No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅಖಿಲ ಕರ್ನಾಟಕ ತೃತೀಯ ಕವಿ-ಕಾವ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ವಸುಂಧರಾ ಭೂಪತಿ ಆಯ್ಕೆ

kalpa News by kalpa News
December 18, 2020
in Small Bytes, ಬಳ್ಳಾರಿ, ಹಾಸನ
0
ಅಖಿಲ ಕರ್ನಾಟಕ ತೃತೀಯ ಕವಿ-ಕಾವ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ವಸುಂಧರಾ ಭೂಪತಿ ಆಯ್ಕೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹಾಸನ/ಬಳ್ಳಾರಿ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ.) ಕೇಂದ್ರ ಸಮಿತಿಯು ಬಳ್ಳಾರಿ ಜಿಲ್ಲಾ ಘಟಕದ ಸಹಕಾರದಲ್ಲಿ 2021 ಮಾರ್ಚಿ ಮಾಹೆಯಲ್ಲಿ ಹಮ್ಮಿಕೊಳ್ಳಲಿರುವ ಅಖಿಲ ಕರ್ನಾಟಕ ತೃತೀಯ ಕವಿ-ಕಾವ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಾಡಿನ ಹಿರಿಯ ಸಾಹಿತಿ ಡಾ. ವಸುಂಧರಾ ಭೂಪತಿಯವರು ಸರ್ವಾನುಪತದಿಂದ ಆಯ್ಕೆಯಾಗಿದ್ದಾರೆ ಎಂದು ಸಂಸ್ಥಾಪಕ ಅಧ್ಯಕ್ಷರಾದ ಕೊಟ್ರೇಶ್ ಎಸ್.ಉಪ್ಪಾರ್ ತಿಳಿಸಿದ್ದಾರೆ.

ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮ್ಮೇಳನದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಡೆದ ರಾಜ್ಯಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಪದಾಧಿಕಾರಿಗಳು, ವಿವಿಧ ಜಿಲ್ಲಾಧ್ಯಕ್ಷರುಗಳ ಸಮ್ಮುಖದಲ್ಲಿ ಚರ್ಚಿಸಲಾಗಿ ಸಮ್ಮೇಳನದ ಸರ್ವಾಧ್ಯಕ್ಷತೆಗೆ ನಾಡಿನ ಪ್ರಸಿದ್ಧ ಸಾಹಿತಿಗಳಾದ ಡಾ. ವಿನಯಾ ಒಕ್ಕುಂದ, ಡಾ. ಮಲ್ಲಿಕಾ ಘಂಟಿ ಹಾಗೂ ಡಾ. ವಸುಂಧರಾ ಭೂಪತಿ ಅವರ ಹೆಸರುಗಳು ಪ್ರಸ್ತಾಪವಾದರೂ ಅಂತಿಮವಾಗಿ ಬಹುಮತದ ನಿರ್ಣಯದಂತೆ ಡಾ. ವಸುಂಧರಾ ಭೂಪತಿಯವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಸಮ್ಮೇಳನವನ್ನು 2021ರ ಮಾರ್ಚಿ ಮಾಹೆಯಲ್ಲಿ ಪ್ರಸಿದ್ದ ಪ್ರವಾಸಿ ತಾಣವಾದ ಹಂಪಿಯಲ್ಲಿ ಹಮ್ಮಿಕೊಳ್ಳಲಾಗುವುದು ಎಂದರು.

ರಾಜ್ಯ ಕಾರ್ಯದರ್ಶಿ ಪಿ.ದಿವಾಕರ ನಾರಾಯಣ ಮಾತನಾಡಿ, ನಮ್ಮ ಸಾಹಿತ್ಯ ವೇದಿಕೆಯು ಈಗಾಗಲೇ 2019 ರಲ್ಲಿ ಸಕಲೇಶಪುರದಲ್ಲಿ ಹಿರಿಯ ಸಾಹಿತಿ ಹಾಡ್ಲಹಳ್ಳಿ ನಾಗರಾಜ್ ಅವರ ಸರ್ವಾಧ್ಯಕ್ಷತೆಯಲ್ಲಿ ಅಖಿಲ ಕರ್ನಾಟಕ ಪ್ರಥಮ ಕವಿ-ಕಾವ್ಯ ಸಮ್ಮೇಳನವನ್ನು ಹಾಗೂ 2020 ರಲ್ಲಿ ಬೀದರ ನಗರದಲ್ಲಿ ಹಿರಿಯ ಸಾಹಿತಿ ಡಾ. ಎಂ.ಜಿ.ದೇಶಪಾಂಡೆಯವರ ಸರ್ವಾಧ್ಯಕ್ಷತೆಯಲ್ಲಿ ಅಖಿಲ ಕರ್ನಾಟಕ ದ್ವಿತೀಯ ಕವಿ-ಕಾವ್ಯ ಸಮ್ಮೇಳವನ್ನು ಹಾಗೂ ಹಲವಾರು ತಾಲ್ಲೂಕು ಸಾಹಿತ್ಯ ಸಮ್ಮೇಳನಗಳನ್ನು ಹಮ್ಮಿಕೊಂಡು ಯಶಕಂಡಿದೆ. ಇಂದು ಪ್ರಸ್ತಾಪವಾದ ಮೂವರೂ ಸಹ ಅಖಿಲ ಭಾರತ ಸಮ್ಮೇಳನಕ್ಕೆ ಅರ್ಹರು. ಪ್ರಸ್ತುತ ಡಾ. ವಸುಂಧರಾ ಭೂಪತಿಯವರು ನಮ್ಮ ಬಳ್ಳಾರಿ ಜಿಲ್ಲೆಯವರೆನ್ನುವುದು ನಮ್ಮೀ ಸಂತಸವನ್ನು ಇಮ್ಮಡಿಗೊಳಿಸಿದೆ. ಡಾ. ವಸುಂಧರಾ ಭೂಪತಿಯವರು ವೈಧ್ಯೆಯಾಗಿ, ಸಾಹಿತಿಯಾಗಿ, ಸಂಘಟಕಿಯಾಗಿ, ಸಾಮಾಜಿಕ ಹೋರಾಟಗಾರ್ತಿಯಾಗಿ, ಅಂಕಣಗಾರ್ತಿಯಾಗಿ ಪ್ರಸಿದ್ಧಿ ಪಡೆದವರು ಎಂದರು.ಬಳ್ಳಾರಿ ಜಿಲ್ಲೆಯವರಾದ ಇವರು ಈಗಾಗಲೇ 70 ಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ. ಇವರು ರಚಿಸಿದ “ಶುರುವಾಗಲಿ ಕ್ರಾಂತಿ” ಕವಿತೆ ಮಂಗಳೂರು ವಿವಿಯಲ್ಲಿ ಪಠ್ಯವಾದರೆ, “ಆಹಾರ ಮತ್ತು ಮನಸ್ಸು” ಲೇಖನ ವಿಜಯಪುರದ ಅಕ್ಕಮಹಾದೇವಿ ವಿವಿಯಲ್ಲಿ ಪಠ್ಯವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಕಾವಾ ಪಠ್ಯಕ್ರಮದಲ್ಲಿ “ಮಹಿಳೆಯರ ಕಳ್ಳಸಾಗಾಣಿಕೆ” ಲೇಖನ ಅಳವಡಿಸಲಾಗಿದೆ. ಕರ್ನಾಟಕ ಲೇಖಕಿಯರ ಬಳಗದ ಅಧ್ಯಕ್ಷೆಯಾಗಿ, ಕರ್ನಾಟಕ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. 2015 ರಲ್ಲಿ ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. 2018 ರಲ್ಲಿ ಬಹ್ರೆನ್‍ನಲ್ಲಿ ನಡೆದ ಪ್ರಥಮ ಅಂತರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದರು. 2019 ರಲ್ಲಿ ಅಬುದಾಬಿಯಲ್ಲಿ ನಡೆದ 15 ನೇ ವಿಶ್ವ ಕನ್ನಡ ಸಂಸ್ಕøತಿ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿದ್ದರು. ಇವರ ಸಾಹಿತ್ಯ, ಸಾಮಾಜಿಕ ಹಾಗೂ ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಯುನಿಸೆಫ್ ಪತ್ರಿಕೋದ್ಯಮ ಪ್ರಶಸ್ತಿ, ಶ್ರೇಷ್ಠ ಲೇಖಕಿ ಪುರಸ್ಕಾರ, ಅಕಲಂಕ ಪ್ರಶಸ್ತಿ, ಶ್ರೇಷ್ಠ ವಿಜ್ಞಾನ ಸಂವಹನಕಾರ ರಾಜ್ಯ ಪ್ರಶಸ್ತಿ, ರಾಜ್ಯ ಪರಿಸರ ಪ್ರಶಸ್ತಿ, ಮಾತೋಶ್ರೀ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ, ಡಾ. ಪಿ.ಎಸ್.ಶಂಕರ್ ವೈದ್ಯ ಸಾಹಿತ್ಯ ಪ್ರಶಸ್ತಿ, ವಿಶ್ವೇಶ್ವರಯ್ಯ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಸೀತಾಸುತ ಪ್ರಶಸ್ತಿ ಸೇರಿದಂತೆ ಹಲವಾರು ಗೌರವ ಸನ್ಮಾನಗಳು ದೊರೆತಿವೆ ಎಂದರು.

ಆಯ್ಕೆ ಸಂದರ್ಭದಲ್ಲಿ ರಾಜ್ಯ ಎಚ್.ಎಸ್. ಬಸವರಾಜ್, ರಾಜ್ಯ ಸಂಘಟನಾ ಕಾರ್ಯದರ್ಶಿ ವಾಸು ಸಮುದ್ರವಳ್ಳಿ, ಬಳ್ಳಾರಿ ಜಿಲ್ಲಾಧ್ಯಕ್ಷ ಸತ್ಯಮೂರ್ತಿ, ಜಿಲ್ಲಾ ಉಪಾಧ್ಯಕ್ಷೆ ಡಾ. ಅಕ್ಕಮಹಾದೇವಿ, ತುಮಕೂರು ಜಿಲ್ಲಾಧ್ಯಕ್ಷ ಪ್ರಮೋದ್ ಜಿ.ಸಿ, ಕೊಪ್ಪಳ ಜಿಲ್ಲಾಧ್ಯಕ್ಷೆ ಅನಸೂಯ ಜಹಗೀರದಾರ, ಶಿವಮೊಗ್ಗ ಜಿಲ್ಲಾಧ್ಯಕ್ಷೆ ಕುಮುದ ಬಿ. ಸುಶೀಲಪ್ಪ, ಬಳ್ಳಾರಿ ಜಿಲ್ಲಾ ಕಾರ್ಯದರ್ಶಿ ಎನ್.ನಾಗರಾಜ್, ಹೊಸಪೇಟೆ ತಾಲ್ಲೂಕು ಅಧ್ಯಕ್ಷ ಪಿ. ರಾಮಚಂದ್ರ, ಕೂಡ್ಲಿಗಿ ತಾಲ್ಲೂಕು ಅಧ್ಯಕ್ಷ ಪ್ರಕಾಶ್ ಜಿ.ಆರ್, ಹಗರಿಬೊಮ್ಮನಹಳ್ಳಿ ತಾಲ್ಲೂಕು ಅಧ್ಯಕ್ಷೆ ಜಯಮ್ಮ ಮತ್ತಿಹಳ್ಳಿ, ಜಿಲ್ಲಾ ಪದಾಧಿಕಾರಿಗಳಾದ ಟಿ. ಮಂಜುನಾಥ ಸ್ವಾಮಿ, ಎಸ್.ಪರಶುರಾಮಪ್ಪ, ತಾಂತ್ರಿಕ ವಿಭಾಗದ ರಾಜ್ಯ ಸಹಾಯಕರಾದ ನಿರಂಜನ್ ಎ.ಸಿ. ಬೇಲೂರು, ವಿ.ಶ್ರೀಧರ್, ಬಿ.ವೆಂಕಟೇಶ್, ಡಾ. ಕೃಷ್ಣವೇಣಿ ಆರ್.ಗೌಡ, ಸವಿತಾ ಕೃಷ್ಣರಾವ್, ಡಾ.ಗಿರಿಜಾ, ಕ್ಯಾದಿಗೆಹಾಳ್ ಉದೇದಪ್ಪ, ಮಾರೆಪ್ಪನಾಯಕ ಸೇರಿದಂತೆ ವಿವಿಧ ಜಿಲ್ಲೆಯ ಜಿಲ್ಲಾಧ್ಯಕ್ಷರುಗಳು ಹಾಗೂ ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsBellaryDr. Vasundhara BhupathiHassanKannada News WebsiteLatest News Kannadaಡಾ. ವಸುಂಧರಾ ಭೂಪತಿಬಳ್ಳಾರಿಮಂಗಳೂರುಹಾಸನ
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿ: ಡಿ. 18, 19, 21 ರಂದು ಸ್ನಾತಕೋತ್ತರ ಪದವಿ ಪ್ರವೇಶಾತಿ ಕೌನ್ಸಿಲಿಂಗ್

Next Post

ಸಾರ್ವಜನಿಕ ಸ್ವತ್ತು ಅತಿಕ್ರಮಣ ತೆರವು ಕಾರ್ಯ ಚುರುಕುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

kalpa News

kalpa News

Next Post
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಸಾರ್ವಜನಿಕ ಸ್ವತ್ತು ಅತಿಕ್ರಮಣ ತೆರವು ಕಾರ್ಯ ಚುರುಕುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL