Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಗಾನ ಲೋಕದ ಧ್ರುವತಾರೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಬೇರೆಯವರಿಗಿಂತ ವಿಶೇಷ ಏಕೆ ಗೊತ್ತಾ?

ಸಂಗೀತ ಪರ್ವತ, ವಿಶ್ವ ಕಂಡ ದಾಖಲೆಯ ಸ್ವರ ಮಾಂತ್ರಿಕನ ಜನ್ಮ ದಿನದಂದು ಅಕ್ಷರ ನಮನ

June 4, 2022
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಎಸ್.ಪಿ. ಬಾಲಸುಬ್ರಹ್ಮಣ್ಯಂ… ಇಡಿಯ ವಿಶ್ವ ಕಂಡು ಕೇಳರಿಯದ ರೀತಿಯಲ್ಲಿ ಗಾನ ಸಾಮ್ರಾಜ್ಯದ ಸಾಮ್ರಾಟರಾಗಿ ವಿಜೃಂಭಿಸಿ, ದಾಖಲೆಗಳ ಸರದಾರರಾಗಿ ವೈಭವಿಸಿ, ನಾಲ್ಕು ದಶಕಗಳ ಕಾಲ ಭಾರತೀಯ ಸ್ವರ ಲೋಕವನ್ನು ಆಳಿದ ಗಾನ ಮಾಂತ್ರಿಕ. ಬಹುಷಃ ಈ ಹೆಸರು ಕೇಳದ ಯಾವುದೇ ಭಾರತೀಯ ಬಹುತೇಕ ಇರಲಿಕ್ಕಿಲ್ಲ. ಇಂತಹ ಶ್ರೇಷ್ಠ ವ್ಯಕ್ತಿಯ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದ್ದು, ಗಾನ ಗಾರುಡಿಗನ ಜೀವನ ಸಾಧನೆ ಕುರಿತಾಗಿ ಒಂದಷ್ಟು ಮಾಹಿತಿ…

ಆಂಧ್ರಪ್ರದೇಶದ ಚಿತ್ತೂರಿನ ಕೊನೇಟಮ್ಮಪೇಟಾ ಎಂಬಲ್ಲಿನ ಸಂಪ್ರದಾಯಸ್ಥ ಕುಟುಂಬವೊಂದರಲ್ಲಿ 1946ರ ಜೂನ್ 4ರಂದು ಜನಿಸಿದ ಎಸ್’ಪಿಬಿ ವ್ಯವಸ್ಥಿತವಾಗಿ ಸಂಗೀತ ಕಲಿಯಲಿಲ್ಲ. ಹರಿಕಥೆ ಹೇಳುತ್ತಿದ್ದ ತಂದೆ ಎಸ್.ಪಿ. ಸಾಂಬಮೂರ್ತಿಯವರೇ ಅವರಿಗೆ ಪ್ರೇರಣೆ. ಹಾಡುವುದನ್ನು, ಹಾರ್ಮೋನಿಯಂ, ಕೊಳಲುಗಳನ್ನು ತಮ್ಮಷ್ಟಕ್ಕೆ ತಾವು ನುಡಿಸುತ್ತಾ ಸಂಗೀತದ ಪರ್ವತವೇ ಆದರು. ಮುಂದೆ ಮೇರು ಪ್ರಸಿದ್ಧಿ ಪಡೆದ ನಂತರದಲ್ಲಿ ವಿಧೇಯ ವಿದ್ಯಾರ್ಥಿಯಂತೆ ಶಾಸ್ತ್ರೀಯ ಸಂಗೀತವನ್ನೂ ಅಭ್ಯಾಸ ಮಾಡಿದರು.
ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ ಮಾಡಿರುವ ಎಸ್’ಪಿಬಿ, ಗಾಯನದಲ್ಲಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡಿದ್ದಾರೆ.

1966ರ ವರ್ಷದಲ್ಲಿ ಬಾಲು ಅವರು, ಘಂಟಸಾಲಾ ಮತ್ತು ಎಸ್.ಪಿ. ಕೋದಂಡಪಾಣಿ ತೀರ್ಪುಗಾರರಾಗಿದ್ದ ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದರು. ಇಬ್ಬರಿಂದಲೂ ಅವರಿಗೆ ಮೆಚ್ಚುಗೆಯ ಸುರಿಮಳೆಯಾಯಿತು. ಕೋದಂಡಪಾಣಿಯವರು ತಮ್ಮ ತೆಲುಗು ಚಿತ್ರ ’ಶ್ರೀ ಶ್ರೀಶ್ರೀ ಮರ್ಯಾದಾ ರಾಮಣ್ಣ’ದಲ್ಲಿ ಹಾಡಲು ಬಾಲೂಗೆ ಅವಕಾಶ ನೀಡಿದರು. ಬಾಲು ಹೇಳುತ್ತಾರೆ ’ನಾನು ಘಂಟಸಾಲ ಅವರ ಏಕಲವ್ಯ ಶಿಷ್ಯ’.
40 ಸಾವಿರ ಗೀತೆಗಳನ್ನು ಹಾಡಿದ ವಿಶ್ವದ ಏಕೈಕ ಸರದಾರ
ಭಾರತ ಮಾತ್ರವಲ್ಲ ಇಡಿಯ ವಿಶ್ವದ ಚಿತ್ರರಂಗ ಕಂಡ ಸ್ವರ ಸಾಮ್ರಾಟ್ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಸಾಧನೆಗೆ ಅವರೇ ಸಾಟಿ.

ಇಡಿಯ ವಿಶ್ವದಲ್ಲಿ 16ಕ್ಕೂ ಅಧಿಕ ಭಾಷೆಗಳಲ್ಲಿ 40 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ ಏಕೈಕ ಸರದಾರ ಎಂದರೆ ಅದು ಎಸ್’ಪಿಬಿ ಮಾತ್ರ. ಹಿನ್ನೆಲೆ ಗಾಯನ ಮಾತ್ರವಲ್ಲ, ಸಂಗೀತ ನಿರ್ದೇಶಕರಾಗಿ, ಹಲವಾರು ನಾಯಕರಿಗೆ ಮಾತುಗಾರರಾಗಿ, ನಟರಾಗಿ, ನಿರ್ಮಾಪಕರಾಗಿ ಕೂಡಾ ಬಾಲು ಚಿತ್ರರಂಗದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಹಾಸ್ಯ ಪಾತ್ರಗಳಿಗೆ ಹೇಳಿ ಮಾಡಿಸಿದಂತಹ ಶಾರೀರಿಕ ಭಾಷಾಭಿವ್ಯಕ್ತಿ ಅವರಲ್ಲಿರುವುದನ್ನು ಸುಲಭವಾಗಿ ಕಾಣಬಹುದಾಗಿದೆ.

ಅವರ ಒಟ್ಟಾರೆ ಪ್ರಮುಖ ಸಾಧನೆಗಳನ್ನು ಹೇಳುವುದಾದರೆ ಅದು ಅಪರಿಮಿತವಾದುದು. ಬಾಲು ಅವರ ಸಾಧನೆಗೆ ಅವರನ್ನು ಅರಸಿ ನಾಲ್ಕು ಭಾಷೆಗಳಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿಗಳು, ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು, 25 ಬಾರಿ ಆಂಧ್ರಪ್ರದೇಶ ಸರ್ಕಾರದ ’ನಂದಿ’ ಪ್ರಶಸ್ತಿ ಸಂದಿದೆ. 4 ಭಾಷೆಗಳಿಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಏಕೈಕ ವ್ಯಕ್ತಿ ಇವರಾಗಿದ್ದು, ಹಲವು ವಿಶ್ವ ವಿದ್ಯಾಲಯಗಳ ಡಾಕ್ಟರೇಟ್ ಸಂದಿದೆ.

ಒಂದೇ ದಿನ 19 ಹಾಡುಗಳನ್ನು ರೆಕಾರ್ಡ್ ಮಾಡಿದ್ದ ಸ್ವರ ಸಾಮ್ರಾಟ್
ಎಸ್.ಪಿ. ಬಾಲಸುಬ್ರಹ್ಮಣ್ಯಂ ಎಂಬ ಸ್ವರ ಸಾಮ್ರಾಟ್ ಭಾರತೀಯ ಚಿತ್ರರಂಗ ಹಾಗೂ ಗಾನ ಲೋಕ ಕಂಡ ಸಂಗೀತದ ಮೇರು ಪರ್ವತ. ಬಹುಷಃ ಭವಿಷ್ಯದಲ್ಲಿ ಇಂತಹ ಮೇರು ಗಾಯಕರನ್ನು ಭಾರತ ಮತ್ತೆ ಕಾಣಲು ಸಾಧ್ಯವೇ ಇಲ್ಲ ಎಂದರೆ ಅತಿಶಯೋಕ್ತಿಯಲ್ಲ.
ಆಗೊಂದು ಯುಗ, ತೆಲುಗಿನಲ್ಲಿ ಘಂಟಸಾಲ, ತಮಿಳಿನಲ್ಲಿ ಟಿ.ಎಂ. ಸೌಂದರ್ ರಾಜನ್, ಕನ್ನಡದಲ್ಲಿ ಪಿ.ಬಿ. ಶ್ರೀನಿವಾಸ್ ಹೀಗೆ ಒಬ್ಬೊಬ್ಬರೂ ಒಂದೊಂದು ಭಾಷೆಯ ಚಿತ್ರರಂಗದಲ್ಲಿ ಸಾರ್ವಭೌಮರು.

ಬಾಲು ಚಿತ್ರರಂಗಕ್ಕೆ ಬಂದು ಈ ಎಲ್ಲ ಭಾಷೆಗಳಿಗೂ ಸಾರ್ವಭೌಮರಾಗಿಬಿಟ್ಟರು. ಒಮ್ಮೆ ಅವರು ತಮಿಳು ತೆಲುಗಿನಲ್ಲಿ ಒಂದೇ ದಿನದಲ್ಲಿ 19 ಗೀತೆಗಳನ್ನು ಧ್ವನಿ ಮುದ್ರಿಸಿದ್ದರು. ಕನ್ನಡದಲ್ಲಿ ಒಂದೇ ದಿನ 17 ಗೀತೆಗಳನ್ನು ಧ್ವನಿ ಮುದ್ರಿಸಿದ್ದರು, ಹಿಂದಿಯಲ್ಲಿ ಒಂದೇ ದಿನ 16 ಹಾಡುಗಳನ್ನು ಧ್ವನಿಮುದ್ರಿಸಿದ್ದರು. ಇದು ಎಸ್’ಪಿ.ಬಿ ಅವರ ಸಾಮರ್ಥ್ಯ, ಅವರಿಗಿದ್ದ ಬೇಡಿಕೆ, ಅವರಿಗಿರುವ ವೈಶಾಲ್ಯತೆಗಳಿಗಿರುವ ನಿದರ್ಶನ. ಸಂಗೀತ ಪ್ರಧಾನವಾದ ಭಾರತೀಯ ಚಿತ್ರರಂಗದಲ್ಲಿ ಒಂದು ರೀತಿಯಲ್ಲಿ ಹಿನ್ನೆಲೆ ಗಾಯಕರು ಅಭಿನಯಿಸುವವರ ಆತ್ಮವಿದ್ದಂತೆ.

ಇದನ್ನೇ ಡಾ. ರಾಜ್ ಕುಮಾರ್ ಅವರು ಒಮ್ಮೆ ಪಿಬಿಎಸ್ ಬಗ್ಗೆ ಹೇಳುತ್ತಾ ಪಿಬಿಎಸ್ ನನ್ನ ಆತ್ಮ, ನಾನು ಶರೀರ ಎನ್ನುತ್ತಿದ್ದರು. ರಾಜ್’ಕಪೂರ್ ಮುಖೇಶ್ ಬಗ್ಗೆ ಇದನ್ನೇ ಹೇಳುತ್ತಿದ್ದರು. ಹಾವಿನ ದ್ವೇಷ ಹನ್ನೆರಡು ವರುಷ ಎಂದು ಎಸ್.ಪಿ. ಹಾಡಿದಾಗ ವಿಷ್ಣುವರ್ಧನ್ ರಾಮಾಚಾರಿಯಾಗಿಬಿಟ್ಟರು. ಸ್ನೇಹದ ಕಡಲಲ್ಲಿ ಎಂದು ಹಾಡಿದಾಗ ಶ್ರೀನಾಥ್ ಗರಿಗೆದರಿಬಿಟ್ಟರು. ಎಲ್ಲಿರುವೇ ಮನವ ಕಾಡುವ ರೂಪಸಿಯೇ ಎಂದು ಅನಂತ್ ನಾಗ್ ಆಕಾಶಕ್ಕೆ ಹಾರಿದರು.

ನಲಿವಾ ಗುಲಾಬಿ ಹೂವೆ ಎಂದು ಶಂಕರ್ ಭಾವಸ್ಥರಾದರು. ದಕ್ಷಿಣ ಭಾರತದ ರಜನೀಕಾಂತ್, ಕಮಲಹಾಸನ್, ಚಿರಂಜೀವಿ ಹೀಗೆ ಎಪ್ಪತ್ತು ಎಂಭತ್ತರ ದಶಕದಿಂದ ಎರಡು ಸಾವಿರದ ದಶಕದವರೆಗಿನ ಬಹುತೇಕ ಹೀರೋಗಳ ಅಂತರ್ಧ್ವನಿ ಶಕ್ತಿ ಬಾಲು ಅವರದ್ದು. ಅವರ ಧ್ವನಿಯ ಮೋಡಿ ಎಂ.ಜಿ. ರ್ಆ, ಶಿವಾಜಿ ಗಣೇಶನ್, ಎನ್.ಟಿ. ರಾಮರಾವ್, ರಾಜ್ ಕುಮಾರ್, ಅಕ್ಕಿನೇನಿ ಅಂತಹ ಹಿರಿಯರಿಗೆ ಕೂಡಾ ಆಗಾಗ ಇಣುಕಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dr RajkumarIndian MoviesKannada News WebsiteLatest News KannadaS P BalasubrahmanyamsandalwoodSingerSPBಆಂಧ್ರಪ್ರದೇಶಎಸ್.ಪಿ. ಬಾಲಸುಬ್ರಹ್ಮಣ್ಯಂಎಸ್’ಪಿಬಿಗಾನ ಸಾಮ್ರಾಜ್ಯಗಾಯನಚಿತ್ರರಂಗಡಾ. ರಾಜ್ ಕುಮಾರ್ದಕ್ಷಿಣ ಭಾರತಶಾಸ್ತ್ರೀಯ ಸಂಗೀತ
Previous Post

ಹೈದರಾಬಾದ್: ಕಾರಿನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಹಿನ್ನೆಲೆ ಓರ್ವನ ಬಂಧನ

Next Post

ಚಳ್ಳಕೆರೆ: ಸಾಣಿಕೆರೆ ಗ್ರಾಪಂ ಅಧ್ಯಕ್ಷರಾಗಿ ಶೃತಿ ಚಂದ್ರಕಾಂತ್, ಉಪಾಧ್ಯಕ್ಷರಾಗಿ ನಾಗರಾಜ್ ಅವಿರೋಧ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಳ್ಳಕೆರೆ: ಸಾಣಿಕೆರೆ ಗ್ರಾಪಂ ಅಧ್ಯಕ್ಷರಾಗಿ ಶೃತಿ ಚಂದ್ರಕಾಂತ್, ಉಪಾಧ್ಯಕ್ಷರಾಗಿ ನಾಗರಾಜ್ ಅವಿರೋಧ ಆಯ್ಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!