No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ನಾನೇನು ರಾಬರಿ ಮಾಡಿದ್ದೀನಾ? ಸತ್ತ ಮೇಲೆ ನಮ್ಮ ತಿಥಿ ಮಾಡಿ ಆನಂದ ಪಡಿ: ಹಿರಿಯ ನಟ ಜಗ್ಗೇಶ್ ಆಕ್ರೋಶ

ಘಟನೆ ಕುರಿತು ವೀಡಿಯೋ ಮೂಲಕ ಮನದಾಳದ ನೋವನ್ನು ಹೊರಹಾಕಿದ ನವರಸ ನಾಯಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 23, 2021
in ಸಿನೆಮಾ
0
ಇದು ಆಧುನಿಕ ಭಾರತ, ಕಳ್ಳ ಗುಣದವರು ಜೈಲಲ್ಲಿ ಮುಂದೆ: ಜಗ್ಗೇಶ್ ಟ್ವೀಟ್ ಚಾಟಿ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ನಾವು ಸತ್ತ ಮೇಲೆ ನಮ್ಮ ತಿಥಿ ಮಾಡಿ, ಆನಂದ ಪಡಿ, ಸಂತೋಷ ಪಡಿ….

ಇದು ತಮ್ಮ ವಿರುದ್ಧ ವ್ಯವಸ್ಥಿತ ಅಪಪ್ರಚಾರ ಮಾಡುತ್ತಿರುವವರ ಕುರಿತು ಹಿರಿಯ ನಟ ನವರಸ ನಾಯಕ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿರುವ ಪರಿ…

ಹೌದು… ದರ್ಶನ್ ಅಭಿಮಾನಿಗಳು ನಿನ್ನೆ ಮೈಸೂರಿನಲ್ಲಿ ಚಿತ್ರೀಕರಣದಲ್ಲಿದ್ದ ಜಗ್ಗೇಶ್ ಅವರನ್ನು ಭೇಟಿಯಾದ ವೇಳೆ ನಡೆದ ವಾಗ್ವದದ ಘಟನೆಯನ್ನು ಅಪಪ್ರಚಾರ ಮಾಡುತ್ತಿರುವವರಿಗೆ ವೀಡಿಯೋ ಮೂಲಕ ಉತ್ತರ ಕೊಟ್ಟು, ಮನದಾಳದ ನೋವನ್ನು ಹೊರ ಹಾಕಿದ್ದಾರೆ.

ನಾನೊಬ್ಬ ಆರ್’ಎಸ್’ಎಸ್ ಕಾರ್ಯಕರ್ತ, ನಮ್ಮ ಸಂಘಟನೆ, ಸಿದ್ದಾಂತಗಳ ಪರವಾಗಿ ಮಾತನಾಡುವುದು ನನ್ನ ಕರ್ತವ್ಯ. ಹೊಸ ದಿಗಂತ, ವಿಕ್ರಮ ನಮ್ಮ ಸಂಘದ ಪತ್ರಿಕೆ. ಅದರ ಬಗ್ಗೆ ನಾನು ಮಾತನಾಡಿದಾಗ ಬೇರೆಯವರಿಗೆ ನೋವಾಗುವುದು ಸಾಮಾನ್ಯ. ಅದಕ್ಕೆ ನಾವೇನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ನಾನು 40 ವರ್ಷಗಳ ಕಾಲ ಸಿನಿಮಾದಲ್ಲಿ ಕೆಲಸ ಮಾಡಿದ್ದೇನೆ. ಬಹಳಷ್ಟು ಮಾಧ್ಯಮದವರಿಗೆ ನಾನು ಏನು ಎನ್ನುವುದು ಗೊತ್ತಿದೆ. ಹೀಗಿದ್ದರೂ, ಜಗ್ಗೇಶ್ ದರ್ಶನ್ ಫ್ಯಾನ್ಸ್‌’ಗೆ ಕಾಗೆ ಹಾರಿಸಿದ, ಬಟಾ ಬಯಲಾದ ಎಂದು ಕೆಲವು ಮಾಧ್ಯಮದಲ್ಲಿ ಹೇಳಿದ್ದಾರೆ. ನಾನೇನು ಕಳ್ಳತನ, ರಾಬರಿ ಮಾಡಿದ್ದೀನಾ? ಬಚ್ಚಿಟ್ಟುಕೊಂಡಿದ್ದೇನಾ? ನಿನ್ನೆ ಬಂದ ಹುಡುಗರು ನಿನ್ನೆ ರಾತ್ರಿಯೂ ಸಹ ನನ್ನೊಂದಿಗೆ ಮಾತನಾಡಿದ್ದಾರೆ. ನಾನೆಲ್ಲೂ ಓಡಿ ಹೋಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯಾವುದೋ ಒಂದು ಸಣ್ಣ ವಿಷಯ ಇಟ್ಟುಕೊಂಡು ಜಗ್ಗೇಶ್’ಗೆ ಅವಮಾನ ಮಾಡಿದ್ದೇವೆ ಎಂದುಕೊಂಡರೆ ಅದರಿಂದ ನನಗೇನೂ ನಷ್ಟವಿಲ್ಲ ಹಾಗೂ ನಾನೇನೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವವನೂ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

ನಾನೇನು ಆಸ್ತಿ ಹೊಡೆಯುವ, ನೋಯಿಸುವ, ಕೊಲೆ ಮಾಡುವ, ಕನ್ನಡದ ನೆಲಕ್ಕೆ ಅವಮಾನ ಮಾಡುವ ಕುರಿತಾಗಿ ಅಲ್ಲಿ ಮಾತನಾಡಿಲ್ಲ. ಬದಲಾಗಿ, ನನ್ನ ಆರ್‌ಎಸ್‌ಎಸ್ ಹಾಗೂ ಹೊಸದಿಗಂತ ಪತ್ರಿಕೆಗೆ ಪ್ರಚಾರ ನೀಡು ಎಂದು ಖಾಸಗಿಯಾಗಿ ಮಾತನಾಡಿದ್ದೇನೆ. ಆದರೆ ಈ ವಿಚಾರವನ್ನು ಸಾರ್ವಜನಿಕ ಚರ್ಚೆಯ ವಿವಾದ ಮಾಡಿದ್ದು ಹೀನ ಕೃತ್ಯ ಎಂದು ಕಿಡಿ ಕಾರಿದ್ದಾರೆ.

ಇದೇ ವೇಳೆ ಕೆಲವು ಮಾಧ್ಯಮಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಅವರು, ನಾನು ಚಿತ್ರರಂಗಕ್ಕೆ ಬಂದಾಗ ಇವರೆಲ್ಲಾ ಹುಟ್ಟೇ ಇರಲಿಲ್ಲ. 80ರ ದಶಕದಲ್ಲಿ ಚಿತ್ರರಂಗಕ್ಕೆ ಬಂದವನು. ಹಿರಿಯ ನಟರ ನೋವು ನಲಿವುಗಳೊಂದಿಗೆ ನಾನು ಹಂಚಿಕೊಂಡಿದ್ದೇನೆ. ಕನ್ನಡಿಗರಿಂದ ನಾನು ಇಂದು ಈ ಮಟ್ಟಕ್ಕೆ ಬೆಳೆದಿದ್ದೇನೆಯೇ ಹೊರತು ಯಾರೊಬ್ಬರಿಂದ ಅಲ್ಲ. ಕನ್ನಡಕ್ಕಾಗಿಯೇ ನನ್ನ ಇಡಿಯ ಜೀವನ ಎಂದಿದ್ದಾರೆ.

ನಾನು ಕಾಗೆ ಹಾರಿಸುವಂತಿದ್ದರೆ 20 ಬಾರಿ ಶಾಸಕನಾಗುತ್ತಿದ್ದೆ, 20 ಬಾರಿ ಸಚಿವನಾಗುತ್ತಿದ್ದೆ. ನನ್ನ ಸಾರ್ವಜನಿಕ ಜೀವನದಲ್ಲಿ ಎಂದಿಗೂ ಹಲ್ಕಾ ಕೆಲಸ ಮಾಡಿಲ್ಲ. ಮಾಧ್ಯಮಗಳು ತಂದೆ-ತಾಯಿಗಳಂತೆ ಇರಬೇಕು, ಅವರಂತೆಯೇ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು ಎಂದರು.

ಇಂದು ಅನ್ಯ ಭಾಷಿಗರು ಕನ್ನಡ ಹಾಗೂ ಕನ್ನಡ ಚಿತ್ರರಂಗವನ್ನು ತುಳಿಯುತ್ತಿದ್ದಾರೆ. ಡಾ.ರಾಜ್’ಕುಮಾರ್, ಡಾ.ವಿಷ್ಣುವರ್ಧನ್ ಹಾಗೂ ಅಂಬರೀಷ್ ಸತ್ತ ತತಕ್ಷಣ ಕನ್ನಡ ಚಿತ್ರರಂಗವೂ ಸಹ ಸಾಯುತ್ತಿದೆ. ಈಗ ಉಳಿದಿರುವವರ ನಾನು, ಶಿವರಾಜ್ ಕುಮಾರ್, ರವಿಚಂದ್ರನ್ ಹಾಗೂ ರಮೇಶ್ ಮಾತ್ರ. ನಾವುಗಳು ಸತ್ತ ಮೇಲೆ ನಮ್ಮ ತಿಥಿ ಮಾಡಿ, ಆನಂದ ಪಡಿ, ಸಂತೋಷ ಪಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಬೇಕಿತ್ತ ನಿಮಗೆ..
https://t.co/aED9S8Abn0

— ನವರಸನಾಯಕ ಜಗ್ಗೇಶ್ (@Jaggesh2) February 23, 2021

ನಾನು ಎಂದಿಗೂ ನನ್ನ ಪಾಡಿಗೆ ನಾನು ಇರುವವನು. ಮಾತನಾಡುವವರು ನನ್ನ ಜಾತಿ ಹಿಡಿದೂ ಸಹ ಮಾತನಾಡಿದರು. ಆದರೆ, ನಾನು ಇದನ್ನು ದೊಡ್ಡದು ಮಾಡಿಲ್ಲ. ಇವರುಗಳೆಲ್ಲ ಅಲ್ಲ ನನಗೆ ಬುದ್ದಿ ಕಲಿಸಬೇಕಾದವರು. ನನಗೆ ಬುದ್ದಿ ಕಲಿಸಬೇಕಾದವರ ರಾಘವೇಂದ್ರ ಸ್ವಾಮಿಗಳು, ಪ್ರೀತಿಯ ಕನ್ನಡಿಗರು ಎಂದಿದ್ದಾರೆ.

ಚಿತ್ರರಂಗದಲ್ಲಿ ನಾನೊಬ್ಬನೇ ಬೆಳೆಯಬೇಕು ಎಂಬ ಪ್ರವೃತ್ತಿ ಇತ್ತೀಚೆಗೆ ಬೆಳೆದಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ದಯಮಾಡಿ ಹಿರಿಯರಿಗೆ ಅವಮಾನ ಮಾಡುವ ವಿಚಾರ ಮಾಡಬೇಡಿ. ನನ್ನ 40 ವರ್ಷಗಳ ಸಾಧನೆಯನ್ನು ಜರಿಯುತ್ತಿದ್ದೀರಿ. ನಿಮ್ಮ ತಂದೆ ತಾಯಿಗೂ ನನ್ನಷ್ಟೇ ವಯಸ್ಸಾಗಿದೆ. ಅವರಿಗೂ ಹೀಗೇ ಅವಮಾನ ಮಾಡುತ್ತೀರಾ ಎಂದು ಪ್ರಶ್ನಿಸಿದ್ದಾರೆ.

ನನ್ನ ಜೀವಮಾನದಲ್ಲಿ ಎಂದಿಗೂ ನಾನು ಕೆಟ್ಟ ಕೆಲಸ ಮಾಡಿಲ್ಲ. ರಾಯರು ಮೆಚ್ಚುವಂತೆ ಬದುಕಿದ್ದೇನೆ. ಆದರೂ ಇಂತಹ ಬೆಳವಣಿಗೆಗಳಿಂದ ನಾನು ಬಹಳಷ್ಟು ನೊಂದಿದ್ದೇನೆ. ದಯವಿಟ್ಟು ನನ್ನ ಪಾಡಿಗೆ ನನ್ನನ್ನು ಬಿಟ್ಟುಬಿಡಿ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Actor JaggeshBENGALURUKannada MoviesKannada News WebsiteLatest News Kannadasandalwoodಕನ್ನಡ ಚಿತ್ರರಂಗನಟ ಜಗ್ಗೇಶ್ನವರಸನಾಯಕ ಜಗ್ಗೇಶ್ಬೆಂಗಳೂರುಸ್ಯಾಂಡಲ್’ವುಡ್
Share210Tweet123Send
Previous Post

ಹಿರೆನಾಗವಲ್ಲಿಯಲ್ಲಿ ಜಿಲೆಟಿನ್ ಸ್ಪೋಟ: ದಿಗ್ಬ್ರಾಂತಿ ವ್ಯಕ್ತಪಡಿಸಿದ ಸಚಿವ ಮುರುಗೇಶ್ ನಿರಾಣಿ

Next Post

ಸರ್ಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?: ಡಿ.ಕೆ. ಶಿವಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಸರ್ಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?: ಡಿ.ಕೆ. ಶಿವಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL