No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಐಐಐಟಿಗೆ ರಾಷ್ಟ್ರಪತಿಗಳ ಭೇಟಿ: ಬುಡಕಟ್ಟು ಆದಿವಾಸಿಗಳ ಭಾಷೆಗಳಿಗೆ ಧ್ವನಿಭಾಷಾನುವಾದ ರೋಬೋಟ್ ಸಂಶೋಧನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 23, 2022
in ಹುಬ್ಬಳ್ಳಿ-ಧಾರವಾಡ
0
ಐಐಐಟಿಗೆ ರಾಷ್ಟ್ರಪತಿಗಳ ಭೇಟಿ: ಬುಡಕಟ್ಟು ಆದಿವಾಸಿಗಳ ಭಾಷೆಗಳಿಗೆ ಧ್ವನಿಭಾಷಾನುವಾದ ರೋಬೋಟ್ ಸಂಶೋಧನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ   |

ದೇಶದ ಪ್ರತಿಷ್ಠಿತ ರಾಷ್ಟ್ರಮಟ್ಟದ ಶಿಕ್ಷಣ ಸಂಸ್ಥೆಯಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಗೆ ರಾಷ್ಟ್ರಪತಿಗಳು ಆಗಮಿಸುವ ಸಂಭ್ರಮ ಒಂದೆಡೆಯಾದರೆ ಇದೇ ಸಂಸ್ಥೆಯಿಂದ ರಾಷ್ಟ್ರಪತಿಗಳ ಮೂಲ ರಾಜ್ಯವಾದ ಓರಿಸ್ಸಾದ ಬುಡಕಟ್ಟು ನಿವಾಸಿಗಳಿಗಾಗಿ ಬಹುಭಾಷಾ ಧ್ವನಿಅನುವಾದ ಮಾಡುವ ರೋಬೋಟ್ ಯಂತ್ರವನ್ನು ಸಿದ್ಧಪಡಿಸುತ್ತಿರುವುದು ನಾಡಿನ ಹೆಮ್ಮೆಯ ಸಂಗತಿಯಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು President Droupadi Murmu ಅವರು ಸೆಪ್ಟೆಂಬರ್ 26 ರಂದು ಮಧ್ಯಾಹ್ನ ಐಐಐಟಿ ಸಂಸ್ಥೆಯನ್ನು ನಾಡಿಗೆ ಸಮರ್ಪಿಸಲಿದ್ದಾರೆ. ಈ ಶುಭ ಸಂದರ್ಭದಲ್ಲಿಯೇ ಈ ಸಂಸ್ಥೆಯು ಉನ್ನತ ಮಟ್ಟದಲ್ಲಿ ತಯಾರಿಸುತ್ತಿರುವ ಹುಮುನೊಯ್ಡ ರೋಬೋಟ್ ಯಂತ್ರದ ಮಾಹಿತಿಯನ್ನು ರಾಷ್ಟ್ರಪತಿಗಳ ಗಮನಕ್ಕೆ ತರಲಿದೆ.
ಅತ್ಯಾಧುನಿಕ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನವನ್ನು ಬಳಸಿಕೊಂಡು ಬುಡಕಟ್ಟು ಭಾಷೆಗಳಿಂದ ಇತರ ಭಾಷೆಗಳಿಗೆ ಧ್ವನಿಭಾಷಾನುವಾದದ ಉಪಕರಣವನ್ನು ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆಯೆಂದು ಈ ಸಂಸ್ಥೆಯ ಇಸಿಇ ವಿಭಾಗದ ಪ್ರಾಧ್ಯಾಪಕರು ಹಾಗೂ ಈ ಯೋಜನೆಯ ಪ್ರಧಾನ ಪರೀಕ್ಷಕರಾದ ಡಾ.ಕೆ.ಟಿ.ದೀಪಕ ತಿಳಿಸಿದ್ದಾರೆ.

ಪ್ರಸ್ತುತ ಈ ರೋಬೋಟ್ ತಂತ್ರಜ್ಞಾನದಲ್ಲಿ ಬುಡಕಟ್ಟು ಜನರಿಗೆ ಇಂಗ್ಲೀಷ್ ಭಾಷೆಯಲ್ಲಿ ಲಭ್ಯವಿರುವ ಮಾಹಿತಿಯ ಬುಡಕಟ್ಟಿನ ಭಾಷೆಯಲ್ಲಿ ದೊರೆಯಲಿದೆ. ಈ ಯೋಜನೆಯಲ್ಲಿ ಓರಿಸ್ಸಾದ ಕುಯಿ ಮತ್ತು ಮುಂಡಾರಿ ಭಾಷೆಗಳನ್ನು ಹಾಗೂ ಕರ್ನಾಟಕದ ಲಂಬಾಣಿ ಹಾಗೂ ಸೋಲಿಗ ಭಾಷೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ಇಂಗ್ಲೀಷ್ ಭಾಷೆಯಿಂದ ಹೇಳಲ್ಪಟ್ಟ ಬುಡಕಟ್ಟಿನ ಭಾಷೆಗೂ ಹಾಗೂ ಬುಡಕಟ್ಟು ಭಾಷೆಯಿಂದ ಇಂಗ್ಲೀಷ್ ಭಾಷೆಗೂ ಸ್ಪಷ್ಟವಾಗಿ ಅನುವಾದ ಮಾಡಬಹುದಾದಂತಹ ತಂತ್ರಲಿಪಿಯನ್ನು ಸಿದ್ಧಪಡಿಸಲಾಗುತ್ತಿದೆ. ಈಗಾಗಲೇ ಲಂಬಾಣಿ, ಸೋಲಿಗ ಮತ್ತು ಕುಯಿಗೆ ಪಠ್ಯದಿಂದ ಪಠ್ಯಕ್ಕೆ ಮಾತಿನ ಸಂಶ್ಲೇಷಣೆಯ ಮಾದರಿಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಡಾ.ದೀಪಕ್ ತಿಳಿಸಿದರು.
ಸಾವಿರಾರು ವರ್ಷಗಳ ಇತಿಹಾಸವಿರುವ ಲಿಪಿಯಲ್ಲಿನ ಭಾಷೆ ಸಾಕಾಷ್ಟು ಜ್ಞಾನವಿರುವ ಈ ಬುಡಕಟ್ಟು ಜನಾಂಗದಲ್ಲಿ ಈ ತಂತ್ರಜ್ಞಾನ ಉಪಯೋಗವಾದರೆ ಜೀವವೈವಿಧ್ಯತೆ, ಪ್ರಾಣಿಗಳ ಜ್ಞಾನ, ಸಂಗೀತ, ನೃತ್ಯ, ಕಲೆ, ಪರಂಪರೆ, ಸಂಸ್ಕೃತಿ ಡಿಜಿಟಲ್ ರೂಪದಲ್ಲಿ ಹಿಡಿದಿಟ್ಟುಕೊಂಡು ಹೊರ ಜಗತ್ತಿಗೆ ಗೊತ್ತಾಗಲಿದೆ. ಸರ್ಕಾರಿ ಯೋಜನೆಗಳ ಬಗ್ಗೆ ಅರಿವು, ಸದುಪಯೋಗಪಡಿಸಿಕೊಳ್ಳುವ ಬಗ್ಗೆಯೂ ಇದರಿಂದ ತಿಳಿದುಕೊಳ್ಳಬಹುದಾಗಿದೆ ಎಂದು ಡಾ.ಕೆ.ಟಿ.ದೀಪಕ್ ತಿಳಿಸಿದರು.

Also read: ಅ.30ರಂದು ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ: ಶಾಸಕ ಈಶ್ವರಪ್ಪ

ಧಾರವಾಡದ ಹೈದ್ರಾಬಾದ್ ಹಾಗೂ ಭೂವನೇಶ್ವರ ಐಐಟಿ ಸಂಸ್ಥೆಗಳ ಸಹಯೋಗದಲ್ಲಿ ನಡೆಯುತ್ತಿರುವ ಈ ಸಂಶೋಧನೆಯಲ್ಲಿ ಸಹಪರೀಕ್ಷಕರಾದ ಡಾ.ಪ್ರಕಾಶ ಪವಾರ ಹಾಗೂ ಡಾ.ಸಿಬಾಶಂಕರಪಾಡಿ ತೊಡಗಿಸಿಕೊಂಡಿದ್ದಾರೆ. ನವದೆಹಲಿಯ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪ್ರಾಥಮಿಕ ಹಂತವಾಗಿ 44.53 ಲಕ್ಷ ಅನುದಾನವನ್ನು ನೀಡಿದೆ.

ಸ್ವಯಂಚಾಲಿತ ಮಾನವರೂಪಿ ರೋಬೋಟ್: ವಯಸ್ಸಾಮ,ದ ಹಿರಿಯರ ಸೇವೆಗೆ ಅನುಕೂಲವಾಗುವ ದೃಷ್ಟಿಯಿಂದ ಸ್ವಯಂಚಾಲಿತ ಮಾನವರೂಪಿ ರೋಬೋಟ್‍ನ್ನು ಸಹ ಐಐಐಟಿ ಧಾರವಾಡದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಪ್ರಧಾನ ಪರೀಕ್ಷಕ ಡಾ.ಕೆ.ಟಿ.ದೀಪಕ್ ಅವರು ತಿಳಿಸಿದ್ದಾರೆ.
ಪ್ರಸ್ತುತ ಸಂಶೊಧನಾ ಯೋಜನೆಯು ಭಾರತದ ವಾತಾವರಣಕ್ಕೆ ಒಗ್ಗುವಂತಹ, ವಯಸ್ಸಾದವರ ಆರೈಕೆಗಾಗಿ ಮಾನವರೂಪಿ ರೋಬೋಟನ್ನು ತಯಾರಿಸುವುದಾಗಿದೆ. ಅದಲ್ಲದೆ ಹಾರ್ಡ್‍ವೇರ್ ಮತ್ತು ಸಾಫ್ಟ್‍ವೇರ್ ಮಾರ್ಪಾಡು ಮಾಡುವುದರಿಂದ ಇತರ ಉಪಯೋಗಗಳಿಗೂ ಬಳಸಬಹುದಾಗಿದೆ. ನಿಯೋಜಿಸಿದ ರೋಬೋಟ್ ನಿಯಮಿತ ಕೆಲಸಗಳನ್ನು ಮಾಡುವ ಸಾಮಥ್ರ್ಯ ಹೊಂದಿರುತ್ತದೆ. ಅಲ್ಲದೆ ಮಾನಸಿಕ ಸೌಖ್ಯಕ್ಕಾಗಿ ಬಹುವಿಧಗಳಿಂದ ಸಂವಹಿಸುವ ಶಕ್ತಿಯನ್ನು ಹೊಂದಿರುತ್ತದೆ. ಇಂತಹ ರೋಬೋಟ್ ಅಲ್ಪ ಸಮಯದಲ್ಲಿ ತಯಾರಿಸುವುದು ಕಷ್ಟಸಂಗತಿ ಎಂದು ಡಾ.ಕೆ.ಟಿ.ದೀಪಕ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್ ತಿಹಾನ್ ಐಐಟಿ ಏಜೆನ್ಸಿ ಮೂಲಕ ರೂ.70 ಲಕ್ಷಗಳ ಅನುದಾನದದಲ್ಲಿ ಸ್ವಯಂಚಾಲಿತ ಮಾನವರೂಪಿ ರೋಬೋಟ್ ತಯಾರಿಸಲಾಗುತ್ತಿದೆ. ಈ ಸಂಶೋಧನೆಯಲ್ಲಿ ಸಹಪರೀಕ್ಷಕರಾದ ಪ್ರೊ.ಕವಿ ಮಹೇಶ್, ಡಾ.ರಾಜೇಂದ್ರ ಹೆಗಡಿ, ಡಾ.ಪವನ್ ಕುಮಾರ್ ಸಿ, ಡಾ.ರಮೇಶ ಆತೆ, ಡಾ.ಚಿನ್ಮಯಾನಂದ ಎ. ತೊಡಗಿಸಿಕೊಂಡಿದ್ದಾರೆ.

ಸಂಸ್ಥೆಗೆ ನಿನ್ನೆ ಭೇಟಿ ನೀಡಿದ ವಾರ್ತಾ ಇಲಾಖೆಯ ಜಿಲ್ಲಾ ವಾರ್ತಾಧಿಕಾರಿ ಮಂಜುನಾತ ಸುಳ್ಳೊಳ್ಳಿ ಹಾಗೂ ವಾರ್ತಾ ಇಲಾಖೆಯ ಉಪನಿರ್ದೇಶಕ ಮಂಜುನಾಥ ಡೊಳ್ಳಿನ ಅವರಿಗೆ ಸದರಿ ಸಂಶೋಧನಾ ವಿಷಯಗಳ ಬಗ್ಗೆ ಡಾ.ಕೆ.ಟಿ.ದೀಪಕ್ ಸವಿಸ್ತಾರವಾಗಿ ವಿವರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPresident Droupadi Murmuಧಾರವಾಡರಾಷ್ಟ್ರಪತಿ ದ್ರೌಪದಿ ಮುರ್ಮು
Share196Tweet123Send
Previous Post

ಅ.30ರಂದು ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ: ಶಾಸಕ ಈಶ್ವರಪ್ಪ

Next Post

ರಾಷ್ಟ್ರಪತಿಗಳಿಂದ ಸೆ.26ರಂದು ಧಾರವಾಡ ಐಐಐಟಿಯ ನೂತನ ಕ್ಯಾಂಪಸ್ ಉದ್ಘಾಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಷ್ಟ್ರಪತಿಗಳಿಂದ ಸೆ.26ರಂದು ಧಾರವಾಡ ಐಐಐಟಿಯ ನೂತನ ಕ್ಯಾಂಪಸ್ ಉದ್ಘಾಟನೆ

ರಾಷ್ಟ್ರಪತಿಗಳಿಂದ ಸೆ.26ರಂದು ಧಾರವಾಡ ಐಐಐಟಿಯ ನೂತನ ಕ್ಯಾಂಪಸ್ ಉದ್ಘಾಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL