ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಮಕ್ಕಳ ಮನಸ್ಸನ್ನು ಅರಿತು ಅವರಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿ ಅಕ್ಷರ ಅಭ್ಯಾಸ ಕಲಿಸಿ ಭವಿಷ್ಯದ ಉತ್ತಮ ನಾಗರಿಕರನ್ನು ರೂಪಿಸುವ ಉನ್ನತ ಕಾರ್ಯದಲ್ಲಿ ತೊಡಗಿರುವ ಶಿಕ್ಷಕರು ಸದೃಢ ಸಮಾಜ ನಿರ್ಮಾಣದ ಶಿಲ್ಪಿಗಳು ಎಂದು ಶಾಸಕ ಅಮೃತ ದೇಸಾಯಿ ಹೇಳಿದರು.
ತಾಲೂಕಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ದಿ ಕೇಂದ್ರದಲ್ಲಿ ಇತ್ತೀಚೆಗೆ (ಸೆ.05) ಆಯೋಜಿಸಿದ್ದ ಧಾರವಾಡ ತಾಲೂಕಾ ಮಟ್ಟದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಹರ ಮುನಿದರೂ ಗುರು ಕಾಯುವನು. ಸಮಾಜದಲ್ಲಿ ಉತ್ತಮ ಮೌಲ್ಯಗಳು ಹೆಚ್ಚಾಗಲು ಗುರುಗಳ ಪಾತ್ರ ಮಹತ್ವದ್ದು. ಅಜ್ಞಾನದ ಕತ್ತಲನ್ನು ದೂರ ಮಾಡಲು ಜ್ಞಾನದ ದೀವಿಗೆ ಬೆಳಗುವ ಕಾರ್ಯ ಶಿಕ್ಷಕರು ನಿರ್ವಹಿಸುತ್ತಾರೆ. ಹಲವಾರು ಸಮಸ್ಯೆಗಳ ನಡುವೆಯೂ ಶಿಕ್ಷಕರು ತಮ್ಮ ವೃತ್ತಿ ಶ್ರೇಷ್ಟತೆ ಮೆರೆಯುತ್ತಿರುವುದು ಶ್ಲಾಘನೀಯ ಎಂದರು.

ಉಪ್ಪಿನ ಬೇಟಗೇರಿಯ ವಿರುಪಾಕ್ಷ ಮಹಾಸ್ವಾಮಿಗಳು, ಅಮ್ಮಿನಭಾವಿ ಅಭಿನವ ಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ, ಆರ್ಶಿವಚನ ನೀಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ಪ್ರಾಸ್ತಾವಿಕವಾಗಿ ಮಾತನಾಡಿದರು.
Also read: ರೈತ ದೇಶದ ಬೆನ್ನೆಲುಬು, ಜಾನುವಾರುಗಳು ರೈತನ ಬೆನ್ನೆಲುಬು ಆಗಿವೆ: ಬಿ.ಎಸ್. ಮೂಗನೂರಮಠ
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಯಿತು. ಉತ್ತಮ ಶಾಲೆಗಳಿಗೆ, ನಿವೃತ್ತ ಶಿಕ್ಷಕರಿಗೆ ಇಲಾಖೆಯಿಂದ ಸನ್ಮಾನಿಸಿ ಗೌರವಿಸಲಾಯಿತು. ತಾಲೂಕಿನ ಶಿಕ್ಷಕರಿಗೆ ಗುರುತಿನ ಪತ್ರ, ಮುಖ್ಯೋಪಾಧ್ಯಾಯರಿಗೆ ಶಾಲಾ ಹುದ್ದೆಗಳ ಮಂಜೂರಾತಿ ಆದೇಶ, ಗುರುಸ್ಪಂದನ ನಿಮಿತ್ತ ಐದು ಶಿಕ್ಷಕರಿಗೆ ಸೇವಾ ಪುಸ್ತಕ ಪರಿಶೀಲನೆಗೆ ಅವಕಾಶ ಹಾಗೂ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮಗಳು ನಡೆದವು.











Discussion about this post