ಬೆಂಗಳೂರು: ನಿಮ್ಮ ಮೊಗದಲ್ಲಿದ್ದ ಭವನೆಯೇ ನಿಮ್ಮ ಮನದಲ್ಲಿನ ದುಃಖವನ್ನು ವ್ಯಕ್ತಪಡಿಸುತ್ತಿತ್ತು. ಆದರೆ, ಈ ಹಿನ್ನಡೆಗಾಗಿ ನೀವು ಧೈರ್ಯಗೆಡುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾವಿದ್ದೇವೆ, ಇಡಿಯ ದೇಶವೇ ಇದೆ ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆತ್ಮಸ್ಥೈರ್ಯ ತುಂಬಿದ್ದಾರೆ.
ಇಸ್ರೋ ಕಂಟ್ರೋಲ್ ಸೆಂಟರ್’ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಪ್ರಯತ್ನವನ್ನು ಇಡೀ ಭಾರತವೇ ಕೊಂಡಾಡುತ್ತಿದೆ. ಅಡೆ ತಡೆಗಳಿಂದ ನಮ್ಮ ಉತ್ಸಾಹವೇನು ಕಡಿಮೆಯಾಗಲಿಲ್ಲ, ಬದಲಾಗಿ ಹೆಚ್ಚಾಗಿದೆ. ದೇಶದ ಪ್ರಗತಿಗೆ ಅತೀ ದೊಡ್ಡ ಕೊಡುಗೆ ನೀಡಿದ್ದೀರಾ, ಧೈರ್ಯಗೆಡಬೇಡಿ ಎಂದರು.ಈ ದಿನದ ಬೆಳವಣಿಗೆ ತಾತ್ಕಾಲಿಕೆ ಹಿನ್ನಡೆಯೇ ಹೊರತು ಸೋಲಲ್ಲ. ನಿಮ್ಮ ಮನಗೊಳಗಿನ ದುಃಖ ನಿಮ್ಮ ಮೊಗದಲ್ಲೇ ಕಾಣುತ್ತಿದೆ. ಆದರೆ ನಿಮ್ಮ ಸಾಧನೆಗೆ ನಾವು ಹೆಮ್ಮೆ ಪಡುತ್ತೇವೆ ಎಂದರು.
India is proud of our scientists! They’ve given their best and have always made India proud. These are moments to be courageous, and courageous we will be!
Chairman @isro gave updates on Chandrayaan-2. We remain hopeful and will continue working hard on our space programme.
— Narendra Modi (@narendramodi) September 6, 2019
ಅಲ್ಲದೇ, ನಿಮ್ಮ ಈ ಶ್ರಮ ದೇಶಕ್ಕೆ ಸಾಕಷ್ಟು ಪಾಠ ಕಲಿಸಿದೆ. ನನ್ನ ಕಡೆಯಿಂದ ನಿಮಗೆ ಶುಭ ಕೋರುತ್ತೇನೆ. ನೀವು ನಿಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸಿದ್ದೀರಿ. ನಾನು ನಿಮ್ಮ ಬೆಂಬಲಕ್ಕೆ ನಿಂತಿದ್ದೇನೆ. ನಿಮ್ಮ ಬೆಂಬಲಕ್ಕೆ ಇಡೀ ದೇಶವಿದ್ದು, ನಿಮ್ಮ ಬಗ್ಗೆ ಹೆಮ್ಮೆ ಪಡುತ್ತದೆ. ನಾವು ಧೈರ್ಯದಿಂದ ಮುನ್ನಡೆಯೋಣ. ಈ ಪ್ರಯತ್ನದಿಂದ ಚಂದ್ರನನ್ನು ಮುಟ್ಟುವ ಆಸೆ ಮತ್ತಷ್ಟು ಗಟ್ಟಿಯಾಗಿದೆ ಎಂದರು.
Addressing our hardworking space scientists. Watch. https://t.co/rPRfGBQLJQ
— Narendra Modi (@narendramodi) September 7, 2019
ಭಾರತದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಚಂದ್ರಯಾನ-2 ಸುಮಾರು 48 ದಿನಗಳ ಸುದೀರ್ಘ ಪ್ರಯಾಣದ ನಂತರ ನಿನ್ನೆ ತಡರಾತ್ರಿ 27 ಕಿಲೋ ಗ್ರಾಂ ತೂಕದ ಪ್ರಗ್ಯಾನ್ ರೋವರ್ ಅನ್ನು ತನ್ನೊಡಳಲ್ಲಿ ಇರಿಸಿಕೊಂಡಿದ್ದ 1471 ಕಿಲೋ ಗ್ರಾಂ ತೂಕದ ವಿಕ್ರಂ ಲ್ಯಾಂಡರ್’ ಯಶಸ್ವಿಯಾಗಿ ಚಂದಿರನ ದಕ್ಷಿಣ ಧ್ರುವದ ಉದ್ದೇಶಿತ ಪ್ರದೇಶದಲ್ಲಿ ಇಳಿಯುವ ಹಂತದಲ್ಲಿ ಕೊನೇ ಕ್ಷಣದಲ್ಲಿ ನಿಯಂತ್ರಣ ಕೇಂದ್ರದಿಂದ ತನ್ನ ಸಂಪರ್ಕವನ್ನು ಕಡಿದುಕೊಂಡಿತ್ತು. ಇದು ತಮ್ಮ ವರ್ಷಗಳ ಕನಸು ಹಾಗೂ ಪ್ರಯತ್ನವನ್ನು ಸಾಕಾರಗೊಳಿಸುವಲ್ಲಿ ಹಿನ್ನಡೆಯಾದ ಕಾರಣ ಇಸ್ರೋ ವಿಜ್ಞಾನಿಗಳಲ್ಲಿ ನಿರಾಸೆ ಮೂಡಿಸಿದೆ.
This is Mission Control Centre. #VikramLander descent was as planned and normal performance was observed up to an altitude of 2.1 km. Subsequently, communication from Lander to the ground stations was lost. Data is being analyzed.#ISRO
— ISRO (@isro) September 6, 2019
ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಇಳಿಯುವ ಮುನ್ಸೂಚನೆ ನೀಡಿತಾದರೂ, ಲ್ಯಾಂಡಿಂಗ್’ಗೆ ಇನ್ನೂ ಕೇವಲ 2.1 ಕಿಮೀ ಅಂತರವಿದ್ದಾಗ ಸಿಗ್ನಲ್ ಕಡಿತವಾಯಿತು. ಹೀಗಾಗಿ ನಿಯಂತ್ರಣ ಕೊಠಡಿಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
Watch Live: Honorable Prime Minister Shri. Narendra Modi Addressing the Nation https://t.co/SAGMyi1Nkp
— ISRO (@isro) September 7, 2019
ವಿಜ್ಞಾನಿಗಳು ವಿಕ್ರಮ್ ಲ್ಯಾಂಡರ್ ಅನ್ನು ಸಂಪರ್ಕಿಸುವ ಸತತ ಪರಿಶ್ರಮ ಪಟ್ಟರಾದರೂ ಸಾಧ್ಯವಾಗಲಿಲ್ಲ. ಅಂತಿಮವಾಗಿ ಇಸ್ರೋ ಅಧ್ಯಕ್ಷ ಕೆ. ಶಿವನ್ ವಿಕ್ರಮ್ ಲ್ಯಾಂಡರ್’ನ ಸಂಪರ್ಕ ಕಡಿತವಾಗಿರುವ ಕುರಿತು ಘೋಷಣೆ ಮಾಡಿದರು.
Discussion about this post