Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ಕರ್ನಾಟಕವು ದೇಶದ ಮೊದಲ ಯೋಗ ಸಾಕ್ಷರತಾ ರಾಜ್ಯವಾಗುವತ್ತ ಹೆಜ್ಜೆ

January 12, 2023
in ಧಾರವಾಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಸ್ವಾತಂತ್ರ್ಯೋತ್ಸವ ಅಮೃತ್ ಮಹೋತ್ಸವದ ಅಂಗವಾಗಿ ಹಾಗೂ ಯೋಗವನ್ನು ಕಡ್ಡಾಯ ವಿಷಯವನ್ನಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅಳವಡಿಸಿಕೊಂಡಿರುವುದರಿಂದ, ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಸಹಭಾಗಿತ್ವದಲ್ಲಿ ಕಳೆದ ಅಂತರರಾಷ್ಟ್ರೀಯ ಯೋಗ ದಿನವಾದ ಜೂನ್ 21, 2022 ರಂದು ಯೋಗಥಾನ್ ಕಾರ್ಯಕ್ರಮವನ್ನು ರಾಷ್ಟ್ರದಾದ್ಯಂತ ಆರಂಭಿಸಲಾಗಿದೆ.

ಕರ್ನಾಟಕವು 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಆತಿಥ್ಯ ವಹಿಸುತ್ತಿರುವ ಹಿನ್ನಲೆಯಲ್ಲಿ ಯೋಗಥಾನ್ ಕಾರ್ಯಕ್ರಮದ ಅಂತಿಮ ಘಟ್ಟವನ್ನು ಜನವರಿ 15, 2023ರಂದು 10 ಸಾವಿರ ಯೋಗಬೋಧಕರು ಮತ್ತು 10 ಲಕ್ಷಕ್ಕೂ ಅಧಿಕ ಯೋಗಾಸಕ್ತರಿಂದ ಗಿನ್ನೆಸ್ ವಿಶ್ವದಾಖಲೆ ಪ್ರಯತ್ನವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ 26ನೇ ರಾಷ್ಟ್ರೀಯ ಯುವಜನೋತ್ಸವದಲ್ಲಿ ಜನವರಿ 15 ರಂದು ಧಾರವಾಡದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ರಾಣಿ ಚೆನ್ನಮ್ಮ ಕ್ರೀಡಾಂಗಣ, ಕೃಷಿ ವಿಶ್ವವಿದ್ಯಾಲಯದ ಕ್ರೀಡಾಂಗಣ ಮತ್ತು ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣ ಮತ್ತು ಹುಬ್ಬಳ್ಳಿಯ ರೈಲ್ವೆ ಕ್ರಿಕೇಟ್ ಮೈದಾನದಲ್ಲಿ ಬೃಹತ್ ಯೋಗಾಥಾನ್ ಸಂಘಟಿಸಲು ಜಿಲ್ಲಾಡಳಿತ ಭರದ ಸಿದ್ಧತೆ ಮಾಡಿಕೊಂಡಿದೆ.
ಅಂದು ಬೆಳಿಗ್ಗೆ ಅವಳಿ ನಗರದ ಈ ನಾಲ್ಕು ಮೈದಾನಗಳಲ್ಲಿ ಬೆಳಿಗ್ಗೆ 6-30 ರಿಂದ 9-30 ಗಂಟೆಯವರೆಗೆ ಯೋಗಾಥಾನ್ ನಡೆಯಲಿದೆ. ಇದರಲ್ಲಿ ರಾಷ್ಟ್ರೀಯ ಯುವಜನೋತ್ಸವಕ್ಕೆ ವಿವಿಧ ರಾಜ್ಯಗಳಿಂದ ಆಗಮಿಸಿರುವ 7,500 ಪ್ರತಿನಿಧಿಗಳು ಮತ್ತು ಧಾರವಾಡ ಜಿಲ್ಲೆಯ ಸುಮಾರು 22 ಸಾವಿರ ಯೋಗಾಸಕ್ತರು ಭಾಗವಹಿಸಲಿದ್ದಾರೆ.

ಕ್ರೀಡಾಂಗಣಗಳಲ್ಲಿ ಯೋಗಾಥಾನ್ ಯಶಸ್ವಿಗಾಗಿ ಸ್ವಚ್ಛತೆ, ಕುಡಿಯುವ ನೀರು ಮತ್ತು ಶೌಚಾಲಯಗಳ ವ್ಯವಸ್ಥೆ ಮಾಡಲಾಗುತ್ತಿದೆ. ಕ್ರೀಡಾಂಗಣಗಳಲ್ಲಿ ಪ್ರತಿ ಯೋಗಾಪಟುಗೆ ನಿರ್ಧಿಷ್ಟ ಸ್ಥಳ ಗುರುತಿಸಿ, ಸುಣ್ಣದ ಗೆರೆ ಹಾಕಿ, ಯೋಗಪಟುಗಳು ಶಿಸ್ತುಬದ್ಧವಾಗಿ ಭಾಗವಹಿಸಲು ಅನುಕೂಲವಾಗುವಂತೆ ಮಾಡಲಾಗಿದೆ.

ಯುವಜನೋತ್ಸವಕ್ಕೆ ಆಗಮಿಸಿರುವ ವಿವಿಧ ರಾಜ್ಯಗಳ 7500 ಪ್ರತಿನಿಧಿಗಳಿಗೆ ಯುಪ್ಲೆಕ್ಸ್ ಮತ್ತು ಟಾಟಾ ಇಟಾಚಿ ಕಂಪನಿಗಳು ಉತ್ತಮ ಗುಣಮಟ್ಟದ ಯೋಗಾ ಮ್ಯಾಟ್‍ಗಳನ್ನು ಕೊಡುಗೆಯಾಗಿ ನೀಡಿವೆ. ಸ್ವಾಗತ ಸಮಿತಿಯು ಪ್ರತಿನಿಧಿಗಳ ವೆಲ್‍ಕಂ ಕಿಟ್‍ದೊಂದಿಗೆ ಈ ಮ್ಯಾಟ್‍ಗಳನ್ನು ಸಹ ನೀಡಿದೆ.
ರಾಜ್ಯ ಸರ್ಕಾರವು ಯೋಗ ತರಬೇತಿ ಮತ್ತು ಪ್ರದರ್ಶನಕ್ಕೆ ವಿಶೇಷ ಆಧ್ಯತೆ ನೀಡಿ ಅನುಷ್ಠಾನಗೊಳಿಸುತ್ತಿದೆ. ರಾಜ್ಯದ ಹಲವು ವಿಶ್ವವಿದ್ಯಾಲಯಗಳಲ್ಲಿ ಯೋಗ ಒಂದು ಅಧ್ಯಯನ ವಿಷಯವಾಗಿ ಮತ್ತು ಸಂಶೋಧನಾ ವಿಷಯವಾಗಿ ಬಹು ಹಿಂದಿನಿಂದಲೂ ಯೋಗಾಸಕ್ತ ವಿದ್ಯಾರ್ಥಿಗಳು, ಬೋಧಕರು ಅಳವಡಿಸಿಕೊಂಡಿದ್ದಾರೆ. ಪ್ರಧಾನಮಂತ್ರಿಗಳ ವಿಶೇಷ ಆಸಕ್ತಿ ಮತ್ತು ಆಧ್ಯತೆಯಿಂದಾಗಿ ಇಡೀ ವಿಶ್ವವೇ ಇಂದು ಯೋಗದತ್ತ ಹೊರಳುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಯೋಗಾಥಾನ್ ಕಾರ್ಯಕ್ರಮದ ಮೂಲಕ ಹೊಸ ದಾಖಲೆ ಸೃಷ್ಟಿಸಲು ಮುಂದಾಗಿದೆ. ರಾಜ್ಯವು ಯೋಗ ಸಾಕ್ಷರ ರಾಜ್ಯವಾಗಲು ಆಸಕ್ತಿ ಹೊಂದಿದೆ.

ಈ ಹಿಂದೆ ರಾಜಸ್ಥಾನದಲ್ಲಿ ಸುಮಾರು 1.6 ಲಕ್ಷ ಜನರಿಂದ ನಿರ್ಮಿಸಲಾಗಿದ್ದ ಯೋಗ ದಾಖಲೆಯನ್ನು ಯೋಗಥಾನ್ ಕಾರ್ಯಕ್ರಮದ ಮೂಲಕ ಅಳಿಸಿ ಹಾಕಲಾಗುತ್ತದೆ. ಈ ಮೂಲಕ ಕರ್ನಾಟಕವನ್ನು ದೇಶದ ಮೊದಲ ಯೋಗ ಸಾಕ್ಷರತಾ ರಾಜ್ಯವನ್ನಾಗಿ ಮಾಡಲಾಗುತ್ತಿದೆ.

ಸುಮಾರು 13 ಲಕ್ಷ ವಿದ್ಯಾರ್ಥಿಗಳು, 12,000 ಯೋಗಬೋಧಕರು ಮತ್ತು 8,000 ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳು ವೆಬ್ www.yogathon2022.com ಪೋರ್ಟ್‍ಲ್‍ದಲ್ಲಿ ಈವರೆಗೂ ನೋಂದಣಿ ಮಾಡಿಕೊಂಡಿರುತ್ತಾರೆ. ದೆಹಲಿಯ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಶಿಕ್ಷಣ ಸಂಸ್ಥೆಯು ಈ ಕಾರ್ಯಕ್ರಮದ ಜ್ಞಾನ ಪಾಲುದಾರ (Knowledge Partner) ವಾಗಿದ್ದು, ಯೋಗಪಟುಗಳಿಗೆ ತರಬೇತಿಗೆ ಸಂಬಂಧಿಸಿದ ವಿಷಯಗಳಲ್ಲಿ ಮಾರ್ಗದರ್ಶನ ನೀಡುತ್ತಿದೆ.
ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗೆ ಆಗುವ ಪ್ರಯೋಜನಗಳು: 100 ವಿದ್ಯಾರ್ಥಿಗಳನ್ನು ಯೋಗ ಸರ್ಟಿಫಿಕೇಶನ್ ಬೋರ್ಡ್‍ನ ಯೋಗ ಫಾರ್ ವೆಲೆನೆಸ್ ಕಾರ್ಯಕ್ರಮಕ್ಕೆ ದಾಖಲು ಮಾಡುವ ಶಿಕ್ಷಣ ಸಂಸ್ಥೆಗೆ 10,000 ಪ್ರೋತ್ಸಾಹ ಧನವನ್ನು ಯೋಗ ಸರ್ಟಿಫಿಕೇಶನ್ ಬೋರ್ಡ್‍ನಿಂದ ನೀಡಲಾಗುತ್ತದೆ.

ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಯೋಗಥಾನ್ ಕಾರ್ಯಕ್ರಮಕ್ಕೆ ನೋಂದಾಯಿಸಲು ಪ್ರಥಮ ಮೂರು ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳಿಗೆ ಬಹುಮಾನ ನೀಡಲಾಗುವುದು.

500-1000 ವಿದ್ಯಾರ್ಥಿಗಳನ್ನು ಯೋಗಥಾನ್ ಕಾರ್ಯಕ್ರಮಕ್ಕೆ ನೋಂದಾಯಿಸುವ ಶಾಲೆ, ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗೆ ಯೋಗ ಸರ್ಟಿಫಿಕೇಶನ್ ಬೋರ್ಡ್‍ನಿಂದ ಪ್ರಮಾಣಿಕೃತ ಯೋಗ ಕೇಂದ್ರ ಎಂದು ಗುರುತಿಸಲಾಗುತ್ತದೆ. ಇದಕ್ಕಾಗಿ ನಿಗದಿಪಡಿಸಿರುವ ಶುಲ್ಕವಾದ 25,000 ಗಳನ್ನು ಪಾವತಿಸುವ ಬದಲು ಯೋಗಥಾನ್ ಕಾರ್ಯಕ್ರಮದ ಮೂಲಕ ಕೇವಲ 1,000 ಶುಲ್ಕವನ್ನಷ್ಟೇ ಪಾವತಿ ಮಾಡಬೇಕಾಗುತ್ತಿದೆ.
ರಾಷ್ಟ್ರೀಯ ಶಿಕ್ಷಣ ನೀತಿಯ ಯೋಗ ಪಠ್ಯಕ್ರಮವನ್ನು ಶಾಲೆ, ಕಾಲೇಜುಗಳು ಅಳವಡಿಸಿಕೊಳ್ಳಬಹುದು. ಯೋಗ ತರಬೇತುದಾರರಿಗೆ ಆಗುವ ಪ್ರಯೋಜನಗಳು: ಯೋಗ ಸರ್ಟಿಫಿಕೇಶನ್ ಬೋರ್ಡ್‍ನ ಯೋಗ ಫಾರ್ ವೆಲ್‍ನೆಸ್ ಕಾರ್ಯಕ್ರಮಕ್ಕೆ ಕನಿಷ್ಠ 100 ವಿದ್ಯಾರ್ಥಿಗಳನ್ನು ನೋಂದಾಯಿಸುವ ಯೋಗ ಬೋಧಕರಿಗೆ ಯೋಗ ಸರ್ಟಿಫಿಕೇಶನ್ ಬೋರ್ಡ್‍ನಿಂದ ರೂ. 10,000 ಪ್ರೋತ್ಸಾಹ ಧನ ನೀಡಲಾಗುತ್ತದೆ.

ಯೋಗ ಸರ್ಟಿಫಿಕೇಶನ್ ಬೋರ್ಡ್‍ನ ಯೋಗಬೋಧಕ ಹಂತ-1 ಕ್ಕೆ ರೂ.1,770/- ಪಾವತಿಸಿ, ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣಗೊಳ್ಳುವ ಮೂಲಕ ಯೋಗ ಸರ್ಟಿಫಿಕೇಶನ್ ಬೋರ್ಡ್‍ನಿಂದ ಪ್ರಮಾಣಿಕೃತ್ ಯೋಗ ಭೋಧಕರಾಗಬಹುದು. ಯೋಗ ಸರ್ಟಿಫಿಕೇಶನ್ ಬೋರ್ಡ್‍ನ ಪರ್ಸನಲ್ ರಿವ್ಯೂ ಸರ್ಟಿಫಿಕೇಶನ್ ಅಂಗವಾಗಿರುವ ಆಯುಷ್ ಟಿ.ವಿ.ಯು ಪ್ರತಿನಿತ್ಯ ಬೆಳಗ್ಗೆ 6 ಗಂಟೆಯಿಂದ 8 ರ ವರೆಗೆ ಯೋಗ ತರಬೇತುದಾರ ಹಂತ್-1 ರ ಆನ್‍ಲೈನ್ ತರಬೇತಿ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಿದೆ. ಯೋಗ ಬೋಧಕರ ಪರೀಕ್ಕೆ ತೆಗೆದುಕೊಳ್ಳುವ ಅಭ್ಯರ್ಥಿಗಳು ಆಯುಷ್ ಟಿ.ವಿ.ಯ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬಹುದು.

ಯೋಗ ಸರ್ಟಿಫಿಕೇಶನ್ ಬೋರ್ಡ್‍ನ ಹಂತ್-1ರ ಪರೀಕ್ಷೆಯನ್ನು ಮೊಬೈಲ್ ಮೂಲಕ, ಯಾವ ಸ್ಥಳದಿಂದ ಆದರೂ ತೆಗೆದುಕೊಳ್ಳಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Previous Post

ಜ.21,22 ಉತ್ತರ ಕರ್ನಾಟಕ ಉತ್ಸವ: ಸಿಎಂ ಬೊಮ್ಮಾಯಿ ಅವರಿಂದ ಲೋಗೋ ಬಿಡುಗಡೆ

Next Post

ಮಾಜಿ ಸಚಿವ ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ಕೋರ್ಟ್ ಆದೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾಜಿ ಸಚಿವ ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ಕೋರ್ಟ್ ಆದೇಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!