No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಇನ್ಮುಂದೆ ಗುಳೆ ಹೋಗಬೇಡಿ, ರೈತ ತರಬೇತಿ ಕೇಂದ್ರ ಸದುಪಯೋಗ ಮಾಡಿಕೊಳ್ಳಿ: ನಿರ್ಮಲಾ ಸೀತಾರಾಮನ್ ಕರೆ

ಕೊಪ್ಪಳದಲ್ಲಿ ಕೃಷಿ ಸಂಸ್ಕರಣಾ ಘಟಕಕ್ಕಾಗಿ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಉದ್ಘಾಟನೆ

kalpa News by kalpa News
October 15, 2025
in ಕೊಪ್ಪಳ
0
ಇನ್ಮುಂದೆ ಗುಳೆ ಹೋಗಬೇಡಿ, ರೈತ ತರಬೇತಿ ಕೇಂದ್ರ ಸದುಪಯೋಗ ಮಾಡಿಕೊಳ್ಳಿ: ನಿರ್ಮಲಾ ಸೀತಾರಾಮನ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  |

ಮಳೆ ಸರಿಯಾಗಿ ಆಗುವುದಿಲ್ಲ ಎಂದು ಇನ್ಮುಂದೆ ಈ ಭಾಗದ ಜನರು ಗುಳೆ ಹೋಗಬಾರದು. ಬದಲಾಗಿ, ರೈತ ತರಬೇತಿ ಕೇಂದ್ರವನ್ನು ಸದುಪಯೋಗ ಮಾಡಿಕೊಂಡು, ಮುಂದೆ ಬನ್ನಿ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕರೆ ನೀಡಿದರು.

ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ಇವರ ಸಹಯೋಗದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದ ಆದಿಬಸವೇಶ್ವರ ದೇವಸ್ಥಾನ ಹತ್ತಿರದ ಮೆತ್ತಗಲ್ಲ ಗ್ರಾಮದಲ್ಲಿ ಕೃಷಿ ಸಂಸ್ಕರಣಾ ಘಟಕಕ್ಕಾಗಿ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಕೊಪ್ಪಳ ಜಿಲ್ಲೆಯ ರೈತ ಸಹೋದರ ಮತ್ತು ಸಹೋದರಿಯರು ಕೃಷಿ ಸಂಸ್ಕರಣಾ ಘಟಕ ತರಬೇತಿ ಕೇಂದ್ರದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಇದರ ಉದ್ದೇಶ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದರ ಜೊತೆಗೆ ಅವರು ಬೆಳೆದ ಬೆಳೆಗಳಿಗೆ ಮೌಲ್ಯವರ್ಧಿತ ಬೆಲೆ ಸಿಗಬೇಕಿದೆ ಎಂದರು.

ರೈತ ತರಬೇತಿ ಕೇಂದ್ರದಿಂದ ಸಾವಿರಾರು ರೈತರಿಗೆ ಉಪಯೋಗವಾಗುತ್ತದೆ. ಒಳ್ಳೆಯ ಮಾರುಕಟ್ಟೆ ಸಂಪರ್ಕ, ಅವರು ಬೆಳೆದ ಬೆಳೆಗಳ ಮೌಲ್ಯವರ್ಧನೆ ಹೇಗೆ ಮಾಡಬೇಕು ಎಂಬುದು ಸೇರಿದಂತೆ ಇತರೆ ಹಲವಾರು ಮಾಹಿತಿಯನ್ನು ನೀಡಲಾಗುತ್ತದೆ. ಮಳೆ ಸರಿಯಾಗಿ ಆಗದಿದ್ದರೆ ಈ ಭಾಗದ ಜನರು ಬೆಂಗಳೂರು, ಮಂಗಳೂರಿಗೆ ಗೂಳೆ ಹೋಗುತ್ತಾರೆ ಇಂತಹ ತರಬೇತಿ ಕೇಂದ್ರಗಳಿಂದ ಅವರಿಗೆ ಅನುಕೂಲವಾಗಲಿದೆ. ನಮ್ಮ ಪ್ರಧಾನಿಯವರು ಹೇಳುವ ಹಾಗೆ ವೋಕಲ್ ಫಾರ್ ಲೋಕಲಗೆ ಇದೊಂದು ಒಳ್ಳೆಯ ಉದಾಹರಣೆಯಾಗಿದೆ ಎಂದರು.
ಪ್ರಧಾನಿಯವರ ನಿರ್ದೆಶನದಂತೆ ರೈತರ ಕೃಷಿ ಉಪಕರಣ ತೆರಿಗೆ ಈ ಹಿಂದೆ ಇದ್ದ 12 ಪ್ರತಿಶತದಿಂದ ಈಗ 5 ಪ್ರತಿಶತ ಮಾಡಲಾಗಿದೆ. ಇದರಿಂದ ಅವರ ಟ್ಯಾಕ್ಟರ್, ಟಿಲ್ಲರ್ ಸೇರಿದಂತೆ ಇತರೆ ಕೃಷಿ ಉಪಕರಣಗಳ ಖರೀದಿಗೆ ಅನುಕೂಲವಾಗಲಿದೆ. ರೈತರ ಬಲವರ್ಧನೆಗಾಗಿ ಇವುಗಳನ್ನು ಕಡಿಮೆ ಮಾಡಿದ್ದೇವೆ. ಪ್ರಧಾನಮಂತ್ರಿಗಳ ಧನ ಧಾನ್ಯ ಯೋಜನೆಯಿಂದ ಆಹಾರ ಸಂಸ್ಕರಣೆ, ಮೌಲ್ಯವರ್ಧನೆ ಜೊತೆಗೆ ರೈತರ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಈ ಯೋಜನೆ ಅಡಿಯಲ್ಲಿ ದೇಶದ 100 ಜಿಲ್ಲೆಗಳು ಆಯ್ಕೆಯಾಗಿದ್ದು, ಅವುಗಳಲ್ಲಿ ಕೊಪ್ಪಳ ಜಿಲ್ಲೆಯು ಒಂದಾಗಿದೆ ಇದಕ್ಕಾಗಿ ಬಜೆಟನಲ್ಲಿ 255 ಕೋಟಿ ಅನುದಾನ ನೀಡಲಾಗಿದೆ. ಇದರ ಉದ್ದೇಶ ರೈತರಿಗೆ ಗುಣಮಟ್ಟದ ಬೀಜದ ಜೊತೆಗೆ ಹೊಸ ತಂತ್ರಜ್ಞಾನ ಅವರಿಗೆ ತಲುಪಿಸುವುದಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದಕ್ಕೆ ನನಗೆ ಅತ್ಯಂತ ಸಂತೋಷವಾಗುತ್ತಿದೆ. ಕೊಪ್ಪಳ ಜಿಲ್ಲೆ ಹನುಮ ಜನ್ಮಸ್ಥಳ ಅಂಜನಾದ್ರಿ, ಕಿನ್ನಾಳ ಕಲೆಗಳ ತವರು, ಕೊಪ್ಪಳದ ಜನರಿಗೆ ಇಂದು ಒಳ್ಳೆಯ ಅವಕಾಶ ಸಿಕ್ಕಿದೆ. ಕರ್ನಾಟಕದಿಂದಲೇ ನಾನು ರಾಜ್ಯಸಭಾ ಸದಸ್ಯಯಾಗಿದ್ದೇನೆ ಎಂದರು.

ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಈ ತರಬೇತಿ ಕೇಂದ್ರಗಳನ್ನು ಮಾಡಲಾಗಿದೆ. ಇದರಿಂದ ರೈತರಿಗೆ ಪುಡ್ ಪ್ರೋಸೆಸಿಂಗ್, ಪ್ಯಾಕೇಜ್ ಜೊತೆಗೆ ಮಾರ್ಕೆಟಿಂಗ್ ಸೌಲಭ್ಯಕ್ಕೆ ಅನುಕೂಲವಾಗಲಿದೆ. ನಮ್ಮೊಂದಿಗೆ ನಬಾರ್ಡ್ ಪರಿಣಿತರು ಇದ್ದಾರೆ. ಅನ್ನದಾತರ ಭವಿಷ್ಯಕ್ಕಾಗಿ ನಾವು ಈ ಕೆಲಸ ಮಾಡಬೇಕಿದೆ. ಕಲ್ಯಾಣ ಕರ್ನಾಟಕ ಭಾಗವನ್ನು ಕರ್ನಾಟಕದ ಅಕ್ಷಯ ಪಾತ್ರೆ ಎಂದು ಕರೆಯುತ್ತಾರೆ. ಗಂಗಾವತಿ ಭಾಗದಲ್ಲಿ ತುಂಗಭದ್ರಾ ನದಿಯಿಂದ ಹೆಚ್ಚಿನ ನೀರಾವರಿ ಇದೆ. ಈ ತರಬೇತಿ ಕೇಂದ್ರಗಳ ಸದುಪಯೋಗವನ್ನು ರೈತರು, ಮಹಿಳೆಯರು ಹಾಗೂ ಸಾರ್ವಜನಿಕರು ಪಡೆದುಕೊಳ್ಳಬೇಕು. ಅವಶ್ಯಕತೆ ಇರುವಲ್ಲಿ ಇಂತಹ ಇನ್ನಷ್ಟು ತರಬೇತಿ ಕೇಂದ್ರಗಳನ್ನು ನಬಾರ್ಡ್ ನವರು ಸ್ಥಾಪಿಸಬೇಕು. ರಾಜ್ಯ ಸರ್ಕಾರಕ್ಕು ಧನ್ಯವಾದಗಳನ್ನು ತಿಳಿಸುತ್ತೆನೆ. ಜಿಲ್ಲಾಡಳಿತದಿಂದಲು ಒಳ್ಳೆಯ ಸಹಕಾರ ಸಿಕ್ಕಿದೆ. ರೈತರ ಲಾಭಕ್ಕಾಗಿ ಈ ಕೆಲಸ ಆಗಬೇಕಿದೆ ಎಂದರು.
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)ನ ಅಧ್ಯಕ್ಷರಾದ ಕೆ.ವಿ. ಶಾಜಿ ಮಾತನಾಡಿ, ಕೃಷಿ ತರಬೇತಿ ಕೇಂದ್ರ ರೈತರ ಜೀವನದಲ್ಲಿ ಪರಿವರ್ತನೆ ತರಲು ನಬಾರ್ಡ್ ಕೈಗೊಂಡ ಪ್ರಮುಖ ಹೆಜ್ಜೆಯಾಗಿದೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಈ ಹಿಂದೆ ಕಲ್ಯಾಣ ಕರ್ನಾಟಕ ಪ್ರದೇಶದ ರೈತರಿಗಾಗಿ ಈ ಯೋಜನೆಯ ಕನಸು ಕಂಡಿದ್ದರು. ಇಂದು ಅದು ನಿಜವಾಗುತ್ತಿದೆ. ಅವರ ಆಶಯದಂತೆ ನಬಾರ್ಡ್ ಈ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದೆ ಎಂದರು.

ರೈತರು ಭಾರತವನ್ನು ಆಹಾರದ ಕಣಜವನ್ನಾಗಿ ಮಾಡುತ್ತಿದ್ದಾರೆ. ಈ ಯೋಜನೆಯ ಉದ್ದೇಶ ಕೃಷಿಯನ್ನು ಅಗ್ರೋಬಿಜಿನೆಸ್ ಆಗಿ ರೂಪಾಂತರಿಸುವುದಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಗೂ ಸಹಕಾರ ನೀಡುವುದಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಅನೇಕ ಜಿಲ್ಲೆಗಳಲ್ಲಿ ಅಗ್ರೋ ಪ್ರೋಸೆಸಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಹಣಕಾಸು ಸಚಿವರು ಎಂಪಿಎಲ್’ಎಡಿಎಸ್ ನಿಧಿಯಿಂದ ಹಣ ನೀಡಿರುವುದು ಪ್ರಶಂಸನೀಯವಾಗಿದೆ. ಕೊಪ್ಪಳದಲ್ಲಿನ ಈ ಕೇಂದ್ರವು ರೈತರ ಕೌಶಲ್ಯಾಭಿವೃದ್ಧಿ, ಸಾಮರ್ಥ್ಯ ನಿರ್ಮಾಣ ಹಾಗೂ ಮೂಲಸೌಕರ್ಯಕ್ಕೆ ಸಹಾಯಕವಾಗಲಿದೆ ಎಂದರು.

ಗಂಗಾವತಿ ಶಾಸಕ ಜಿ. ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಕರ್ನಾಟಕ ಸರ್ಕಾರದ ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ.ಆರ್. ವಿಶಾಲ, ನಬಾರ್ಡ್ ಡೆಪಿಟ್ಯು ಡೈರೆಕ್ಟರ್ ಎ.ಕೆ. ಸೂದ್, ವನಬಳ್ಳಾರಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಂಬಮ್ಮ ಶ್ರೀಕಂಠ ಹುಲಸನಹಟ್ಟಿ, ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೇರಿದಂತೆ ಹಲವು ಜನಪ್ರತಿನಿಧಿಗಳು, ಕೃಷಿ ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ಬೆಂಗಳೂರಿನ ಅಧಿಕಾರಿಗಳು, ಇರಕಲ್ಲಗಡದ ಗವಿಸಿದ್ದೇಶ್ವರ ರೈತ ಉತ್ಪಾದಕರ ಕಂಪನಿ ಲಿಮಿಟೆಡ್ ಪದಾಧಿಕಾರಿಗಳು ಮತ್ತು ವಿವಿಧ ಇತರೆ ಇಲಾಖೆಗಳ ಅಧಿಕಾರಿಗಳು, ರೈತರು, ಮೆತಗಲ್ ಗ್ರಾಮಸ್ಥರು ಹಾಗೂ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

 

Tags: Agro-processing plantBayalu Seeme NewsKannada News WebsiteKoppalaLatest News KannadaNABARDಕೃಷಿ ಮತ್ತು ಗ್ರಾಮೀಣಾಭಿವೃದ್ದಿ ರಾಷ್ಟ್ರೀಯ ಬ್ಯಾಂಕ್ಕೃಷಿ ಸಂಸ್ಕರಣಾ ಘಟಕಕೊಪ್ಪಳಗಂಗಾವತಿಜಿ. ಜನಾರ್ಧನ ರೆಡ್ಡಿನಬಾರ್ಡ್ನಿರ್ಮಲಾ ಸೀತಾರಾಮನ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಮಸ್ಯೆ ಹೇಳಲು ಬಂದ ದಲಿತ ಯುವಕನ ಮೇಲೆ ಹಲ್ಲೆ | ಪ್ರತಿಭಟನೆ | ಪಿಎಸ್’ಐ ಅಮಾನತು

Next Post

ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025: ವೀಕೆಂಡ್’ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

kalpa News

kalpa News

Next Post
ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025: ವೀಕೆಂಡ್’ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025: ವೀಕೆಂಡ್'ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL