ಅಮರಾವತಿ: ಆಂಧ್ರಪ್ರದೇಶವನ್ನು ಸ್ವರ್ಗ ಮಾಡುತ್ತೇನೆ ಎಂಬಂತಹ ಮಾತುಗಳನ್ನಾಡುತ್ತಾ, ರಾಷ್ಟçಮಟ್ಟದಲ್ಲಿ ಸುದ್ದಿಯಾಗಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೊಡೆತಟ್ಟಲು ಕೋಟಿಗಟ್ಟಲೆ ಹಣ ವ್ಯಯ ಮಾಡಿದ್ದಾರೆ ಎಂಬ ಮಾಹಿತಿ ಬಹಿರಂಗಗೊಂಡಿದೆ.
ಪ್ರತಿಪಕ್ಷಗಳ ಸಹಕಾರದಲ್ಲಿ ನಾಯ್ಡು ಇಂದು ನವದೆಹಲಿಯಲ್ಲಿ ಮೋದಿ ಸರ್ಕಾರದ ವಿರುದ್ದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಆದರೆ, ಈ ಸತ್ಯಾಗ್ರಹಕ್ಕೆ ಜನರನ್ನು ಕರೆದುತರಲು ನಾಯ್ಡು ಬರೋಬ್ಬರಿ 1.12 ಕೋಟಿ ರೂ. ವ್ಯಯ ಮಾಡಿದ್ದಾರೆ ಎಂದು ವರದಿಯಾಗಿದೆ.
ಪ್ರತಿಭಟನೆಗೆ ಆಂಧ್ರ ಪ್ರದೇಶದಿಂದ ದೆಹಲಿಗೆ ಜನರನ್ನು ಕೊಂಡೊಯ್ಯಲು 2 ವಿಶೇಷ ರೈಲುಗಳನ್ನು ಬುಕ್ ಮಾಡಲಾಗಿದ್ದು, ದಕ್ಷಿಣ ರೈಲ್ವೇ ಇಲಾಖೆಯಿಂದ ತಲಾ 20 ಬೋಗಿಗಳ 2 ರೈಲುಗಳನ್ನು ಬುಕ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮಾಹಿತಿಯಂತೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಶ್ರೀಕಾಕುಳಂ ಜಿಲ್ಲೆಗಳಿಂದ ಅಪಾರ ಪ್ರಮಾಣದ ಕಾರ್ಯಕರ್ತರು ಮತ್ತು ನಾಯಕರು ದೆಹಲಿಗೆ ತೆರಳಿದ್ದು ಕೆಲವು ಎನ್’ಜಿಒಗಳೂ ಕೂಡ ಪಾಲ್ಗೊಂಡಿವೆ ಎನ್ನಲಾಗಿದೆ.
Discussion about this post