರಂಭ

May 8, 2026
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

May 8, 2026
ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್’ಮ್ಯಾನ್ ಸೇರಿ ಮೂವರ ಬಂಧನ

ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್’ಮ್ಯಾನ್ ಸೇರಿ ಮೂವರ ಬಂಧನ

May 8, 2026
ಮದುವೆಗೂ ಮುನ್ನ ಯಾರನ್ನೂ ನಂಬಬೇಡಿ, ವಿವಾಹಪೂರ್ವ ದೈಹಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

May 7, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್, ಮೈಸೂರು-ಬೆಳಗಾವಿ ವಿಶ್ವಮಾನವ ರೈಲುಗಳ ಬಿಗ್ ಅಪ್ಡೇಟ್

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL