ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಧಾರವಾಡ ತಾಲೂಕಿನ ಮಂಗಸೂಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ 73ರ ಕಿ.ಮೀ. 216.50 ದಿಂದ 219.80 ರವರೆಗಿನ ರಸ್ತೆ ಅಗಲೀಕರಣ ಕಾಮಗಾರಿಗೆ ಇಂದು ಬೆಳಿಗ್ಗೆ ಮುಮ್ಮಿಗಟ್ಟಿ ಕ್ರಾಸ್ದಲ್ಲಿ ಶಾಸಕ ಅಮೃತ ದೇಸಾಯಿ ಹಾಗೂ ಬಸನಗೌಡ ಪಾಟೀಲ ಯತ್ನಾಳ ಅವರು ಭೂಮಿ ಪೂಜೆ ನೆರವೇರಿಸಿದರು.
ಮತ್ತು ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ಮುಮ್ಮಿಗಟ್ಟಿ ಕ್ರಾಸ್ದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರೀ ಗುರು ಗರಗ ಮಡಿವಾಳೇಶ್ವರ ಮಹಾಸ್ವಾಮಿಗಳ ದ್ವಾರಬಾಗಿಲು ನಿರ್ಮಾಣಕ್ಕೆ ಶಾಸಕರು ಶಂಕುಸ್ಥಾಪನೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವಣಪ್ಪ ಅಷ್ಟಗಿ, ಅಮ್ಮಿನಭಾವಿ ಪಂಚಗ್ರಹ ಹಿರೇಮಠದ ಷ.ಬ್ರ. ಅಭಿನವ ಶಾಂತಲಿಂಗ ಶಿವಾಚಾರ್ಯರು, ಉಪ್ಪಿನಬೆಟಗೇರಿ ವಿರಕ್ತಮಠದ ಕುಮಾರವೀರೂಪಾಕ್ಷಸ್ವಾಮಿಗಳು, ಮಾಜಿ ಶಾಸಕಿ ಸೀಮಾ ಮಸೂತಿ, ಮಾಜಿ ಶಾಸಕ ಅಯ್ಯಪ್ಪ ದೇಸಾಯಿ, ಕೆಎಂಎಫ್ ಅಧ್ಯಕ್ಷ ಶಂಕರ ಮುಗದ, ಜಿಲ್ಲಾ ಪಂಚಾಯತ ಕೆಡಿಪಿ ಸದಸ್ಯ ನಾಗನಗೌಡ ಪಾಟೀಲ, ಗರಗ ಮಡಿವಾಳೇಶ್ವರ ಮಠದ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ದೇಸಾಯಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಮುಮ್ಮಿಗಟ್ಟಿ, ನರೇಂದ್ರ ಮತ್ತು ತಡಕೋಟ ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು, ಸಾರ್ವಜನಿಕರು ಭಾಗವಹಿಸಿದ್ದರು.
Also read: ಗುಣಮಟ್ಟ ರಹಿತ ಆಹಾರ, ಪಾನೀಯ ಸರಬರಾಜು ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post