No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನಿಮ್ಮ ಜೀವನದಲ್ಲೊಮ್ಮೆ ತಪ್ಪದೇ ತೊರವೆ ಲಕ್ಷ್ಮೀ ನರಸಿಂಹ ಸ್ವಾಮಿಯ ದರ್ಶನ ಮಾಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 4, 2019
in Special Articles
0
ನಿಮ್ಮ ಜೀವನದಲ್ಲೊಮ್ಮೆ ತಪ್ಪದೇ ತೊರವೆ ಲಕ್ಷ್ಮೀ ನರಸಿಂಹ ಸ್ವಾಮಿಯ ದರ್ಶನ ಮಾಡಿ
Share on FacebookShare on TwitterShare on WhatsApp

ಹೌದು… ಪೌರಾಣಿಕ ಹಿನ್ನೆಲೆಯುಳ್ಳ ದೇವಾಲಯಗಳು ನಮ್ಮ ದೇಶದಲ್ಲಿ, ರಾಜ್ಯದಲ್ಲಿ ಹಲವಾರಿದ್ದು, ಇವುಗಳ ಐತಿಹ್ಯ, ವಿಶೇಷತೆ ಹಿಂದೂ ಸಂಸ್ಕೃತಿ, ಧಾರ್ಮಿಕ ಆಚರಣೆ ಹಾಗೂ ಮಹತ್ವವನ್ನು ಸಾರುತ್ತದೆ. ಅದರಂತೆ ವಿಜಯಪುರ ಜಿಲ್ಲೆಯ ತೊರವೆ ಶ್ರೀ ಲಕ್ಷ್ಮೀ ನರಸಿಂಹ ದೇವಾಲಯವೂ ಸಹ ಒಂದು.
ತೋರವೆಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ ವಿಜಯಪುರ ಜಿಲ್ಲೆಯ ಪ್ರಮುಖ ಧಾರ್ಮಿಕ ಸ್ಥಳದಲ್ಲಿ ಒಂದು. ಇದು ಐತಿಹಾಸಿಕ ದೇವಾಲಯವಾಗಿದ್ದು, ಪೌರಾಣಿಕ ಹಿನ್ನೆಲೆಯು ಇದೆ.

ದುರ್ವಾಸ ಮುನಿಗಳು ಪೂಜಿಸುತ್ತಿದ್ದರೆಂದು ಐತಿಹ್ಯವಿದೆ. ದುರ್ವಾಸರು ಕಾರಣ ನರಸಿಂಹ ಸ್ವಾಮಿಯನ್ನು ದುರ್ವಾಸಕರಾರ್ಜಿತ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ಎನ್ನಲಾಗುತ್ತದೆ. ನರಸಿಂಹ ಸ್ವಾಮಿ ಪಕ್ಕದಲ್ಲಿ ರುದ್ರ ದೇವರು ಇರುವುದರಿಂದ ರುದ್ರಾಂಗತ ಶ್ರೀಲಕ್ಷ್ಮೀನರಸಿಂಹ ಎಂದೂ ಸಹ ಕರೆಯುತ್ತಾರೆ. ಪ್ರತಿದಿನವೂ ಇಲ್ಲಿ ಪಂಚಾಮೃತ ಅಭಿಷೇಕ ಮತ್ತು ನವರಾತ್ರಿಗಳಲ್ಲಿ ವಿಶೇಷ ಉತ್ಸವ ಕಾರ್ಯಕ್ರಮಗಳು ನಡೆಯುತ್ತವೆ.

ಇಲ್ಲಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವರು ಭಕ್ತರ ಮನೋಕಾಮನೆಗಳನ್ನು ಅತ್ಯಂತ ಕಡಿಮೆ ಸಮಯದಲ್ಲಿಯೇ ನೆರವೇರಿಸುತ್ತಿದ್ದ ಕಾರಣ ಗ್ರಾಮವನ್ನು ತ್ವರಿತಾಲಯ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. ಇದು ಶಾಹಿ ಆಳ್ವಿಕೆಯ ಪೂರ್ವದಲ್ಲಿದ್ದ ದೇವಾಲಯ. ತೊರವೆ ಗ್ರಾಮವು ಆಗ ಒಂಬತ್ತು ಲಕ್ಷ ಜನಸಂಖ್ಯೆಯುಳ್ಳ ದೊಡ್ಡ ಪಟ್ಟಣವಾಗಿತ್ತು.

ಒಕ್ಕಳಮಟ್ಟಿ ನರಸಿಂಹ ದೇವರು
ಈಗಿರುವ ಶ್ರೀಲಕ್ಷ್ಮೀ ನರಸಿಂಹ ದೇವರಿಗಿಂತಲೂ ಮೊದಲು ಒಕ್ಕಳಮಟ್ಟಿ ನರಸಿಂಹ ಸ್ವಾಮಿ ದೇವರನ್ನು ಪೂಜಿಸಲಾಗುತ್ತಿತ್ತು. ಸ್ವಾಮಿಗೆ ಪ್ರತಿದಿನವೂ ನಲವತ್ತು ಕೆಜಿ ಹಯಗ್ರೀವವನ್ನು ಸ್ವಲ್ಪವು ಮಡಿಗೆ ಚ್ಯುತಿ ಬರದೆ ಸಮರ್ಪಿಸಬೇಕಿತ್ತು. ಸ್ವಲ್ಪ ಹೆಚ್ಚುಕಮ್ಮಿಯಾದರೂ ಒಕ್ಕಳಮಟ್ಟಿ ನರಸಿಂಹ ಸ್ವಾಮಿ ಶಿಕ್ಷಿಸುತ್ತಾರೆ ಎಂಬುದು ಜನರ ನಂಬಿಕೆಯಾಗಿತ್ತು.

ಅಚಾನಕ್ಕಾಗಿ ಆದ ತಪ್ಪುಗಳಿಗೂ ಶಿಕ್ಷೆಗೆ ಭಕ್ತರನ್ನು ಕಂಡು ಸ್ವತಃ ನರಸಿಂಹ ಸ್ವಾಮಿಯೇ ಮರುಕಪಟ್ಟು, ದೇವಾಲಯದಿಂದ ಹೊರಡಲು ನಿಶ್ಚಯಿಸಿದರಂತೆ. ಅರ್ಚಕರಿಗೆ ಸ್ವಪ್ನದಲ್ಲಿ ಬಂದು ತಮ್ಮನ್ನು ಗುಪ್ತಗಂಗೆಯಲ್ಲಿ ವಿಸರ್ಜನೆ ಮಾಡುವಂತೆ ಆದೇಶಿಸಿದರಂತೆ. ಅರ್ಚಕರು ಆದೇಶದಂತೆ ನಡೆದುಕೊಂಡರು.

ದೇವರ ಮೂರ್ತಿ ಪ್ರತಿಷ್ಠಾಪನೆ
ಒಕ್ಕಳಮಟ್ಟಿ ನರಸಿಂಹ ಸ್ವಾಮಿ ದೇವರನ್ನು ಗುಪ್ತಗಂಗೆಯಲ್ಲಿ ವಿಸರ್ಜನೆ ಮಾಡಿದ ನಂತರ, ಅರ್ಚಕರಿಗೆ ಬರುವ ಭಕ್ತರಿಗೆ ದೇವರು ಎಲ್ಲಿ ಎಂದರೆ ಏನು ಹೇಳಬೇಕು..?’ ಎಂಬ ಚಿಂತೆ ಕಾಡಿತು. ಸ್ವಾಮಿಯನ್ನು ಭಕ್ತಿಯಿಂದ ಪ್ರಾರ್ಥಸಿದಾಗ ಸ್ವಪ್ನದಲ್ಲಿ ಕಾಣಿಸಿಕೊಂಡ ನರಸಿಂಹ ಸ್ವಾಮಿಯು, ವಿಸರ್ಜನೆ ಮಾಡಿದ ಸ್ಥಳದ ಬಳಿ ಬರುವಂತೆ ಹೇಳಿದರು. ಮರುದಿನ ಅರ್ಚಕರೆಲ್ಲ ಗುಪ್ತಗಂಗೆಯಲ್ಲಿ ಸ್ನಾನಮಾಡಿ, ತಪಸ್ಸು ಮಾಡಿದಾಗ ನರಸಿಂಹ ಸ್ವಾಮಿ ವಿಗ್ರಹವು ಮೇಲೆ ಬಂದು ನಾನು ಬರಲಾರೆ, ನನ್ನ ತಮ್ಮನನ್ನು ಕಳಿಸುವೆ. ನೀವು ಹಸಿಮೇವನ್ನು ತೆಗೆದುಕೊಂಡು ಕೃಷ್ಣತೀರದಿಂದ ದಕ್ಷಿಣಕ್ಕೆ ಹೋಗಿರಿ. ಮೇವಿಗೆ ಯಾವಾಗ ಸ್ಪರ್ಶ ಆಗುತ್ತದೆಯೋ ಅದೇ ಸ್ಥಳದಲ್ಲಿ ನನ್ನ ತಮ್ಮನಿರುತ್ತಾನೆ’ ಎಂದು ಹೇಳಿ ಗುಪ್ತಗಂಗೆಯಲ್ಲಿ ಗುಪ್ತರಾದರು. ಅರ್ಚಕರೆಲ್ಲರೂ ಮಡಿಯಿಂದ ಹಸಿಮೇವನ್ನು ಎತ್ತಿನ ಬಂಡಿಯಲ್ಲಿ ತೆಗೆದುಕೊಂಡು, ಕೃಷ್ಣ ತೀರಕ್ಕೆ ಹೊರಟರು. ಸಮೀಪದ ಚಿಮ್ಮಲಗಿ ಗ್ರಾಮದ ದೇಶಪಾಂಡೆ ವಂಶದ ಒಡೆತನದ ಜಮೀನಿನಲ್ಲಿ ಬಂದಾಗ ಮೇವಿಗೆ ಅಗ್ನಿಸ್ಪರ್ಶವಾಗುತ್ತದೆ. ಭೂಮಿಯ ಒಳಗೆ ಶ್ರೀಲಕ್ಷ್ಮೀಸಹಿತನಾಗಿರುವ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿಯ ಮೂರ್ತಿಯು ಸಿಗುತ್ತದೆ. ದೇಶಪಾಂಡೆ ವಂಶಸ್ಥರ ಸ್ವಪ್ನದಲ್ಲಿ ನರಸಿಂಹ ಸ್ವಾಮಿ ಕಂಡು ಅವರೊಂದಿಗೆ ನನ್ನನ್ನು ಕಳುಹಿಸಿ, ತೋರವಿ ಗ್ರಾಮದಲ್ಲಿ ಪ್ರತಿಷ್ಟಾಪನೆಗೊಳ್ಳುವೆ’ ಎಂದು ಹೇಳಿದಾಗ, ಅರ್ಚಕರು ಹಿಂತಿರುಗಿ ತೋರವಿ ಗ್ರಾಮಕ್ಕೆ ಬಂದು, ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಾರೆ. ಹೀಗೆ ಪ್ರತಿಷ್ಠಾಪನೆಗೊಂಡ, ತೋರವಿ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿಯ ಮೂರ್ತಿಯು ವಿಶೇಷವಾಗಿದ್ದು, ಬಲಭಾಗದಲ್ಲಿ ಶ್ರೀಲಕ್ಷ್ಮೀ, ಎಡಭಾಗದಲ್ಲಿ ಪ್ರಹ್ಲಾದನ ಮೂರ್ತಿ ಇದೆ.

ತೋರವಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಿಂದ ಸ್ವಲ್ಪವೇ ದೂರದಲ್ಲಿದೆ ಗುಪ್ತಗಂಗಾ ಎಂಬ ಬಾವಿ. ಆದಿಲ್ ಶಾಹಿಯು ಪಶ್ಚಿಮ ಯುದ್ದದಲ್ಲಿ ವಿಜಯ ಸಾಧಿಸಿ ಹಿಂತಿರುಗುವಾಗ ಗಂಗೆಯು ಸುಲ್ತಾನನಿಗೆ ನಿನ್ನನ್ನು ಹಿಂಬಾಲಿಸುತ್ತೇನೆ. ಆದರೆ ನೀನು ಹಿಂತಿರುಗಿ ನೋಡಿದರೆ ಅದೇ ಸ್ಥಳದಲ್ಲಿ ನೆಲೆಸುತ್ತೇನೆ’ ಎಂದು ಉತ್ತರಿಸುತ್ತಾಳೆ. ಸುಲ್ತಾನನು ತೋರವಿ ಗ್ರಾಮ ಸಮೀಪಿಸಿದಾಗ ಕುತೂಹಲ ತಡೆಯದೆ ಹಿಂದಿರುಗಿ ನೋಡುತ್ತಾನೆ. ಗಂಗೆಯು ಅಲ್ಲಿಯೇ ನೆಲೆಸುತ್ತಾಳೆ. ಎಷ್ಟೇ ಬರಗಾಲ ಬಂದರೂ ಇಲ್ಲಿ ಮಾತ್ರ ಎಂದಿಗೂ ನೀರು ಬತ್ತುವುದಿಲ್ಲ.

ನರಹರಿ ರಚಿತ ತೋರವೆ ರಾಮಾಯಣ
ತೊರವೆಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಜಾಗೃತ ಮತ್ತು ಶಕ್ತಿಯುತವಾದ ಕ್ಷೇತ್ರ. ಇದೇ ಕ್ಷೇತ್ರದಲ್ಲಿ ನರಹರಿಯು ತೋರವೆ ರಾಮಾಯಣ ರಚಿಸುತ್ತಾರೆ. ಈ ಕೃತಿಗೆ ಶ್ರೀಕುಮಾರ ವಾಲ್ಮೀಕಿ ಕೃತಿ ಶ್ರೀ ಬಿರುದನ್ನು ಕೊಡಲಾಗುತ್ತದೆ. ಪುರಂದರದಾಸರು ಇದೇ ಕ್ಷೇತ್ರದಲ್ಲಿ ಐದಾರು ಹಾಡುಗಳನ್ನು ಬರೆದಿದ್ದಾರೆ.

(ಮಾಹಿತಿ ಕೃಪೆ: ವಾಟ್ಸಪ್ ಸ್ನೇಹಿತರು)

Tags: Hindu TempleKannada ArticleSpecial ArticleTempleToraviVijayapuraತೊರವೆ ಲಕ್ಷ್ಮೀ ನರಸಿಂಹ ಸ್ವಾಮಿದೇವಾಲಯಪುರಂದರದಾಸರುಹಯಗ್ರೀವ
Share199Tweet123Send
Previous Post

ನಿರಾಸೆಯೆಂಬುದ ಮರೆತು ಬದುಕಿ ಬಿಡೋಣವೇ

Next Post

ಕೋಟೆನಾಡಿನಲ್ಲಿ ಅದ್ಧೂರಿ ತೀಜ್ ಹಬ್ಬ, ಕುಣಿದು ಕುಪ್ಪಳಿಸಿದ ಯುವತಿಯರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋಟೆನಾಡಿನಲ್ಲಿ ಅದ್ಧೂರಿ ತೀಜ್ ಹಬ್ಬ, ಕುಣಿದು ಕುಪ್ಪಳಿಸಿದ ಯುವತಿಯರು

ಕೋಟೆನಾಡಿನಲ್ಲಿ ಅದ್ಧೂರಿ ತೀಜ್ ಹಬ್ಬ, ಕುಣಿದು ಕುಪ್ಪಳಿಸಿದ ಯುವತಿಯರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಮನೆ ಕಳ್ಳತನ ಪ್ರಕರಣ ತಡೆಗೆ `ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಜಾರಿಗೆ: ಎಸ್‌ಪಿ ನಿಖಿಲ್

May 1, 2026
ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

May 1, 2026
ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

May 1, 2026
ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

May 1, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

May 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL