ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಕಳೆದೆರಡು ವರ್ಷಗಳಲ್ಲಿ ದೇಶಾದ್ಯಂತ ಕರೋನಾ Corona ಮಹಾಮಾರಿಗೆ ಹಲವಾರು ಜನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ನಮ್ಮ ಧಾರವಾಡ ಜಿಲ್ಲೆಯಲ್ಲಿಯೂ ಹಾನಿಯಾಗಿದ್ದು, ಆದರೆ ಬಹುತೇಕ ನಮ್ಮ ಹಾಗೂ ಸುತ್ತಲಿನ ಜಿಲ್ಲೆಗಳ ಕೋವಿಡ್ ಭಾದಿತರು ಉತ್ತಮ ಚಿಕಿತ್ಸೆ ಪಡೆದು ಕೋವಿಡ್ ಅಪಾಯದಿಂದ ಪಾರಾಗಿದ್ದಾರೆ. ಮತ್ತು ಕೋವಿಡ್ ನಿರ್ವಹಣೆಯಲ್ಲಿ ರಾಜ್ಯಸರ್ಕಾರದಿಂದ ಧಾರವಾಡ ಜಿಲ್ಲೆ ಭೇಷ್ ಎನಿಸಿಕೊಂಡಿದೆ. ಈಗ ಸಂಭಾವ್ಯ ಕೋವಿಡ್ ಅಲೆಯನ್ನು ಸಮರ್ಥವಾಗಿ ನಿಭಾಯಿಸಿ ನಿಯಂತ್ರಿಸುವ ಜವಾಬ್ದಾರಿಯು ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕೋವಿಡ್ ಅಲೆಯ Covid Wave ನಿಯಂತ್ರಣಕ್ಕಾಗಿ ಮತ್ತು ಉತ್ತಮ ಚಿಕಿತ್ಸೆಗಾಗಿ ಕೈಗೊಂಡಿರುವ ಮುಂಜಾಗೃತಾ ಕ್ರಮಗಳ ಕುರಿತು ಆರೋಗ್ಯ, ಕಂದಾಯ, ಪೊಲೀಸ್, ಮಹಾನಗರ ಪಾಲಿಕೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಳೆದ 2 ವರ್ಷಗಳ ಕೋವಿಡ್ ಸಮಯದಲ್ಲಿ ಸರ್ಕಾರ ಮತ್ತು ಸಾರ್ವಜನಿಕರ ಸಹಾಯದಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಆರೋಗ್ಯ ಮೂಲ ಸೌಕರ್ಯಗಳನ್ನು ಉನ್ನತೀಕರಿಸಲಾಗಿದೆ. ಚಿಕಿತ್ಸೆಗೆ ಅಗತ್ಯವಿರುವ ಆಕ್ಸಿಜನ್, ಕಾನ್ಸ್ಲೆಟರ್, ಬೆಡ್, ಐಸಿಯು ಬೆಡ್, ವೆಂಟಿಲೇಟರ್, ಆಂಬುಲೆನ್ಸ್ ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ಹೊಂದಲಾಗಿದೆ. ಸಾರ್ವಜನಿಕರಲ್ಲಿ ಕೋವಿಡ್ ಅಲೆಯ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ. ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಆದಷ್ಟು ಶೀಘ್ರ ಮಾಸ್ಕ್ಡ್ರೈವಗಳನ್ನು ಆರಂಭಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದರು.

ತಾಲೂಕಾ ಮಟ್ಟದಲ್ಲಿ ಕಂದಾಯ ಇಲಾಖೆಯ ಸಹಯೋಗದಲ್ಲಿ ಆರೋಗ್ಯ ಇಲಾಖೆ ಮಾಸ್ಕ್ ಧಾರಣೆ ಹಾಗೂ ಲಸಿಕಾಕರಣ ಕುರಿತು ಜಾಗೃತಿ ಮೂಡಿಸಬೇಕೆಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಟೀಲ ಶಶಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಮೊದಲ, ಎರಡನೇಯ ಮತ್ತು ಮೂರನೆಯ ಅಲೆಯ ನಿರ್ವಹಣೆ ಕುರಿತು ವಿವರಿಸಿದರು. ಸಂಭಾವ್ಯ ಕೋವಿಡ್ ಅಲೆಯನ್ನು ತಡೆಯಲು ವಿವಿಧ ಇಲಾಖೆಗಳ ಸಹಯೋಗದಲ್ಲಿ ಕೈಗೊಳ್ಳುವ ಕ್ರಮಗಳ ಕುರಿತು ತಿಳಿಸಿದರು. ಲಸಿಕಾಕರಣಕ್ಕೆ ಒತ್ತು ನೀಡಲು ಎಲ್ಲ ಆಸ್ಪತ್ರೆಯ ವೈದ್ಯರಿಗೆ ಸೂಚನೆ ನೀಡಲಾಗಿದ್ದು, ಲಸಿಕಾಕರಣದ ನೋಡಲ್ ಅಧಿಕಾರಿಗಳು ಈ ಕುರಿತು ಕ್ರಮ ವಹಿಸಿದ್ದಾರೆ ಎಂದು ಹೇಳಿದರು.

ಕೋವಿಡ್-19 ಪ್ರಕರಣಗಳು: 2020 ಮಾರ್ಚ್ನಿಂದ ಫೆಬ್ರುವರಿಯ 2021 ರವರೆಗೆ ಕೋವಿಡ-19 ನ ಮೊದಲ ಅಲೆಯಲ್ಲಿ ಧಾರವಾಡದಲ್ಲಿ ಒಟ್ಟು 22,339 ಪ್ರಕರಣಗಳು ದಾಖಲಾಗಿದ್ದವು. ಇದರಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ 21,678 ಜನ ಬಿಡುಗಡೆ ಹೊಂದಿದ್ದಾರೆ. ಇದರಲ್ಲಿ 615 ಮರಣ ಹೊಂದಿದ್ದಾರೆ.

2022 ಜನೆವರಿಯಿಂದ ಡಿಸೆಂಬರ್ 25 ರವರೆಗೆ ಜಿಲ್ಲೆಯಲ್ಲಿ ಒಟ್ಟು 24, 874 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ 24,824 ಜನ ಬಿಡುಗಡೆ ಹೊಂದಿದ್ದಾರೆ. ಮತ್ತು 89 ಜನ ಮರಣ ಹೊಂದಿದ್ದಾರೆ.
ಜಿಲ್ಲೆಯ ಒಟ್ಟು ಕೋವಿಡ್ ಪ್ರಕರಣಗಳು: 2020 ಮಾರ್ಚ್ನಿಂದ 2022 ಡಿಸೆಂಬರ್ 25 ರವರೆಗೆ ಜಿಲ್ಲೆಯಾದ್ಯಂತ ಒಟ್ಟು 86,391 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ 84,977 ಜನ ಬಿಡುಗಡೆ ಹೊಂದಿದ್ದಾರೆ. ಮತ್ತು ಇದರಲ್ಲಿ 1,410 ಜನ ಮರಣ ಹೊಂದಿದ್ದಾರೆ.

ಜಿಲ್ಲೆಯಲ್ಲಿರುವ ಕೋವಿಡ್-19 ಪರೀಕ್ಷಾ ಪ್ರಯೋಗಾಲಯಗಳು: ಜಿಲ್ಲೆಯಲ್ಲಿ ಮೂರು ಆಸ್ಪತ್ರೆಗಳಲ್ಲಿ ಕೋವಿಡ್-19 ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ. ಕಿಮ್ಸ್ ಹಾಗೂ ಡಿಮ್ಹಾನ್ಸ್ ಸರಕಾರಿ ಆಸ್ಪತ್ರೆಗಳು ಹಾಗೂ ಒಂದು ಎಸ್.ಡಿ.ಎಮ್. ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷಾ ಪ್ರಯೋಗಾಲಯಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಈ ಆಸ್ಪತ್ರೆಗಳಲ್ಲಿ ಸಾರ್ವಜನಿಕರು ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬಹುದು.

ಜಿಲ್ಲೆಯಲ್ಲಿನ 18 ವರ್ಷ ಮೇಲ್ಮಟ್ಟ ಜನರ ತಾಲುಕುವಾರು ಲಸಿಕಾ ಸಾಧನೆ
- ಧಾರವಾಡ ತಾಲೂಕಿನಲ್ಲಿ ಒಟ್ಟು 4,35,547 ಲಸಿಕೆಗಳನ್ನು ಹಾಕುವ ಗುರಿ ಹೊಂದಲಾಗಿತ್ತು. ಇದರಲ್ಲಿ ಮೊದಲನೇ ಡೋಸ್ 4,74,966 ಲಸಿಕೆಗಳನ್ನು ಹಾಕಲಾಗಿದ್ದು, ಶೇ.109.05 ರಷ್ಟು ಗುರಿ ಸಾಧಿಸಲಾಗಿದೆ. ಮತ್ತು ಎರಡನೇ ಡೋಸ್ 5,06,150 ಜನರಿಗೆ ಲಸಿಕೆ ನೀಡಲಾಗಿದ್ದು, ಶೇ.116.21 ರಷ್ಟು ಗುರಿ ಸಾಧಿಸಲಾಗಿದೆ.
- ಹುಬ್ಬಳ್ಳಿ ತಾಲೂಕಿನಲ್ಲಿ ಒಟ್ಟು 6,17,078 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಇದರಲ್ಲಿ ಮೊದಲನೇ ಡೋಸ್ ಆಗಿ 6,38,113 ಜನರಿಗೆ ಲಸಿಕೆ ನೀಡಿ ಶೇ.103.41 ರಷ್ಟು ಗುರಿ ಸಾಧಿಸಲಾಗಿದೆ.
- ಮತ್ತು ಎರಡನೇ ಡೋಸ್ ಆಗಿ 6,23,739 ಜನರಿಗೆ ಲಸಿಕೆಗಳನ್ನು ನೀಡಿ ಶೇ.101.08 ರಷ್ಟು ಗುರಿ ಸಾಧಿಸಲಾಗಿದೆ.
- ಕಲಘಟಗಿ ತಾಲೂಕನಲ್ಲಿ ಒಟ್ಟು 1,20,386 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಇದರಲ್ಲಿ ಮೊದಲನೇ ಡೋಸ್ ಆಗಿ 1,26,022 ಜನರಿಗೆ ನೀಡಿ ಶೇ.104.68 ರಷ್ಟು ಗುರಿ ಸಾಧಿಸಲಾಗಿದೆ. ಎರಡನೇ ಡೋಸ್ ಆಗಿ 1,19,062 ಜನರಿಗೆ ಲಸಿಕೆಗಳನ್ನು ನೀಡಿ ಶೇ.98.90 ರಷ್ಟು ಗುರಿ ಸಾಧಿಸಲಾಗಿದೆ.
- ಕುಂದಗೋಳ ತಾಲೂಕಿನಲ್ಲಿ ಒಟ್ಟು 1,29,189 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಇದರಲ್ಲಿ ಮೊದಲ ಡೋಸ್ ಆಗಿ 1,30,577 ಜನರಿಗೆ ಲಸಿಕೆ ನೀಡಿ ಶೇ.101.07 ರಷ್ಟು ಗುರಿ ಸಾಧಿಸಲಾಗಿದೆ. ಮತ್ತು ಎರಡನೇ ಡೋಸ್ ಆಗಿ 1,31,975 ಜನರಿಗೆ ಲಸಿಕೆಗಳನ್ನು ನೀಡಿ ಶೇ.102.16 ರಷ್ಟು ಗುರಿ ಸಾಧಿಸಲಾಗಿದೆ.
- ನವಲಗುಂದ ತಾಲೂಕಿನಲ್ಲಿ ಒಟ್ಟು 1,41,799 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಇದರಲ್ಲಿ ಮೊದಲ ಡೋಸ್ ಆಗಿ 1,40,787 ಜನರಿಗೆ ಲಸಿಕೆ ನೀಡಿ ಶೇ.99.29 ರಷ್ಟು ಗುರಿ ಸಾಧಿಸಲಾಗಿದೆ. ಮತ್ತು ಎರಡನೇ ಡೋಸ್ ಆಗಿ 1,49,267 ಜನರಿಗೆ ಲಸಿಕೆ ನೀಡಿ ಶೇ.105.27 ರಷ್ಟು ಗುರಿ ಸಾಧಿಸಲಾಗಿದೆ.
- ಜಿಲ್ಲೆಯಾದ್ಯಂತ ಒಟ್ಟು 14,44,000 ಲಸಿಕೆಗಳನ್ನು ನೀಡುವ ಗುರಿ ಹೊಂದಲಾಗಿತ್ತು. ಇದರಲ್ಲಿ ಒಟ್ಟು 15,10,465 ಜನರಿಗೆ ಮೊದಲ ಡೋಸ್ ನೀಡಿ ಶೇ.104.60 ರಷ್ಟು ಗುರಿ ಸಾಧಿಸಲಾಗಿದೆ. ಎರಡನೇ ಡೋಸ್ ಆಗಿ 15,30,193 ಜನರಿಗೆ ಲಸಿಕೆಗಳನ್ನು ನೀಡಿ, ಶೇ.105.97 ರಷ್ಟು ಗುರಿ ಸಾಧಿಸಲಾಗಿದೆ.

ಒಟ್ಟು ಜಿಲ್ಲೆಯಾದ್ಯಂತ 60,020 ಮಕ್ಕಳಿಗೆ ಲಸಿಕೆಯನ್ನು ನೀಡುವ ಗುರಿ ಹೊಂದಲಾಗಿತ್ತು. ಮೊದಲ ಡೋಸ್ ಆಗಿ 74,375 ಮಕ್ಕಳಿಗೆ ಲಸಿಕೆಯನ್ನು ನೀಡಿ ಶೇ.123.92 ರಷ್ಟು ಗುರಿ ಸಾಧಿಸಲಾಗಿದೆ. ಮತ್ತು ಎರಡನೇ ಡೋಸ್ ಆಗಿ 64,792 ಮಕ್ಕಳಿಗೆ ಲಸಿಕೆಯನ್ನು ನೀಡಿ ಶೇ.107.95 ರಷ್ಟು ಗುರಿ ಸಾಧಿಸಲಾಗಿದೆ. ನಿಗದಿತ ಗುರಿಗಿಂತ ಹೆಚ್ಚಿನ ಮಟ್ಟದಲ್ಲಿ ಸಾಧನೆ ಮಾಡಲಾಗಿದೆ.
15 ರಿಂದ 17 ವರ್ಷದ ಒಳಗಿನ ಮಕ್ಕಳ ಲಸಿಕಾ ಸಾಧನೆ:
ಜಿಲ್ಲೆಯಾದ್ಯಂತ ಒಟ್ಟು 95,774 ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಮೊದಲ ಡೋಸ್ ಆಗಿ 84,011 ಜನ ಮಕ್ಕಳಿಗೆ ಲಸಿಕೆ ನೀಡಿ ಶೇ.87.72 ರಷ್ಟು ಗುರಿ ಸಾಧಿಸಲಾಗಿದೆ. ಮತ್ತು ಎರಡನೇ ಡೋಸ್ ಆಗಿ 79,364 ಜನ ಮಕ್ಕಳಿಗೆ ಲಸಿಕೆ ನೀಡಿ ಶೇ.82.87 ರಷ್ಟು ಗುರಿ ಸಾಧಿಸಲಾಗಿದೆ.
18 ವರ್ಷ ಮೆಲ್ಪಟ್ಟ ಜನರಿಗೆ ನೀಡಲಾದ ಮುಂಜಾಗ್ರತಾ ಡೋಸ್ಗಳ ವಿವರ :
ಒಟ್ಟು ಜಿಲ್ಲೆಯಾದ್ಯಂತ 14,70,994 ಜನರಿಗೆ ಮುಂಜಾಗ್ರತಾ ಲಸಿಕೆಯನ್ನು ನೀಡುವ ಗುರಿ ಹೊಂದಲಾಗಿತ್ತು, ಅದರಲ್ಲಿ 3,01,432 ಜನರಿಗೆ ಮುಂಜಾಗ್ರತಾ ಲಸಿಕೆಯನ್ನು ನೀಡಿ ಇದುವರೆಗೆ ಶೇ.20.49 ರಷ್ಟು ಗುರಿ ಸಾಧಿಸಲಾಗಿದೆ.

- ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಟ್ಟು 1,115 ಹಾಸಿಗೆಗಳು, 760 ಆಕ್ಸಿಜನ್ ಹಾಸಿಗೆಗಳು, 240 ಐಸಿಯು ಹಾಗೂ 115 ವೆಂಟಿಲೇಟರ್ಗಳ ಸೌಲಭ್ಯವಿರವ ಹಾಸಿಗೆಗಳನ್ನು (ಬೆಡ್) ಹೊಂದಲಾಗಿದೆ.
- ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 163 ಹಾಸಿಗೆಗಳು, 121 ಆಕ್ಸಿಜನ್ ಹಾಸಿಗೆಗಳು, 21 ಐ.ಸಿ.ಯು ಹಾಗೂ 21 ವೆಂಟಿಲೇಟರ್ಗಳು ಕೋವಿಡ್ ಚಿಕಿತ್ಸೆಗೆ ಲಭ್ಯ ಇವೆ.
- ಹುಬ್ಬಳ್ಳಿಯ ರೇಲ್ವೆ ಆಸ್ಪತ್ರೆಯಲ್ಲಿ ಒಟ್ಟು 52 ಹಾಸಿಗೆಗಳು, 34 ಆಕ್ಸಿಜನ್ ಹಾಸಿಗೆಗಳು, 9 ಐಸಿಯು ಹಾಗೂ 9 ವೆಂಟಿಲೇಟರ್ಗಳು ಕೋವಿಡ್ ಚಿಕಿತ್ಸೆಗೆ ಲಭ್ಯ ಇವೆ.
- ಕಲಘಟಗಿ ಸರಕಾರಿ ಆಸ್ಪತ್ರೆಯಲ್ಲಿ ಒಟ್ಟು 50 ಹಾಸಿಗೆಗಳು, 40 ಆಕ್ಸಿಜನ್ ಹಾಸಿಗೆಗಳು, 7 ಐಸಿಯು ಹಾಗೂ 3 ವೆಂಟಿಲೇಟರ್ಗಳು ಕೋವಿಡ್ ಚಿಕಿತ್ಸೆಗೆ ಲಭ್ಯ ಇವೆ.
- ಕುಂದಗೋಳ ತಾಲೂಕಾ ಆಸ್ಪತ್ರೆಯಲ್ಲಿ ಒಟ್ಟು 50 ಹಾಸಿಗೆಗಳು, 40 ಆಕ್ಸಿಜನ್ ಹಾಸಿಗೆಗಳು, 7 ಐಸಿಯುಗಳು ಹಾಗೂ 3 ವೆಂಟಿಲೇಟರ್ಗಳು ಕೋವಿಡ್ ಚಿಕಿತ್ಸೆಗೆ ಲಭ್ಯ ಇವೆ.
- ನವಲಗುಂದ ಸರಕಾರಿ ಆಸ್ಪತ್ರೆಯಲ್ಲಿ ಒಟ್ಟು 50 ಹಾಸಿಗೆಗಳು, 40 ಆಕ್ಸಿಜನ್ ಹಾಸಿಗೆಗಳು, 7 ಐಸಿಯು ಹಾಗೂ 3 ವೆಂಟಿಲೇಟರ್ಗಳು ಕೋವಿಡ್ ಚಿಕಿತ್ಸೆಗೆ ಲಭ್ಯ ಇವೆ..
- ಹುಬ್ಬಳ್ಳಿಯ ಸರಕಾರಿ ಇ.ಎಸ್.ಐ ಆಸ್ಪತ್ರೆಯಲ್ಲಿ ಒಟ್ಟು 14 ಹಾಸಿಗೆಗಳು, 14 ಆಕ್ಸಿಜನ್ ಹಾಸಿಗೆಗಳು ಕೋವಿಡ್ ಚಿಕಿತ್ಸೆಗೆ ಲಭ್ಯ ಇವೆ.
- ಹೀಗೆ ಜಿಲ್ಲೆಯಲ್ಲಿ ಒಟ್ಟು 7 ಸರಕಾರಿ ಆಸ್ಪತ್ರೆಗಳಲ್ಲಿ 1,494 ಹಾಸಿಗೆಗಳು, 1,049 ಆಕ್ಸಿಜನ್ ಹಾಸಿಗೆಗಳು, 291 ಐಸಿಯು ಹಾಗೂ 154 ವೆಂಟಿಲೇಟರ್ ಗಳು ಕೋವಿಡ್ ಚಿಕಿತ್ಸೆಗೆ ಲಭ್ಯ ಇವೆ.
- ಜಿಲ್ಲೆಯ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು 815 ಹಾಸಿಗೆಗಳು, 682 ಆಕ್ಸಿಜನ್ ಹಾಸಿಗೆಗಳು, 89 ಐಸಿಯು ಹಾಗೂ 44 ವೆಂಟಿಲೇಟರ್ಗಳು ಕೋವಿಡ್ ಚಿಕಿತ್ಸೆಗೆ ಲಭ್ಯ ಇವೆ.
- ಒಟ್ಟು ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸೇರಿ ಜಿಲ್ಲೆಯಾದ್ಯಂತ ಒಟ್ಟು 2,309 ಹಾಸಿಗೆಗಳು, 1,731 ಆಕ್ಸಿಜನ್ ಹಾಸಿಗೆಗಳು, 380 ಐಸಿಯು ಹಾಗೂ 198 ವೆಂಟಿಲೇಟರ್ಗಳು ಕೋವಿಡ್ ಚಿಕಿತ್ಸೆಗೆ ಲಭ್ಯ ಇವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post