Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ರಂಗ ಪ್ರವೇಶಕ್ಕೆ ಅಣಿಯಾದ ದಿಯಾ ಉದಯ್ | ತಂದೆಯ ತ್ಯಾಗದ ದಿವ್ಯ ಬೆಳಕು ಈ ಕಲಾ ಪ್ರತಿಭೆ

ಮಲೆನಾಡಿನ ಪ್ರತಿಭೆಗೆ ಭವ್ಯ ವೇದಿಕೆಯಾದ ರಾಜಧಾನಿ | ಚೌಡಯ್ಯ ಸ್ಮಾರಕ ಭವನದಲ್ಲಿ ಡಿ. 2ರಂದು ರಂಗಾರೋಹಣ | ಗುರು ಸುಪರ್ಣಾ ವೆಂಕಟೇಶರ ಹೆಮ್ಮೆಯ ಶಿಷ್ಯೆ

November 30, 2023
in Special Articles, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಕೌಸಲ್ಯಾ ರಾಮ  |

ಬೆಂಗಳೂರಿನ #Bengaluru ಉದ್ಯಮಿ ಜಿ.ಜಿ. ಉದಯ್ ಮತ್ತು ಧನಲಕ್ಷ್ಮೀ ಉದಯ್ ಅವರ ಸುಪುತ್ರಿ, ಸಾಯಿ ಆರ್ಟ್ಸ್ ಇಂಟರ್ ನ್ಯಾಷನಲ್ ಕಲಾಶಾಲೆಯ ಹಿರಿಯ ನೃತ್ಯ ವಿದುಷಿ ಡಾ. ಸುಪರ್ಣಾ ವೆಂಕಟೇಶ್ ಅವರ ಹೆಮ್ಮೆಯ ಶಿಷ್ಯೆ ದಿಯಾ ಉದಯ್ ಭರತನಾಟ್ಯ #Bharatanatya ರಂಗಪ್ರವೇಶಕ್ಕೆ ಈಗ ಅಣಿಯಾಗಿದ್ದಾರೆ.

ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಬಿಬಿಎ (ಬಿಜಿನೆಸ್ ಅನಾಲಿಟಿಕ್ಸ್) ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿರುವ ದಿಯಾ, ನೃತ್ಯವನ್ನು ಒಂದು ತಪಸ್ಸನ್ನಾಗಿ ಸ್ವೀಕರಿಸಿ, ಆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಗಳನ್ನು ಕ್ರಮಿಸುತ್ತಿರುವುದು, ಸತತ ಸಾಧನೆಯಿಂದ ಮುನ್ನುಗ್ಗುತ್ತ, ಬದುಕಿನ ಸುವರ್ಣ ಪುಟಗಳಿಗೆ ವರ್ಣರಂಜಿತ ಅಧ್ಯಾಯಗಳನ್ನು ಸೇರ್ಪಡೆ ಮಾಡುತ್ತಿರುವುದು ಮಹತ್ವದ ಸಂಗತಿ.
ರಾಜಧಾನಿಯ ಮಲ್ಲೇಶ್ವರದ ವಯ್ಯಲಿಕಾವಲ್‌ನ ಚೌಡಯ್ಯ ಸ್ಮಾರಕ ಭವನ ಈಕೆಗೆ ರಂಗಾರೋಹಣಕ್ಕೆ ವೇದಿಕೆಯಾಗಲಿದೆ. ಡಿ. 2ರ ಸಂಜೆ 5ಕ್ಕೆ ದಿಯಾ ಉದಯ್ ನೃತ್ಯ ಸಮಾರಾಧನೆಗೆ ಮಲ್ಲೇಶ್ವರ ಕ್ಷೇತ್ರದ ಶಾಸಕ ಅಶ್ವತ್ಥ ನಾರಾಯಣ, ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಯೋಗಾಚಾರ್ಯ ಕಲಾ ಸಿಂಚನಂ ಯೋಗಸ್ಥಳ ಏನ್ಷಿಯಂಟ್ ಆರ್ಟ್ಸ ಟ್ರಸ್ಟ್ ಮುಖ್ಯಸ್ಥೆ ಯಾಮಿನಿ ಮುತ್ತಣ್ಣ ಮತ್ತು ನೃತ್ಯಗುರು ಡಾ. ಸುಪರ್ಣಾ ಅವರು ಸಾಕ್ಷಿಯಾಗಲಿದ್ದಾರೆ. ತಂದೆ ಉದಯ್ ಮತ್ತು ತಾಯಿ ಧನಲಕ್ಷ್ಮೀ ಉಪಸ್ಥಿತರಿರಲಿದ್ದಾರೆ.

ಹಿಮ್ಮೇಳದ ಸಾಥ್
ದಿಯಾ ಉದಯ್ ರಂಗಪ್ರವೇಶಕ್ಕೆ #Rangapravesha ಕಲಾ ರಂಗದ ವಿದ್ವನ್ಮಣಿಗಳು ಹಿಮ್ಮೇಳದಲ್ಲಿ ಸಾಥ್ ನೀಡಲಿದ್ದಾರೆ. ಗುರು ಮತ್ತು ಹಿರಿಯ ನೃತ್ಯ ವಿದುಷಿ ಡಾ. ಸುಪರ್ಣಾ ವೆಂಕಟೇಶ್ ನಟುವಾಂಗ, ವಿದ್ವಾನ್ ಬಾಲಸುಬ್ರಹ್ಮಣ್ಯ (ಗಾಯನ), ವಿದ್ವಾನ್ ಜಿ. ಗುರುಮೂರ್ತಿ (ಮೃದಂಗ), ವಿದ್ವಾನ್ ಪ್ರಾದೇಶ ಆಚಾರ್ (ಪಿಟೀಲು)ಮತ್ತು ಪ್ರಸನ್ನ ಕುಮಾರ (ರಿದಂ ಪ್ಯಾಡ್)ನಲ್ಲಿ ಸಹಕರಿಸಿ ನೃತ್ಯಾರಾಧನೆಗೆ ಮೆರಗು ನೀಡುತ್ತಿರುವುದು ಬಹು ವಿಶೇಷ.

ನರ್ತನ ಪ್ರತಿಭೆ
ಶೃಂಗೇರಿ #Sringeri ಸಮೀಪದ ಕಿಗ್ಗಾ ಮೂಲದ ಉದಯ್ ಮತ್ತು ಧನಲಕ್ಷ್ಮೀ ಅವರ ಪ್ರಥಮ ಪುತ್ರಿ ದಿಯಾ ನರ್ತನಕ್ಕಾಗಿಯೇ ಜನ್ಮ ತಾಳಿದ ಪ್ರತಿಭೆ. ಇದು ಅತಿಯಶಯೋಕ್ತಿ ಮಾತೇನೂ ಅಲ್ಲ. ದಿಯಾಳ ನೃತ್ಯದ #Dance ಓಘವನ್ನು ಗಮನಿಸಿದ ಯಾರಾದರೂ ಇದನ್ನು ಸಮ್ಮತಿಸಲೇ ಬೇಕು. ಆ ಮಟ್ಟಿಗಿನ ಕಲಾವಂತಿಕೆ ಈಕೆಯಲ್ಲಿ ಅಂತರ್ಗತವಾಗಿರುವುದು, ಪವಿತ್ರ ಮತ್ತು ಪ್ರತಿಷ್ಠಿತ ವೇದಿಕೆಗಳಲ್ಲಿ ಅದು ಅನಾವರಣಗೊಳ್ಳಲು ದೈವ ಕೃಪೆ ಈಕೆಗೆ ಒದಗಿಬಂದಿರುವುದು ಪೂರ್ವ ಜನ್ಮದ ಸುಕೃತವೇ ಆಗಿದೆ.
ತನ್ನ ಮೂರನೇ ವಯಸ್ಸಿನಿಂದಲೇ ಸಂಗೀತ #Music ಮತ್ತು ನೃತ್ಯಕ್ಕಾಗಿ ಒಲವು ತೋರಿದ ದಿಯಾಗೆ ಆಕೆಯ ತಂದೆ ಉದಯ್ ಅವರೇ ಪ್ರಥಮ ಪ್ರೇರಣೆ. ತಾಯಿ ಧನಲಕ್ಷ್ಮಿಯೇ ಬಹು ದೊಡ್ಡ ಪ್ರೋತ್ಸಾಹವಾದರು. ಸುಸಂಸ್ಕೃತ ಮತ್ತು ಕಲಾ ಅಭಿರುಚಿಯ ಕುಟುಂಬದಲ್ಲಿ ಜನಿಸುವ ಮಕ್ಕಳಿಗೆ ಹೆತ್ತವರೇ ಬಹು ಪ್ರದಾನ ಪ್ರೋತ್ಸಾಹಕರಾದರೆ ದಿಯಾಳಂಥ ಪ್ರತಿಭೆಗಳು ಕಲಾ ಲೋಕಕ್ಕೆ ಹೆಮ್ಮೆಯ ಕೊಡುಗೆಗಳಾಗುತ್ತವೆ ಎಂಬುದಕ್ಕೆ ಈ ಕುಟುಂಬ ಒಂದು ಮಾದರಿಯೇ ಆಗಿದೆ.

ಮಗಳ ನೃತ್ಯದ ಹೆಜ್ಜೆಗಳನ್ನು ಎಳವೆಯಲ್ಲೇ ಗುರುತಿಸಿದ ಆಕೆಯ ತಂದೆ ಉದಯ್ ಅವರು, ಫ್ಯಾನ್ಸಿ ಡ್ರಸ್ ಹಾಕಿ ವೇದಿಕೆ ಪ್ರವೇಶ ಮಾಡಿಸಿದರು. ಹತ್ತಾರು ಕಡೆ ದಿಯಾಳನ್ನು ಕರೆದೊಯ್ದು, ಜಾನಪದ ಗೀತೆ, ಭಕ್ತಿ ಸಂಗೀತಕ್ಕೆ ನರ್ತನ ಮಾಡುವ ಬಾಲೆಯನ್ನು ಬೆಂಬಲಿಸಿದರು. ತಾವೇ ಸಮಯ ಮಾಡಿಕೊಂಡು ಹಲವು ಸಭೆ, ಸಮಾರಂಭ, ಉತ್ಸವ ಮತ್ತು ಸಮ್ಮೇಳನಗಳಲ್ಲಿ ದಿಯಾಗೆ ಡಾನ್ಸ್ ಮಾಡಲು ಬೆನ್ನೆಲುಬಾಗಿ ನಿಂತರು. ಬಹುಮಾನ ಬಂದಾಗ ಮೊದಲು ತಾವೇ ಸಂಭ್ರಮಿಸಿ, ದಿಯಾಗೆ ಇನ್ನಷ್ಟು ಉತ್ತೇಜನ ನೀಡಿದರು. ಶಾಲಾ ಶಿಕ್ಷಣದೊಂದಿಗೆ ದಿಯಾಗೆ ಶಾಸ್ತ್ರೀಯ ಭರತನಾಟ್ಯ #Bharatanatya ಕಲಿಸಬೇಕು ಎಂಬ ಉತ್ಕಟ ಹಂಬಲ ಅವರಲ್ಲಿ ಮೂಡಿತು.

ನೃತ್ಯ ಗುರು ಡಾ. ಸುಪರ್ಣಾ ವೆಂಕಟೇಶ್ ಅವರ ಮಡಿಲಿಗೆ 3 ವರ್ಷದ ಬಾಲಕಿ ದಿಯಾಳನ್ನು ನರ್ತನ ಅಭ್ಯಾಸಕ್ಕೆ ಸಮರ್ಪಣೆ ಮಾಡಿಬಿಟ್ಟರು. ಸಮರ್ಥ ಗುರುವೆಂದೇ ಖ್ಯಾತರಾಗಿರುವ ಸುಪರ್ಣಾ ಅವರು ಬಾಲ ಪ್ರತಿಭೆಯ ಕಲಾಸಕ್ತಿ ಗುರುತಿಸಿ, ವಿದ್ಯೆಯನ್ನು ಧಾರೆ ಎರೆಯಲು ಸಂಕಲ್ಪ ತೊಟ್ಟರು. ಗುರು-ಶಿಷ್ಯರ ಪವಿತ್ರ ಬಾಂಧವ್ಯ ಹಿಮಾಲಯದ ಎತ್ತರಕ್ಕೆ ಬೆಳೆಯಿತು. ದಿಯಾಳ ಶ್ರದ್ಧೆ, ಆಸಕ್ತಿ, ಉತ್ಸಾಹ ಮತ್ತು ಕಲಿತದ್ದನ್ನು ಸಮರ್ಥವಾಗಿ ಗುರುವಿಗೆ ಒಪ್ಪಿಸುವ ಬದ್ಧತೆಗಳೇ ಆಕೆಯನ್ನು ಒಬ್ಬ ಯುವ ಕಲಾವಿದೆಯನ್ನಾಗಿ ರೂಪಿಸಿದವು.
Kalahamsa Infotech private limitedಹಿಂದಿರುಗಿ ನೋಡಲೇ ಇಲ್ಲ…..
ಜ್ಯೂನಿಯರ್, ಸೀನಿಯರ್ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯೊಂದಿಗೆ ಉತ್ತೀರ್ಣಳಾದ ದಿಯಾಗೆ ಹಲವು ವೇದಿಕೆಗಳು ಮುಕ್ತವಾದವು. ಪ್ರತಿ ಹಂತದಲ್ಲೂ ತನ್ನನ್ನು ಹೆತ್ತವರು ಮತ್ತು ಪಾಠ ಕಲಿಸಿದ ಗುರುಗಳನ್ನು ಧನ್ಯತೆಯಿಂದ ಸ್ಮರಿಸಿಕೊಂಡೇ ನೃತ್ಯ ಆರಂಭಿಸುವ ದಿಯಾ ಕಲಾ ರಂಗದಲ್ಲಿ ಹಿಂದಿರುಗಿ ನೋಡಲೇ ಇಲ್ಲ.

ದಾಸರು ಹೇಳುವಂತೆ ಸಂಪೂರ್ಣವಾಗಿ ‘ಗುರುವಿನ ಗುಲಾಮ’ ರಾಗಿ ನೃತ್ಯದ ಹೆಜ್ಜೆಗಳನ್ನು ಕರಗತ ಮಾಡಿಕೊಂಡ ದಿಯಾಗೆ ಶಾಲೆಯುಲ್ಲಿ ಪ್ರತಿಭಾ ಕಾರಂಜಿ, ಅಂತರ ಶಾಲೆ, ಕಾಲೇಜು ನೃತ್ಯ ಸ್ಪರ್ಧೆ, ವಾರ್ಷಿಕೋತ್ಸವ ಸೇರಿದಂತೆ ಹತ್ತಾರು ವೇದಿಕೆಗಳಲ್ಲಿ ಸೈ ಎನಿಸಿಕೊಂಡು ಚಪ್ಪಾಳೆ, ಪ್ರಶಸ್ತಿ, ಬಹುಮಾನ, ಟ್ರೋಫಿಗಳು ಗರಿ ಮೂಡಿಸಿದವು. ಕರುನಾಡಿನ ವೇದಿಕೆ ಮಾತ್ರವಲ್ಲ, ತಮಿಳುನಾಡು, ಆಂಧ್ರ ಮತ್ತು ಮಹಾರಾಷ್ಟ್ರದ ಪ್ರತಿಷ್ಠಿತ ಸಂಘ- ಸಂಸ್ಥೆಗಳಲ್ಲೂ ನೃತ್ಯ ಪ್ರಸ್ತುತಿ ಮಾಡುವ ಅವಕಾಶ ಒದಗಿಬಂದಿತು. ಯೋಗ ಮತ್ತು ಕಲಾ ಪ್ರಸ್ತುತಿ ಯೋಗ್ಯತೆಗಳು ಒಂದೆಡೆ ಮಿಲನಗೊಳ್ಳುವದು ಬಹು ಅಪರೂಪ. ಅಂಥ ಅನುರೂಪ ಮತ್ತು ಅವಕಾಶ ದಿಯಾ ಪಾಲಿಗೆ ದೊರಕಿದ್ದು ಮಹತ್ವದ ಸಂಗತಿಯೇ ಸರಿ.

ಸಾಲು ಸಾಲು ಪ್ರಶಸ್ತಿ- ಪುರಸ್ಕಾರ
ಭರತನಾಟ್ಯ ಎಂಬುದು ಬಹು ಆಕರ್ಷಕ ಪ್ರದರ್ಶನ ಕಲೆ. ಅದನ್ನು ಸಿದ್ಧಿ ಮಾಡಿಕೊಳ್ಳಲು ಸತತ ಪರಿಶ್ರಮ ಮತ್ತು ಸಮಯದ ತ್ಯಾಗವೂ ಬೇಕು. ಅದಕ್ಕೆ ಬದ್ಧವಾಗಿ ದೇಹ ಮತ್ತು ಮನಸ್ಸುಗಳನ್ನು ನರ್ತನಕ್ಕೆ ಅಣಿಗೊಳಿಸಿಕೊಂಡ ದಿಯಾಗೆ ಗುರುವಿನ ಕರುಣಾ, ಕೃಪಾ ಕಟಾಕ್ಷವೂ ವರವಾಗಿ ಪ್ರಾಪ್ತವಾಯಿತು. ಅದರ ಫಲವಾಗಿ ನೃತ್ಯಾರಾಧನೆಗೆ ಹಲವು ಸಂಘ- ಸಂಸ್ಥೆಗಳು ಗೌರವ, ಮಾನ್ಯತೆ, ಬಿರುದು ಮತ್ತು ಸನ್ಮಾನಗಳನ್ನು ವಿಶೇಷ ಸಂದರ್ಭದಲ್ಲಿ ಪ್ರದಾನ ಮಾಡಿದವು ಎಂಬುದಿಲ್ಲಿ ಉಲ್ಲೇಖನೀಯ.
2012ರಲ್ಲಿ ಬಿಬಿಎಂಪಿ #BBMP ಕೊಡಮಾಡುವ ಕೆಂಪೇಗೌಡ ಪ್ರಶಸ್ತಿ, 2014ರಲ್ಲಿ ಮುಗ್ಧ ಪ್ರತಿಭೆ ಪ್ರಶಸ್ತಿ, ಕಸ್ತೂರಿ ಟಿವಿಯ ವಂಡರ್ ಕಿಡ್ ಪ್ರಶಸ್ತಿ, 2018ರಲ್ಲಿ ನಾಟ್ಯರತ್ನ, ಕೆಂಪೇಗೌಡ ರತ್ನ ಬಿರುದು, ಮಂತ್ರಾಲಯದಲ್ಲಿ #Mantralaya ವಿಶ್ವ ಕನ್ನಡ ಕಣ್ಮಣಿ ಗೌರವಾದರ ಸೇರಿದಂತೆ ಸಾಲು -ಸಾಲು ಪ್ರಶಸ್ತಿ- ಪುರಸ್ಕಾರಗಳು ಯುವ ಪ್ರತಿಭೆ ದಿಯಾಗೆ ಹಿರಿಮೆ- ಗರಿಮೆ ಮೂಡಿಸಿದೆ.

ಕಥಕ್‌ನಲ್ಲೂ ವಿಶೇಷ ಆಸಕ್ತಿ
ಭರತನಾಟ್ಯದೊಂದಿಗೆ ಕಥಕ್ #Kathak ನೃತ್ಯವನ್ನೂ ದಿಯಾ ಕಲಿಯುತ್ತಿರುವುದು ಗಮನಾರ್ಹ ಸಂಗತಿ. ಮೊದಲಿಗೆ ಗುರು ಮೈಸೂರು #Mysore ನಾಗರಾಜರಲ್ಲಿ ಕಥಕ್ ಪಾಠ ಹೇಳಿಸಿಕೊಂಡ ಈಕೆ ಈಗ ಶ್ವೇತಾ ವೆಂಕಟೇಶ್ ಬಳಿ ಕಥಕ್ ಅಭ್ಯಾಸ ಮುಂದುವರಿಸಿದ್ದಾರೆ. ಕಲೆಯ ಒಂದು ಲಹರಿಯನ್ನು ಸಮರ್ಥವಾಗಿ ಅರ್ಥ ಮಾಡಿಕೊಂಡು ಅದಕ್ಕೆ ಒಗ್ಗಿಕೊಂಡರೆ, ಬದುಕನ್ನು ಸಮರ್ಪಿಸಿಕೊಂಡರೆ ಪೂರಕ ಕಲಾ ಪ್ರಕಾರಗಳೂ ಸಿದ್ಧಿಸಿಕೊಳ್ಳುವುದಕ್ಕೆ ಸಹಕಾರಿಯಾಗುತ್ತದೆ ಎಂಬುದಕ್ಕೆ ಯುವ ಚೇತನ ದಿಯಾ ಒಂದು ದಿಟ್ಟ ಉದಾಹರಣೆಯಾಗಿ ಕಲಾ ಲೋಕದಲ್ಲಿ ಪ್ರತಿಭಾಶಾಲಿಯಾಗಿ ಮಿಂಚುತ್ತಿದ್ದಾಳೆ.
ಉದಯರ ಉತ್ಸಾಹವೇ ದಿವ್ಯ ಬೆಳಕು
ಮಕ್ಕಳು ಪ್ರತಿಭಾಶಾಲಿಗಳಾಗಬೇಕು ಎಂದರೆ ಪಾಲಕರು ನೂರಕ್ಕೆ ನೂರು ಉತ್ಸಾಹಶೀಲರಾಗಿರಬೇಕು. ಇದಕ್ಕೆ ಉದಯ್ ಅನ್ವರ್ಥ.

ಶೃಂಗೇರಿ ಸಮೀಪದ ಕಿಗ್ಗಾದಿಂದ ಆರಂಭವಾದ ಅವರ ಕ್ರಿಯಾಶೀಲತೆ ರಾಜಧಾನಿಯಲ್ಲೂ ಪ್ರಕಾಶಮಾನವಾಗಿದೆ. ವಿದ್ಯಾರ್ಥಿ ದಿಸೆಯಿಂದಲೇ ಭಾಷಣ, ಗಾಯನ, ಜಾನಪದ ನೃತ್ಯದ ಪ್ರತಿಭೆಯಾಗಿದ್ದ ಉದಯ್, ಯುವಜನ ಮೇಳ, ಶಾಲಾ- ಕಾಲೇಜು ವಾರ್ಷಿಕೋತ್ಸವ ಇತ್ಯಾದಿಗಳಲ್ಲಿ ಪಾರಮ್ಯ ಮೆರೆದವರು.

ಉದಯ್ ಕಿಗ್ಗ

ಶೃಂಗೇರಿ ಬಿಸಿಎಂ ಕಾಲೇಜಿನಲ್ಲಿ ಹೆಮ್ಮೆಯ ವಿದ್ಯಾರ್ಥಿಯಾಗಿ ಗುರುತಿಸಿಕೊಂಡವರು. ಮಲೆನಾಡಿನ ಹತ್ತಾರು ಸ್ಪರ್ಧೆಗಳಲ್ಲಿ ಬಹುಮಾನ ಗಿಟ್ಟಿಸಿಕೊಂಡವರು. ಬೆಂಗಳೂರಿಗೆ ಬಂದು ನೆಲಸಿದ ನಂತರವೂ ಅವರ ಉತ್ಸಾಹ ಕುಗ್ಗಲಿಲ್ಲ. ವಿವಿಧ ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲ ಮಿತ್ರರ ತಂಡವನ್ನೇ ಅವರು ಹೊಂದಿದ್ದಾರೆ. ಅವರ ಈ ಉತ್ಸಾಹ- ಹುಮ್ಮಸ್ಸು ಮತ್ತು ಚೇತೋಹಾರಿತನವೇ ಮಗಳು ದಿಯಾಗೆ ಮಾದರಿ.

ಮಗಳ ಪ್ರತಿಯೊಂದು ಸಾಧನಾ ಹೆಜ್ಜೆಯಲ್ಲೂ ಅಪ್ಪನಾದ ಉದಯ ಅವರು ಭರವಸೆಯ ಬೆಳಕಾಗಿದ್ದಾರೆ. ಮಗಳು ಬೆಳಗಲಿ ಎಂದು ಬೆವರು ಹರಿಸಿದ್ದಾರೆ. ಬದುಕಿನ ಸ್ವಂತ-ಸುಖ ಘಳಿಗೆಗಳನ್ನು ತ್ಯಾಗ ಮಾಡಿದ್ದಾರೆ. ಕಲಾ ಗುರು ಪರಂಪರೆಗೆ ವಿಧೇಯರಾಗಿದ್ದಾರೆ. ಕುಟುಂಬದಲ್ಲಿ ಪತ್ನಿಯ ಸಮಗ್ರ ಸಹಕಾರ ಪಡೆದು ಇಬ್ಬರು ಪುತ್ರಿಯರನ್ನು ಕಲಾ ಲೋಕದ ಸಾಧಕಿಯರನ್ನಾಗಿ ಮಾಡುವಲ್ಲಿ, ವಿದ್ವಜ್ಜನರ ಮೆಚ್ಚುಗೆಗೆ ಪಾತ್ರರನ್ನಾಗಿಸುವಲ್ಲಿ ‘ಪಥಿ ಪಥಿ ಗುಣಸಾಂದ್ರ’ ರಂತೆ ಇದ್ದಾರೆ. ಇಂಥ ತಂದೆಯನ್ನು ಪಡೆಯುವ ಭಾಗ್ಯ ದಿಯಾಗೆ ದೊರೆತಿರುವುದೂ ಒಂದು ಯೋಗವೇ ಆಗಿದೆ ಎನ್ನಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BBMPBENGALURUBharatanatyamKannada News WebsiteKathakKiggaLatest News KannadamysoreSringeriಕಥಕ್ಕಿಗ್ಗಾಕೆಂಪೇಗೌಡ ಪ್ರಶಸ್ತಿದಿಯಾ ಉದಯ್ನರ್ತನ ಪ್ರತಿಭೆಬಿಬಿಎಂಪಿಬೆಂಗಳೂರುಭರತನಾಟ್ಯಮೈಸೂರುಶೃಂಗೇರಿ
Previous Post

ವೈಟ್‌ಫೀಲ್ಡ್‌ನಲ್ಲಿ ಅಮೆರಿಕದ ಕಾನ್ಸುಲೇಟ್ ಜನರಲ್ ಕಚೇರಿ ಸ್ಥಾಪಿಸಲು ಸಚಿವ ಎಂ.ಬಿ. ಪಾಟೀಲ ಮನವಿ

Next Post

ಘಾತಕಕಾರಿ ತರಂಗಗಳಿಂದ ರಕ್ತನಾಳದಲ್ಲಿ ರಕ್ತ ಪರಿಚಲನೆ ಕಡಿಮೆ: ವಿಜ್ಞಾನಿ ಡಾ. ಜಗದೀಶ್ ಗೋಪಾಲನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಘಾತಕಕಾರಿ ತರಂಗಗಳಿಂದ ರಕ್ತನಾಳದಲ್ಲಿ ರಕ್ತ ಪರಿಚಲನೆ ಕಡಿಮೆ: ವಿಜ್ಞಾನಿ ಡಾ. ಜಗದೀಶ್ ಗೋಪಾಲನ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!