No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಜ.26ರಿಂದ ರಾಜ್ಯದಾದ್ಯಂತ ಜನರ ಮನೆಬಾಗಿಲಿಗೆ ಪಡಿತರ ರೇಷನ್ ವಿತರಣೆ: ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 19, 2021
in Small Bytes, ದಾವಣಗೆರೆ
0
ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿಗೆ ಅಳವಡಿಸುವುದು ಅಗತ್ಯ: ಸಿಎಂ ಬೊಮ್ಮಾಯಿ

file image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  |  

ಜನರ ಬಳಿಗೆ ಸರ್ಕಾರವೇ ತಲುಪುವುದೇ ಜನಪರ ಸರ್ಕಾರ. ಈ ನಿಟ್ಟಿನಲ್ಲಿ ಜನರ ಮನೆ ಬಾಗಿಲಿಗೆ ಪಡಿತರ ಅಕ್ಕಿ, ಗೋಧಿ ಸೇರಿದಂತೆ ಆಹಾರಧಾನ್ಯವನ್ನು ತಲುಪಿಸುವ ಜನಸೇವಕ’ ಯೋಜನೆ ಜನವರಿ 26 ರಿಂದ ರಾಜ್ಯದಾದ್ಯಂತ ಜಾರಿಗೆ ಬರಲಿದೆ. ಮೊದಲ ಹಂತದಲ್ಲಿ ಬೆಂಗಳೂರು ಭಾಗದ 28 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ನ.1 ರಂದು ಜಾರಿಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಜಿಲ್ಲೆಯ ನ್ಯಾಮತಿ ತಾಲ್ಲೂಕು ಸುರಹೊನ್ನೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ, ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸುವ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.


ಸರ್ಕಾರ ವಿಧಾನಸೌಧದಲ್ಲಿದೆ ಎಂದು ಅಂದುಕೊಳ್ಳುವ ಕಾಲವಿತ್ತು. ಆದರೆ, ಜನರಿಗೋಸ್ಕರ, ಜನರ ಬಳಿಗೇ ಸರ್ಕಾರ ತಲುಪಿದಾಗಲೇ ಅದು ಜನಪರ ಸರ್ಕಾರ ಎನಿಸಿಕೊಳ್ಳಲು ಸಾಧ್ಯ. ಜನರಿರುವ ಕಡೆ ಅಭಿವೃದ್ಧಿ ತಲುಪಿದಾಗಲೇ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯ, ಆಗ ಮಾತ್ರ ವಿವಿಧ ಸೌಲಭ್ಯಗಳಿಗಾಗಿ ಜನರು ಸರ್ಕಾರಿ ಕಚೇರಿಗೆ ಅಲೆದಾಡುವುದು ತಪ್ಪುತ್ತದೆ. ಈ ದಿಸೆಯಲ್ಲಿ ಪಡಿತರ ಅಕ್ಕಿ ಸೇರಿದಂತೆ ರೇಷನ್ ಅನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಜನಸೇವಕ’ ಯೋಜನೆಯನ್ನು ಜ. 26 ರಿಂದ ರಾಜ್ಯದಾದ್ಯಂತ ಜಾರಿಗೊಳಿಸಲು ಸರ್ಕಾರ ಉದ್ದೇಶಿಸಿದೆ. ಮೊದಲ ಹಂತದಲ್ಲಿ ಬೆಂಗಳೂರು ಭಾಗದ 28 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ನ.1 ರಿಂದ ಚಾಲನೆ ನೀಡಲಾಗುವುದು. ಎಲ್ಲ ಬಗೆಯ ಪ್ರಮಾಣಪತ್ರಗಳು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಿಗುವಂತಾಗಬೇಕು, ಇದಕ್ಕಾಗಿ ಜನರು ತಾಲೂಕು, ಜಿಲ್ಲಾ ಮಟ್ಟದ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು, ಎಲ್ಲ ಸೇವೆಗಳು ಪ್ರತಿ ಗ್ರಾಮ ಮಟ್ಟದಲ್ಲಿ ಜನರ ಮನೆಬಾಗಿಲಿಗೆ ತಲುಪಿಸುವ ಕಾರ್ಯ ಆರಂಭಿಸಲಾಗುವುದು ಎಂದು ಹೇಳಿದರು.

ಜನರ ಬದುಕು ಹಸನಾಗಲು ಸರ್ಕಾರ ಜನರ ಮನೆಬಾಗಿಲಿಗೆ ತಲುಪಬೇಕು, ಇದುವರೆಗೂ ಮಧ್ಯವರ್ತಿಗಳು ಜನರ ರಕ್ತಹೀರಿ ಸೌಲಭ್ಯ ಕೊಡಿಸಲು ಮುಂದಾಗುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಇನ್ನು ಮುಂದೆ ಸ್ವಚ್ಛ, ದಕ್ಷ, ಜನಪರ ಆಡಳಿತ ಕೊಡುತ್ತೇವೆ. ಗಾಂಧೀಜಿಯವರ ಗ್ರಾಮರಾಜ್ಯದ ಪರಿಕಲ್ಪನೆಯಿಂದ ಹಿಡಿದು, ಅಟಲ್ ಬಿಹಾರಿ ವಾಜಪೇಯಿ ಅವರ ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಸಾಕಾರಗೊಳಿಸಲು ಯೋಜನೆ ರೂಪಿಸುತ್ತೇವೆ. ಮುಂದಿನ ಒಂದೂವರೆ ವರ್ಷದೊಳಗೆ 04 ಲಕ್ಷ ಮನೆಗಳನ್ನು ನಿರ್ಮಿಸುವ ಸಂಕಲ್ಪ ಮಾಡಿದ್ದೇವೆ, ಇದು ಕೇವಲ ಘೋಷಣೆಯಲ್ಲ, ಇದಕ್ಕೆ ಬೇಕಿರುವ ಅನುದಾನವನ್ನೂ ಕೂಡ ಮೀಸಲಿಡುತ್ತೇವೆ ಎಂದರು.


ಸ್ಲಂ ಪ್ರದೇಶಗಳಲ್ಲಿ ಈ ವರ್ಷ 1 ಲಕ್ಷ ಮನೆ ನಿರ್ಮಿಸಲು ಮಂಜೂರಾತಿ ನೀಡಿ, ಹಣ ಬಿಡುಗಡೆ ಕೂಡ ಮಾಡುತ್ತೇವೆ. ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗಳಿಗೆ ಶುದ್ಧ ನೀರು ತಲುಪಿಸಲು 2 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. 750 ಗ್ರಾಮಗಳನ್ನು ಗುಡಿಸಲು ಮುಕ್ತವಾಗಿಸಲು ಕ್ರಮ ವಹಿಸಿದ್ದು, 75 ಸಾವಿರ ಮಕ್ಕಳಿಗೆ ಕೌಶಲ್ಯ ತರಬೇತಿ ನೀಡಿ, ಉದ್ಯೋಗ ದೊರಕುವಂತೆ ಮಾಡಲು ಸಂಕಲ್ಪ ಮಾಡಿದ್ದೇವೆ. ರಾಜ್ಯದ 180 ಐಟಿಐ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ವಹಿಸಿದ್ದು, ಉಳಿದ ಎಲ್ಲ ಐಟಿಐ ಹಾಗೂ ಪಾಲಿಟೆಕ್ನಿಕ್ಗಳನ್ನೂ ಕೂಡ ಮೇಲ್ದರ್ಜೆಗೇರಿಸಲಾಗುವುದು ಎಂದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸ್ಪರ್ಧೆ ನಡೆಸಲು ಅನುವಾಗುವಂತೆ, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಈ ವರ್ಷ ಅನುಷ್ಠಾನಗೊಳಿಸಲಾಗಿದೆ. ರಾಜ್ಯದ ಪ್ರತಿ ರೈತ, ಕೂಲಿಕಾರರ ಬದುಕು ಹಸನಾದಾಗ ಮಾತ್ರ ರಾಜ್ಯ ಅಭಿವೃದ್ಧಿಯಾಗುತ್ತದೆ, ಅಲ್ಲದೆ ಆದಾಯವೂ ಹರಿದು ಬರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಮನವಿಯಂತೆ ನ್ಯಾಮತಿ ಪಟ್ಟಣದಲ್ಲಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳು ಒಂದೇ ಸೂರಿನಡಿ ಕೆಲಸ ಮಾಡುವಂತಾಗಲು ಸಾಮಥ್ರ್ಯ ಸೌಧ (ಮಿನಿವಿಧಾನಸೌಧ) ಮಂಜೂರು ಮಾಡಲಾಗುವುದು ಎಂದು ಇದೇ ವೇಳೆ ಪ್ರಕಟಿಸಿದರು.


ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಸಂಸದ ಡಾ. ಜಿ.ಎಂ. ಸಿದ್ದೇಶ್ವರ್, ಮಾತನಾಡಿದರು.

ಶಾಸಕರುಗಳಾದ ಮಾಡಾಳ್ ವಿರೂಪಾಕ್ಷಪ್ಪ, ಪ್ರೊ. ಲಿಂಗಣ್ಣ, ಎಸ್.ವಿ. ರಾಮಚಂದ್ರ, ದಾವಣಗೆರೆ ಮಹಾನಗರಪಾಲಿಕೆ ಮಹಾಪೌರ ಎಸ್.ಟಿ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಪಂ ಸಿಇಒ ಡಾ. ವಿಜಯ ಮಹಾಂತೇಶ್, ಎಸ್’ಪಿ ಸಿ.ಬಿ. ರಿಷ್ಯಂತ್, ಸುರಹೊನ್ನೆ ಗ್ರಾ.ಪಂ. ಅಧ್ಯಕ್ಷ ಹಾಲೇಶಪ್ಪ, ಉಪಾಧ್ಯಕ್ಷೆ ರುಕ್ಮೀಣಿಯಮ್ಮ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಮುಖ್ಯಮಂತ್ರಿಗಳು 26 ಘನತ್ಯಾಜ್ಯ ವಿಲೇವಾರಿ ವಾಹನಗಳ ಉದ್ಘಾಟನೆ ನೆರವೇರಿಸಿದರು. ಅಲ್ಲದೆ ಸಮಾರಂಭದ ಆವರಣದಲ್ಲಿ ವಿವಿಧ ಇಲಾಖೆಗಳಿಂದ ನಿರ್ಮಿಸಲಾಗಿದ್ದ ವಸ್ತುಪ್ರದರ್ಶನ ಮಳಿಗೆಗಳನ್ನು ಕೂಡ ಉದ್ಘಾಟಿಸಿದರು. ವಿವಿಧ ಇಲಾಖೆಗಳ ಮೂಲಕ ಹಲವು ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತುಗಳನ್ನು ಇದೇ ಸಂದರ್ಭದಲ್ಲಿ ವಿತರಣೆ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraj BommaiDavanagereKannada News WebsiteLatest News KannadaNyamatiದಾವಣಗೆರೆನ್ಯಾಮತಿಪಡಿತರ ರೇಷನ್ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share198Tweet123Send
Previous Post

ಶಿವಮೊಗ್ಗ: ಆರ್’ಎಸ್’ಎಸ್ ಗಣವೇಶ ಧರಿಸಿ ಪಥಸಂಚಲನದಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

Next Post

ಮಲೆನಾಡಿನ ಘನತೆ ಮುಗಿಲೆತ್ತರಕ್ಕೆ ಹಾರಿಸಿದ ‘ಅಮೂಲ್ಯಶೋಧ’ದ ಸಾಧಕ ಖಂಡೋಬರಾವ್ ನಮ್ಮ ಹೆಮ್ಮೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಲೆನಾಡಿನ ಘನತೆ ಮುಗಿಲೆತ್ತರಕ್ಕೆ ಹಾರಿಸಿದ ‘ಅಮೂಲ್ಯಶೋಧ’ದ ಸಾಧಕ ಖಂಡೋಬರಾವ್ ನಮ್ಮ ಹೆಮ್ಮೆ

ಮಲೆನಾಡಿನ ಘನತೆ ಮುಗಿಲೆತ್ತರಕ್ಕೆ ಹಾರಿಸಿದ 'ಅಮೂಲ್ಯಶೋಧ'ದ ಸಾಧಕ ಖಂಡೋಬರಾವ್ ನಮ್ಮ ಹೆಮ್ಮೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

May 7, 2026
ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

May 7, 2026
ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

May 7, 2026
ಪಿಯುಸಿ ಮರು ಮೌಲ್ಯಮಾಪನ | ಚಿತ್ರದುರ್ಗದ ವಾಣಿ ಜಿಲ್ಲೆಗೆ ಟಾಪರ್

ಪಿಯುಸಿ ಮರು ಮೌಲ್ಯಮಾಪನ | ಚಿತ್ರದುರ್ಗದ ವಾಣಿ ಜಿಲ್ಲೆಗೆ ಟಾಪರ್

May 7, 2026
ಶಿವಮೊಗ್ಗ | ರಾಘವೇಂದ್ರ ಶೇಟ್’ಗೆ ಪಿಎಚ್’ಡಿ ಪದವಿ ಪ್ರದಾನ

ಶಿವಮೊಗ್ಗ | ರಾಘವೇಂದ್ರ ಶೇಟ್’ಗೆ ಪಿಎಚ್’ಡಿ ಪದವಿ ಪ್ರದಾನ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL